September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ ಪ್ರತಿಭಟನೆ

ಬೆಳ್ತಂಗಡಿ : ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಪುತ್ತೂರು ಜಿಲ್ಲೆ ವತಿಯಿಂದ ಗೋ ಹತ್ಯೆಯನ್ನು ತಡೆಯಲು ಹಿಂದಿನ ಸರ್ಕಾರ ಜಾರಿಗೆ ತಂದಿದ್ದ ಕಾನೂನನ್ನು ಸಡಿಲಗೊಳಿಸಿ ಗೋ ಹತ್ಯೆಗೆ ಸಹಕಾರ, ಪ್ರೋತ್ಸಾಹ ನೀಡಲು ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿರುವ ನೂತನ ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ಬೃಹತ್ ಪ್ರತಿಭಟನೆಯು ಮಿನಿ ವಿಧಾನ ಸೌಧ ಮುಂಭಾಗದಲ್ಲಿ ನಡೆಯಿತು.

ಈ ಸಂದರ್ಭ ನೂತನ ಗೋ ಸಂರಕ್ಷಣಾ ತಿದ್ದುಪಡಿ ನಡೆಸಿರುವುದನ್ನು ಹಿಂಪಡೆಯಬೇಕೆಂದು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ವಿ.ಹಿಂ.ಪ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷ ವಿಷ್ಣು ಮರಾಟೆ, ವಿಹೆಚ್ ಪಿ ಕಾರ್ಯದರ್ಶಿ ನವೀನ್ ನೆರಿಯ, ವಿ.ಹಿಂ.ಪ ಗೋ ರಕ್ಷಕ್ ಪ್ರಮುಖ್ ಗಣೇಶ್ ಕಳೆಂಜ, ಜಿಲ್ಲೆಯ ಸಹ ಸಂಯೋಜಕ ದಿನೇಶ್ ಚಾರ್ಮಾಡಿ, ಸತೀಶ್ ನೆರಿಯ, ರಮೇಶ್ ಮುಂಡತ್ತೋಡಿ, ನಾಗೇಶ್ ಕಲ್ಮಂಜ, ಸುಧೀರ್ ಚಾರ್ಮಾಡಿ, ಶಶಿರಾಜ್ ಗುರುವಾಯನಕೆರೆ, ಶರತ್ ಶೆಟ್ಟಿ ಸಂಘ ಪರಿವಾರದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya

ಕಕ್ಯಪದವು ಲಾವಣ್ಯಳ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮೇಲಂತಬೆಟ್ಟು ನಿವಾಸಿ ಮಲ್ಲಿಕ್ ನಿಧನ

Suddi Udaya

ಜ.15: ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರ 79ನೇ ಹುಟ್ಟುಹಬ್ಬದ ಪ್ರಯುಕ್ತ ‘ಬೃಹತ್ ರಕ್ತದಾನ’ ಶಿಬಿರ

Suddi Udaya

ವೇಣೂರು: ಲಯನ್ಸ್ ಕ್ಲಬ್ ನಲ್ಲಿ ಕಾರ್ಗಿಲ್ ದಿನಾಚರಣೆ

Suddi Udaya

ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ :ಎಸ್ ಡಿ ಎಮ್ ಪಿ ಯು ಕಾಲೇಜಿಗೆ ಎರಡು ವಿಭಾಗದಲ್ಲಿ ಪ್ರಥಮ ಬಹುಮಾನ.

Suddi Udaya
error: Content is protected !!