September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಾ. ಸುಬ್ರಹ್ಮಣ್ಯ ಭಟ್ಟರ ಐತಿಹಾಸಿಕ ಕಾದಂಬರಿ “ಪ್ರತಿಷ್ಠೆ” ಅಳದಂಗಡಿ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರವರಿಂದ ಬಿಡುಗಡೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ಟರು ಬರೆದ ಐತಿಹಾಸಿಕ ಕಾದಂಬರಿ “ಪ್ರತಿಷ್ಠೆ” ಯನ್ನು  ಇಂದು ಡಿಸೆಂಬರ್ 7 ರಂದು ವೇಣೂರಿನ  ತಿಮ್ಮಣ್ಣರಸರಾದ ಡಾ. ಪದ್ಮ ಪ್ರಸಾದ್ ಅಜಿಲರು ಅಳದಂಗಡಿಯ ಅರಮನೆ ಚಾವಡಿಯಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಾದಂಬರಿ ಕೃತಿಕಾರ ಡಾ.ಸುಬ್ರಹ್ಮಣ್ಯ ಭಟ್ಟರು , ಅವರ  ಮಕ್ಕಳಾದ ಅಭಿಗಮ್ಯ ರಾಮ್ , ಆಶ್ಮನ್ ಕೃಷ್ಣ, ಹಿರಿಯ ವಕೀಲರೂ, ಜ್ಯೋತಿಷಿಗಳಾದ ಗಟ್ಟಿಗಾರು ಗೋಪಾಲಕೃಷ್ಣ ಭಟ್ ಮತ್ತು ನಿವೃತ್ತ ಮುಖ್ಯೋಪಾಧ್ಯಾಯಿನಿ ಬಿ.ಕೆ. ಶೈಲಾರವರು ಹಾಗೂ ಇರ್ವತ್ತೂರು ಮಾಗಣೆಯ ಪ್ರಮುಖರು ಉಪಸ್ಥಿತರಿದ್ದರು.

ಶ್ರವಣ ಬೆಳಗೊಳ, ಕಾರ್ಕಳ ಹಾಗೂ ವೇಣೂರಿನ ಬಾಹುಬಲಿ ಸ್ವಾಮಿಯ ವಿಗ್ರಹ ಪ್ರತಿಷ್ಠೆಯ ಐತಿಹಾಸಿಕ ಕಥೆಯನ್ನು ಒಳಗೊಂಡ ಈ ಕಾದಂಬರಿಗೆ ಬೆಳ್ತಂಗಡಿ ತಾಲೂಕಿನ ಹಿರಿಯ ಸಾಹಿತಿ ಶ್ರೀ ಪ.ರಾಮಕೃಷ್ಣ ಶಾಸ್ತ್ರಿಯವರು ಮುನ್ನುಡಿ  ಬರೆದಿರುತ್ತಾರೆ.

ಪ್ರಸ್ತುತ ಕಾದಂಬರಿಯನ್ನು ಮೈಸೂರಿನ ಅಂಬಾರಿ ಪ್ರಕಾಶನದವರು ಪ್ರಕಟಿಸಿದ್ದು ಪ್ರತಿಗಳಿಗಾಗಿ ಲೇಖಕರನ್ನು (9448951856) ಸಂಪರ್ಕಿಸಬಹುದಾಗಿದೆ.

Related posts

ಗರ್ಡಾಡಿ ಯುವಕ ಮಂಡಲದ ಅಧ್ಯಕ್ಷರಾಗಿ ದಿನೇಶ್ ಬಂಗೇರ ಆಯ್ಕೆ

Suddi Udaya

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್ ನ ಆಡಳಿತ ಮಂಡಳಿ ವಜಾ ಆದೇಶಕ್ಕೆ ರಾಜ್ಯ ಹೈಕೋರ್ಟ್ ನಿಂದ ತಡೆ: ಯಥಾಸ್ಥಿತಿ ಕಾಪಾಡುವಂತೆ ಆದೇಶ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ನೂತನ ವಿಕಾರ್ ಜೆನರಲ್‌ಗೆ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ವಕೀಲ ನಾರಾಯಣ ಸ್ವಾಮಿ ಭೇಟಿ

Suddi Udaya
error: Content is protected !!