September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.13: ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದ ಬಲಿ ಉತ್ಸವ

ಗುರುವಾಯನಕೆರೆ: ಕುವೆಟ್ಟು ಗ್ರಾಮ ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲಿನಲ್ಲಿ ದೊಂಪದಬಲಿ ಉತ್ಸವ ಸಮಿತಿ ಇದರ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಕಾರಣಿಕ ದೈವ ಶ್ರೀ ಪಿಲಿಚಾಮುಂಡಿ ದೈವದ ದೊಂಪದ ಬಲಿ ಉತ್ಸವವು ಡಿ.13 ರಂದು ಸಂಜೆ 6ರಿಂದ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಶಿವಾಜಿರಾವ್ ಗದ್ದೆಮನೆ ಅವರು ತಿಳಿಸಿದ್ದಾರೆ.


ಅಂದು ಸಂಜೆ 5ಕ್ಕೆ ಪಾಡ್ಯಾರುಬೀಡು ಮನೆಯಿಂದ ಭವ್ಯವಾದ ಮೆರವಣಿಗೆಯಲ್ಲಿ ದೈವದ ಭಂಡಾರವನ್ನು ಪಿಲಿಚಾಮುಂಡಿ ಕಲ್ಲಿಗೆ ತರಲಾಗುವುದು. ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 7 ಗಂಟೆಯ ಬಳಿಕ ಕಾರಣಿಕ ದೈವ ಶ್ರೀ ಪಿಲಿಚಾಮುಂಡಿ ದೈವದ ದೊಂಪದಬಲಿ ಉತ್ಸವ ವಿಜೃಂಭಣೆಯಿಂದ ನಡೆಯಲಿದೆ.

ಸಮಿತಿಯ ಗೌರವಾಧ್ಯಕ್ಷರಾಗಿ ಪ್ರವೀಣ್ ಕುಮಾರ್ ಅಜ್ರಿ ಅನುವಂಶೀಯ ಆಡಳಿತದಾರರು ಪಾಡ್ಯಾರುಬೀಡು, ಶ್ರೀನಿವಾಸ ಅಸ್ರಣ್ಣರು ಮೂಡುಮನೆ, ಎ. ರಾಜಶೇಖರ ಶೆಟ್ಟಿ ಚಾವಡಿ ನಾಯಕರು ಅಳದಂಗಡಿ ಅರಮನೆ, ವಿತೇಶ್ ಬಂಗೇರ ಪ್ರಧಾನ ಕಾರ್ಯದರ್ಶಿ, ದೀಕ್ಷಿತ್ ವರಕಬೆ ಕಾರ್ಯದರ್ಶಿ, ನಾರಾಯಣ ಆಚಾರ್ಯ ಬರಾಯ ಕೋಶಾಧಿಕಾರಿ ಹಾಗೂ ಸರ್ವ ಸದಸ್ಯರು ದೊಂಪದಬಲಿ ಉತ್ಸವ ಸಮಿತಿ ಮತ್ತು ಊರಿನ ನಾಗರಿಕರು ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸುತ್ತಿದ್ದಾರೆ. ಅನ್ನಸಂತರ್ಪಣೆ ಇರುವುದರಿಂದ ಭಕ್ತರು ಅಕ್ಕಿ, ತೆಂಗಿನಕಾಯಿ, ತರಕಾರಿಗಳನ್ನು ನೀಡಬಹುದು. ಪ್ರತಿಮನೆಯವರು ಕನಿಷ್ಠ2 ತೆಂಗಿನಕಾಯಿ, 2 ಎಳನೀರು, 1ಸೇರು ಅಕ್ಕಿ, ಎಳ್ಳೆಣ್ಣೆ ಹಾಗೂ ಹೆಚ್ಚಿನ ಧನ ಸಹಾಯವನ್ನು ನೀಡಿ, ಸಹಕರಿಸುವಂತೆ ವಿನಂತಿಸಲಾಗಿದೆ.

Related posts

ಬೆಳ್ತಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಜಿ. ಶೀಲಾವತಿ ಅವರಿಗೆ ಪಿಎಚ್. ಡಿ. ಪದವಿ

Suddi Udaya

ರಾಷ್ಟ್ರೀಯ ಸಾಂಸ್ಕ ತಿಕ ಪ್ರತಿಭಾಶೋಧ ವಿದ್ಯಾರ್ಥಿ ವೇತನಕ್ಕೆ ಶಿರ್ಲಾಲುವಿನ ಸಾನ್ವಿ ಸಾಲಿಯಾನ್ ಆಯ್ಕೆ

Suddi Udaya

ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರತಿಷ್ಠಾ ಮಹೋತ್ಸವ ಆಮಂತ್ರಣ ಹಾಗೂ ಮನೆ ಮನೆಗೆ ಮಂತ್ರಾಕ್ಷತೆ

Suddi Udaya

ವೇಣೂರು: ಬ್ರಾಹ್ಮಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಕರ್ನಾಟಕ ಮುಸ್ಲಿಮ್ ಜಮಾಅತ್ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್‌ನ ನೂತನ ಸಮಿತಿ ರಚನೆ

Suddi Udaya

ನಾವೂರು :ಗೋಪಾಲ ಕೃಷ್ಣ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

Suddi Udaya
error: Content is protected !!