22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರ್ಲ-ಬೈಪಾಡಿ: ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

ಬಂದಾರು: ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಗೌರವಾರ್ಪಣಾ ಸಮಿತಿ, ಪೆರ್ಲ ಬೈಪಾಡಿ, ಬಾಲ ವಿಕಾಸ ಸಮಿತಿ ಅಂಗನವಾಡಿ ಕೇಂದ್ರ, ಪೋಷಕರು ಮತ್ತು ಹಳೆ ವಿದ್ಯಾರ್ಥಿಗಳು, ಸ್ತ್ರೀ ಶಕ್ತಿ ಸಂಘಗಳು, ಅಂಗನವಾಡಿ ಕೇಂದ್ರ ಪೆರ್ಲ-ಬೈಪಾಡಿ ಮತ್ತು ವಿವಿಧ ಸಂಘ ಸಂಸ್ಥೆಗಳು ಹಾಗೂ ಊರವರ ಆಶ್ರಯದಲ್ಲಿ ಬಂದಾರು ಪೆರ್ಲಬೈಪಾಡಿ ಅಂಗನವಾಡಿಯಲ್ಲಿ ಸುಮಾರು 30ವರ್ಷ ಗಳಿಂದ ಅಂಗನವಾಡಿ ಕಾರ್ಯಕರ್ತೆಯಾಗಿ ಕರ್ತವ್ಯ ನಿರ್ವಹಿಸಿದ ಎಂ ಸೇಸಮ್ಮ ರವರಿಗೆ ಡಿ. 06 ರಂದು ಅಂಗನವಾಡಿ ಕೇಂದ್ರ ಪೆರ್ಲ ಬೈಪಾಡಿ ವಠಾರದಲ್ಲಿ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು.

ಬಾಲವಿಕಾಸ ಸಮಿತಿ ಅಧ್ಯಕ್ಷೆ ಹೇಮಾವತಿ ದೀಪ ಬೆಳಗಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಮಹಾಬಲ ಗೌಡ, ಹರೀಶ್ ಗೌಡ ಪರಪ್ಪಜೆ, ಬಂದಾರು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಅನಿತಾ ಉದಯ ಕುರುಡoಗೆ, ಶ್ರೀಮತಿ ಭಾರತಿ,ಬಂದಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀಮತಿ ಜ್ಯೋತಿ, ಆಶಾ ಕಾರ್ಯಕರ್ತೆ ರಾಜೀವಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸೇವಾಪ್ರತಿನಿಧಿ ಶ್ರೀಮತಿ ಪ್ರಮೀಳಾ ಉಪಸ್ಥಿತರಿದ್ದರು. ರೇಷ್ಮಾ, ಚೇತನ, ವಾಣಿ ವಿ ಇವರುಗಳು ಪ್ರಾರ್ಥನೆಗೈದರು. ಬಂದಾರು ಶಾಲೆ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಶ್ರೀಮತಿ ಶಾರದಾ ವೈ ಸ್ವಾಗತಿಸಿ, ವಿಠಲ ಗೌಡ ಒಳಗುಡ್ಡೆ ನಿರೂಪಣೆಗೈದು, ಪೆರ್ಲ -ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ವಾಣಿ. ವಿ ಧನ್ಯವಾದವಿತ್ತರು.

ಈ ಸಂದರ್ಭದಲ್ಲಿ ಶೀನಪ್ಪ ಗೌಡ ಪರ್ಲಾರು ಮತ್ತು ಬಾಲಕೃಷ್ಣ ಗೌಡ ಪಾರೋಟ್ಟು ಇವರುಗಳು ಬೋಜನದ ವ್ಯವಸ್ಥೆ ಮಾಡಿದರು. ಕಾರ್ಯಕ್ರಮದ ಯಶಸ್ವಿಗೆ ಬಾಲವಿಕಾಸ ಸಮಿತಿ, ಪೋಷಕ ವೃಂದ ಊರದಾನಿಗಳು, ಸಂಘ ಸಂಸ್ಥೆಗಳ ಸಹಕರಿಸಿದರು.

Related posts

ಪೋಲಿಸ್ ಇಲಾಖೆಯಲ್ಲಿ ಎ ಎಸ್ ಐ ಯಾಗಿ ಸೇವಾ ನಿವೃತ್ತಿ ಹೊಂದಿದ ಸ್ಯಾಮುವೆಲ್ ಎಂ.ಐ. ನೆಲ್ಯಾಡಿರವರಿಗೆ ಸನ್ಮಾನ

Suddi Udaya

ಕೊರಂ ಕೊರತೆ : ಮೇಲಂತಬೆಟ್ಟು ಗ್ರಾಮ ಸಭೆ ಮುಂದೂಡಿಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವಿಗ್ನೇಶ್ ರವರಿಗೆ ಚಿಕಿತ್ಸಾ ನೆರವು

Suddi Udaya

ಗುರುವಾಯನಕೆರೆ: ಉಚಿತ ನೇತ್ರಾ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

Suddi Udaya

ಲಾಯಿಲ ಬಲಮುರಿ ವಿಘ್ನೇಶ್ವರನ ಸನ್ನಿಧಿಯಲ್ಲಿ ಶಾಸಕ ಹರೀಶ್ ಪೂಂಜಾರ ನೇತೃತ್ವದಲ್ಲಿ 108 ಕಾಯಿ ಗಣಹೋಮ

Suddi Udaya

ಕೊಯ್ಯುರು : ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya
error: Content is protected !!