23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಭಾಗ ಮಟ್ಟದ ಜಿನಭಜನಾ ಸ್ಪರ್ಧೆ: ಉಜಿರೆಯ 4 ತಂಡಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಉಜಿರೆ,ಡಿ,08 : ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಉಪಾಧ್ಯಕ್ಷರಾದ ವೀರಾಂಗಣ ಡಿ. ಅನಿತಾ ಸುರೇಂದ್ರ ಕುಮಾರ್ ರವರ ಪರಿಕಲ್ಪನೆಯ, ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ವೀರ್ ಡಿ. ಸುರೇಂದ್ರ ಕುಮಾರ್ ರವರ ಮಾರ್ಗದರ್ಶನದಲ್ಲಿ ಬಜಗೋಳಿಯ ಸುಮ್ಮ ಗುತ್ತು ವಿನಲ್ಲಿ ನಡೆದ ಭಾರತೀಯ ಜೈನ್ ಮಿಲನ್ ವಲಯ 8ರ 9ನೇ ಆವೃತ್ತಿಯ ಮಂಗಳೂರು ವಿಭಾಗ ಮಟ್ಟದ ಜಿನ ಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿದ ಉಜಿರೆ ತಂಡಗಳಿಗೆ ಹಲವು ಪ್ರಶಸ್ತಿಗಳು ಲಭಿಸಿವೆ.

ಹಿರಿಯರ ವಿಭಾಗದಲ್ಲಿ ಉಜಿರೆಯ ಶುಕ್ಲ ತಂಡವು ಉತ್ತಮ ಪ್ರದರ್ಶನ ನೀಡುವ ಮೂಲಕ ದ್ವಿತೀಯ ಸ್ಥಾನವನ್ನು ಪಡೆದು, ಉಜಿರೆಯ ಶ್ರುತ ತಂಡವು ಐದನೇ ಸ್ಥಾನ ಪಡೆಯಿತು. ಹಾಗೆಯೇ ಕಿರಿಯರ ವಿಭಾಗದಲ್ಲಿ ಉಜಿರೆಯ ಬ್ರಾಹ್ಮರಿ ತಂಡವು ದ್ವಿತೀಯ ಸ್ಥಾನ ಪಡೆದು, ಉಜಿರೆಯ ಹರ್ಷದಾ ತಂಡ ನಾಲ್ಕನೇ ಸ್ಥಾನ ಪಡೆಯಿತು.

ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಸುಮಾರು 90 ಕ್ಕೂ ಅಧಿಕ ತಂಡಗಳ ಪೈಕಿ ಅತ್ಯುತ್ತಮವಾಗಿ ಜಿನಭಜನೆಯನ್ನು ಪ್ರಸ್ತುತಪಡಿಸಿದ ಉಜಿರೆಯ ನಾಲ್ಕು ತಂಡಗಳಿಗೆ ಎರಡು ವರ್ಗಗಳಲ್ಲೂ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದೆ. ಈ ಮೂಲಕ ಜನವರಿಯಲ್ಲಿ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಜಿನಭಜನಾ ಸ್ಪರ್ಧೆಗೆ 4 ತಂಡಗಳು ಆಯ್ಕೆಗೊಂಡಿದೆ.

ಈ ಹಿಂದೆ ನಡೆದ ಆವೃತ್ತಿಯ ಜಿನಭಜನಾ ಸ್ಪರ್ಧೆಗಳಲ್ಲಿ ಉಜಿರೆಯ ತಂಡವು ಸಕ್ರೀಯವಾಗಿ ಭಾಗವಹಿಸುತ್ತಿದ್ದು, ಹಲವು ಬಾರಿ ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿದೆ. ಎರಡು ಬಾರಿ ರಾಜ್ಯ ಮಟ್ಟದ ಜಿನಭಜನಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಚಾಂಪಿಯನ್ ಪಟ್ಟವನ್ನು ಅಲಂಕರಿಸಿತ್ತು.

ವಿಜೇತ ಉಜಿರೆಯ ಜಿನಭಜನಾ ತಂಡಗಳ ಸೋನಿಯಾ ಯಶೋವರ್ಮ ಮಾರ್ಗದರ್ಶವನ್ನು ನೀಡಿ, ಅಭಿನಂದನೆಗಳನ್ನು ತಿಳಿಸಿರುತ್ತಾರೆ. ತಂಡಗಳನ್ನು ಉಜಿರೆಯ ತೃಪ್ತ ಕುಮಾರ್ ಜೈನ್ ಸಂಯೋಜಿಸಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡದ ಎಜಿಎಂ ಅಮಿತ್ ಶೆಟ್ಟಿ ದಂಪತಿ ಭೇಟಿ

Suddi Udaya

ನಡ: ಹೊಕ್ಕಿಲ ನಿವಾಸಿ ಕುಸುಮ ನಿಧನ

Suddi Udaya

ಬಿಜೆಪಿ ಚುನಾವಣಾ ಪ್ರಚಾರದ ಅಂಗವಾಗಿ ನಾರಾವಿ ಶಕ್ತಿ ಕೇಂದ್ರದಲ್ಲಿ ಪೂರ್ವಭಾವಿ ಸಭೆ

Suddi Udaya

ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ನೂತನ ಶಿಲಾಮಯ ಧ್ವಜಸ್ತಂಭದ ಶೋಭಾಯಾತ್ರೆಗೆ ಉಜಿರೆಯಲ್ಲಿ ಗಣ್ಯರಿಂದ ಚಾಲನೆ

Suddi Udaya

ತೆಂಕಾಕಾರಂದೂರು: ಹತ್ತೂರಿನ ಪ್ರೀತಿಗಿಂತ ವಾಸವಿರುವ ಊರಿನ ಪ್ರೀತಿಗೆ ಬೆಲೆ ಕಟ್ಟಲಾಗದು: ಪ.ರಾ.ಶಾಸ್ತ್ರಿ

Suddi Udaya

ಕಡಿರುದ್ಯಾವರ : ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯೆಯ ಮನೆ ದುರಸ್ತಿ ಕಾರ್ಯ ನಡೆಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು

Suddi Udaya
error: Content is protected !!