25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು ಗ್ರಾಮ ಪಂಚಾಯತ್ ಜನಸ್ಪಂದನ ಸಭೆ

ಬೆಳಾಲು: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಬೆಳಾಲು ಗ್ರಾಮ ಪಂಚಾಯತ್ ಜನಸ್ಪಂದನ ಸಭೆ ಡಿ. 8 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಬೀಮಂಡೆ ಪ್ರದೇಶದಲ್ಲಿ ಕುಡಿಯುವ ನೀರು ಟ್ಯಾಂಕ್ ನಿರ್ಮಿಸಲಾಗಿದೆ ಆದರೆ ಇನ್ನೂ ನೀರು ಪೂರೈಕೆ ಆಗಿಲ್ಲ , ಬೆಳಾಲು – ಮಂಗಳೂರು ಸಾರಿಗೆ ಬಸ್ ಸೌಲಭ್ಯ ಕಲ್ಪಿಸಬೇಕು ಇದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ, ಬೆಳಾಲಿನಲ್ಲಿ ಲೋ ವಾಲ್ ಟೇಜ್ ಸಮಸ್ಯೆಯಿದೆ ಹಾಗೆಯೇ ವನ್ಯಜೀವಿಗಳ ಉಪಟಳವಿದೆ ಎಂದು ಗ್ರಾಮಸ್ಥ ಸುರೇಶ್ ಭಟ್ ಹೇಳಿದರು.

ದೊಂಪದಪಲ್ಕೆ ಅಂಗನವಾಡಿ ಕೇಂದ್ರ ಆವರಣ ಗೋಡೆ ಮತ್ತು ಇಂಟರ್ ಲಾಕ್ ಅಳವಡಿಕೆಗೆ ಗ್ರಾಮಸ್ಥರು ಬೇಡಿಕೆ ಇಟ್ಟರು. ಕಳೆದ ಎರಡು ವರ್ಷದಲ್ಲಿ ತಾಲೂಕಿಗೆ ಎರಡು ಹೊಸ ಅಂಗನವಾಡಿ ಕೇಂದ್ರಗಳ ನಿರ್ಮಾಣಕ್ಕೆ ಅನುದಾನ ಬಂದಿದೆ ಎಂದು ಶಾಸಕರು ಮಾಹಿತಿ ನೀಡಿದರು. ಬೆಳಾಲಿಗೆ ಪಶು ವೈದ್ಯರು ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದಾಗ ತಾಲೂಕಿನಲ್ಲಿ ಒಟ್ಟು 3 ಮಂದಿ ಪಶು ವೈದ್ಯರು ಇರುವ ಬಗ್ಗೆ ಹೆಚ್ಚುವರಿ ಜವಾಬ್ದಾರಿಯ ಪಶು ವೈದ್ಯರು ತಿಳಿಸಿದರು. ಕೂಡಲಕೆರೆ – ಮುಂಡ್ರೋಟ್ಟು ರಸ್ತೆ ದುರಸ್ತಿಗೊಳಿಸಿ ಎಂದು ಗ್ರಾಮಸ್ಥರು ಹೇಳಿದಾಗ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಸರ್ವೇ ನಡೆಸಲು ಶಾಸಕರು ಸೂಚಿಸಿದರು.

ಪಲ್ಲಿತಡ್ಕ ಎಂಬಲ್ಲಿ ನೀರಿನ ಟ್ಯಾಂಕ್ ಸೋರುತ್ತಿದೆ ಎಂದು ಗ್ರಾಮಸ್ಥರು ಹೇಳಿದಾಗ ಅದನ್ನು ಪರಿಶೀಲಿಸಲು ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.

ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ, ತಹಶೀಲ್ದಾರ್ ಪೃಥ್ವಿ ಸಾನಿಕಂ, ತಾಲೂಕು ಪಂಚಾಯತ್ ಇಓ ಭವಾನಿ ಶಂಕರ್, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ರಾಘವೇಂದ್ರ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಗದೀಶ್,
ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ ಹಾಗೂ ಕೆಸರೊಡೊಂಜಿ ದಿನದ ಸಂಭ್ರಮ

Suddi Udaya

ಬೆಳ್ತಂಗಡಿ: ಜೆಪಿ ಅಟ್ಯಾಕ್ರ್ಸ್ ಪ್ರಾಯೋಜಕತ್ವದಲ್ಲಿ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯಕ್ಕೆ ರಾಷ್ಟ್ರೀಯ ಮಟ್ಟದ ಎನ್.ಬಿ.ಎ ಮಾನ್ಯತೆ

Suddi Udaya

ಲಾಯಿಲ ಜಿ.ಪಂ. ವ್ಯಾಪ್ತಿಯ ಪ್ರದೇಶಗಳಲ್ಲಿ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಬಿರುಸಿನ ಮತಯಾಚನೆ

Suddi Udaya

ಸಹಕಾರಿ ಸಪ್ತಾಹದಲ್ಲಿ ಸವಣಾಲು ಹಾ.ಉ. ಸ. ಸಂಘದ ಸದಸ್ಯ ಲೋಕೇಶ್ ಗೌಡ ರಿಗೆ “ಕ್ಷೀರ ರತ್ನ” ಪ್ರಶಸ್ತಿ

Suddi Udaya

ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 548ನೇಯ ಯೋಜನೆ ಅಂಗವಾಗಿ ಬೃಹತ್ ರಕ್ತದಾನ ಶಿಬಿರ:ಶಾಲಾ ಮಕ್ಕಳಿಗೆ ಊಟದ ಬಟ್ಟಲು, ಲೋಟ ಮತ್ತು ತಟ್ಟೆ ಹಸ್ತಾಂತರ ಕಾರ್ಯಕ್ರಮ ನಡೆಯಿತು

Suddi Udaya
error: Content is protected !!