July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ರಾಜ್ಯ ಪಠ್ಯಕ್ರಮ ಶಾಲೆಯ ವಾರ್ಷಿಕೋತ್ಸವ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ರಾಜ್ಯ ಪಠ್ಯಕ್ರಮ, ಉಜಿರೆ ಶಾಲೆಯ ವಾರ್ಷಿಕೋತ್ಸವವನ್ನು ಇಂದ್ರಪ್ರಸ್ಥ ಸಭಾಂಗಣದಲ್ಲಿ ಡಿ.05 ರಂದು ವಿಜೃಂಭಣೆಯಿಂದ ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಲಕ್ಷ್ಮಿ ಗ್ರೂಪ್ ಮಾಲೀಕ ಮೋಹನ್ ಕುಮಾರ್, ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಂಯೋಜಕರಾದ ಎಸ್. ಎನ್. ಕಾಕತ್ಕರ್ ಮತ್ತು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಧನ್ಯಕುಮಾರ್ ಉದ್ಘಾಟಿಸಿದರು. ಹಾಗೂ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿ ಹಾಗೂ ಶೈಕ್ಷಣಿಕ ಸಾಧನೆಯನ್ನು ಪ್ರಶಂಸಿಸಿದರು.

ವಿದ್ಯಾರ್ಥಿಗಳಿಂದ ವಿವಿಧ ರೀತಿಯ ನೃತ್ಯ ಪ್ರದರ್ಶನ, ವರ್ಣರಂಜಿತ ಕಾರ್ಯಕ್ರಮಗಳು ನಡೆಯಿತು.
ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಂಯೋಜಕರಾದ ಎಸ್. ಎನ್. ಕಾಕತ್ಕರ್ ಮತ್ತು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಧನ್ಯಕುಮಾರ್ ರವರು ಶಾಲಾ ವಾರ್ಷಿಕ ಸಂಚಿಕೆ ಛಾತ್ರ ದ್ಯುತಿ ಬಿಡುಗಡೆಗೊಳಿಸಿದರು.

ವಿದ್ಯಾರ್ಥಿ ಜ್ಞಾನ್ ಅನ್ವೇಷ್ ವಾರ್ಷಿಕ ವರದಿ ವಾಚನ ಮಾಡಿದರು.

ಈ ಸಂದರ್ಭದಲ್ಲಿ ಪ್ರತಿ ವಿಭಾಗದಲ್ಲೂ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿಗಳು ಹಾಗೂ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.

ಪ್ರತಿಭಾ ದಿನಾಚರಣೆಗೆ ಆಗಮಿಸಿದ ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶ್ಚಂದ್ರರವರು ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಶುಭ ಹಾರೈಸಿದರು.

ಪ್ರತಿಭಾ ದಿನಾಚರಣೆ ಹಿನ್ನೆಲೆಯಲ್ಲಿ ಹೆಗ್ಗಡೆಯವರ ಸಾಮಾಜಿಕ ಸೇವೆಯನ್ನು ಸ್ಮರಿಸುವ ನೃತ್ಯ ಎಲ್ಲರ ಗಮನ ಸೆಳೆದಿದ್ದು ಹಾಗೂ ಖಾವಂದರ ವೇಷಧಾರಿ ವಿದ್ಯಾರ್ಥಿ ಪ್ರಸ್ತುತ್ ಪಿ ಹೆಗ್ಗಡೆ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದರು. ಈ ನೃತ್ಯದ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಪ್ರಸಾರ ಹೊಂದಿದೆ.

ಪ್ರತಿಭಾ ದಿನಾಚರಣೆ 2025 ರ ಅಂಗವಾಗಿ ಪ್ರತಿಭಾ ಪುರಸ್ಕಾರ ದಿನವನ್ನು ಡಿ.01 ರಂದು ನಡೆಸಿದ್ದು, ವಿದ್ಯಾರ್ಥಿಗಳನ್ನು ದೀಕ್ಷಾ, ಮ್ಯಾನೇಜರ್ ಎಸ್ ಬಿಐ ಉಜಿರೆ ಹಾಗೂ ಡಾ. ಶೈಲಜಾ, ನಿವೃತ್ತ ಕಾರ್ಯನಿರ್ವಹಣಾ ನಿರ್ದೇಶಕರು, ಕೃಷಿ ಇಲಾಖೆ ಇವರು ಪ್ರಶಸ್ತಿ ನೀಡಿ ಅಭಿನಂದಿಸಿದರು ಹಾಗೂ ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಶಾಲಾ ಮುಖ್ಯಶಿಕ್ಷಕರು, ಪ್ರಾಧ್ಯಾಪಕರು, ಶಿಕ್ಷಕ-ಶಿಕ್ಷಕಿಯರು, ಪೋಷಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.

ಸಚಿತ್ ಭಟ್ ಸ್ವಾಗತಿಸಿ, ತೌಪಿರ ವಂದಿಸಿದರು. ತಸ್ಮಯಿ, ಸಚಿತ್ ಭಟ್ ಮತ್ತು ಸ್ಪೂರ್ತಿ ಕಾರ್ಯಕ್ರಮ ನಿರೂಪಿಸಿದರು.

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ಅಂಡಿಂಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಪತ್ರಕರ್ತ ಭುವನೇಶ್ ಗೇರುಕಟ್ಟೆಯವರಿಂದ ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಕೇಶದಾನ

Suddi Udaya

ಬೆಳ್ತಂಗಡಿ ನ್ಯಾಯಾಲಯದಲ್ಲಿ ಹಿರಿಯ ಶ್ರೇಣಿ ನ್ಯಾಯಾಧೀಶ ಶಶಿಧರ ಎಂ ಗೌಡ ರವರಿಗೆ ಸ್ವಾಗತ ಸಮಾರಂಭ

Suddi Udaya

ತಣ್ಣೀರುಪಂತ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಬಿ. ನಿರಂಜನ್ ಮತ್ತು ಉಪಾಧ್ಯಕ್ಷರಾಗಿ ಪಿ. ಜಯರಾಜ್ ಹೆಗ್ಡೆ ಆಯ್ಕೆ

Suddi Udaya

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಶಿಶಿಲ ಹಾ.ಉ.ಸ. ಸಂಘದ ಅಧ್ಯಕ್ಷರಾಗಿ ಸಂತೋಷ್ ಎ.ಎಸ್ ಹಾಗೂ ಉಪಾಧ್ಯಕ್ಷರಾಗಿ ಡಿ ಲಕ್ಷ್ಮೀಶ ಗೌಡ ಆಯ್ಕೆ

Suddi Udaya
error: Content is protected !!