ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದ ಜಿನಾಭಜನಾ ಸ್ಪರ್ಧೆಗೆ ಆಯ್ಕೆ

ಉಜಿರೆ: ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಉಪಾಧ್ಯಕ್ಷ ವೀರಾಂಗನ ಡಿ. ಅನಿತಾ ಸುರೇಂದ್ರ ಕುಮಾ‌ರ್ ಅವರ ಪರಿಕಲ್ಪನೆಯ, ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ಡಿ. ಸುರೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಬಜಗೋಳಿಯ ಸುಮ್ಮಗುತ್ತುವಿನಲ್ಲಿ ನಡೆದ ಭಾರತೀಯ ಜೈನ್ ಮಿಲನ್ ವಲಯ 8ರ 9ನೇ ಆವೃತ್ತಿಯ ಮಂಗಳೂರು ವಿಭಾಗ ಮಟ್ಟದ ಜಿನ ಭಜನಾ ಸ್ಪರ್ಧೆಯಲ್ಲಿ ಕಿರಿಯರ ವಿಭಾಗದಲ್ಲಿ ಉಜಿರೆಯ ಹರ್ಷದಾ ತಂಡ ನಾಲ್ಕನೇ ಸ್ಥಾನ ಹಾಗೂ ಬ್ರಾಮರಿ ತಂಡ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಈ ತಂಡದಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳು ಅಕ್ಷರ್, ನಿಷ್ಕಾ ಜೈನ್ ಭಾಗವಹಿಸಿ ಜನವರಿಯಲ್ಲಿ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ವಿಜೇತ ಜಿನಭಜನಾ ತಂಡಗಳಿಗೆ ಭಾರತೀಯ ಜೈನ್ ಮಿಲನ್ ವಲಯ 8 ಮಂಗಳೂರು ವಿಭಾಗದ ಅಧ್ಯಕ್ಷ ರಾದ ಸೋನಿಯಾ ಯಶೋವರ್ಮ ರವರು ಅಭಿನಂದಿಸಿರುತ್ತಾರೆ.
ಜನವರಿ 03 ಮತ್ತು 04 ರಂದು ನಡೆಯಲಿರುವ ರಾಜ್ಯಮಟ್ಟದ ಜಿನಾಭಜನಾ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ಸ್ಪರ್ಧಿಗಳಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾಲಕ್ಷ್ಮೀ ನಾಯಕ್ ಅಭಿನಂದಿಸಿದ್ದಾರೆ.

Related posts

ತಾಲೂಕು ಮಟ್ಟದ ಕ್ರೀಡಾ ಕೂಟ: ಮಚ್ಚಿನ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ವಸಂತ ಗಿಳಿಯಾರ್ ವಿರುದ್ದ ಕಾನೂನು ಕ್ರಮಕ್ಕೆ ವಸಂತ ಬಂಗೇರ ಅಭಿಮಾನಿ ಬಳಗದಿಂದ ಒತ್ತಾಯ: ಸೌಜನ್ಯ ಆತ್ಯಚಾರ ಮತ್ತು ಕೊಲೆ ಪ್ರಕರಣಕ್ಕೆ ನ್ಯಾಯ ಸಿಗಬೇಕೆಂಬುದು ವಸಂತ ಬಂಗೇರ ಅಭಿಮಾನಿ ಬಳಗದ ನಿಲುವು

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಸಹಾಯಧನ ವಿತರಣೆ

Suddi Udaya

ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ ಆನಂದ, ಕಾರ್ಯದರ್ಶಿಯಾಗಿ ಸಂದೀಪ್ ಆಯ್ಕೆ

Suddi Udaya

ಕನ್ಯಾಡಿ ಸೇವಾಧಾಮ ಸಂಸ್ಥಾಪಕ ಕೆ. ವಿನಾಯಕ ರಾವ್ ರವರಿಗೆ IOA ಸುವರ್ಣ ಸಾಧಕ ಪ್ರಶಸ್ತಿ

Suddi Udaya

ಜು.6: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
error: Content is protected !!