ನಡ: ಜನರ ಬಳಿ ತಾಲೂಕು ಆಡಳಿತ ಎಂಬ ಕಲ್ಪನೆಯ ಶಾಸಕ ಹರೀಶ್ ಪೂಂಜರ 22 ನೇ ಜನಸ್ಪಂದನ ಸಭೆ ನಡ ಗ್ರಾಮ ಪಂಚಾಯತ್ ನಲ್ಲಿ ಡಿ.8 ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷ ಜಯ ಶೆಟ್ಟಿ, ತಾ.ಪಂ.ಇಓ ಭವಾನಿ ಶಂಕರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ತಾರಾನಾಥ್ ನಾಯಕ್, ಗ್ರಾಮ ಪಂಚಾಯತ್ ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.ಸುರ್ಯದಿಂದ ಮಂಜೊಟ್ಟಿ, ಉಜಿರೆ ಸಂಪರ್ಕಿಸುವ ರಸ್ತೆ ತೀವ್ರ ಹದಗೆಟ್ಟಿದೆ. ವಾಹನದಲ್ಲಿ ಸಂಚಾರಿಸುವಾಗ ಬಿದ್ದು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ ನಮಗೆ ರಸ್ತೆ ನಿರ್ಮಾಣ ಮಾಡಿಕೊಡಬೇಕು ಎಂದು ಮಹಿಳೆಯರು ಹೇಳಿದರು.











