23.3 C
ಪುತ್ತೂರು, ಬೆಳ್ತಂಗಡಿ
March 7, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತ‌ರ್ ಕಾಲೇಜು ಮಟ್ಟದ ಖೋ-ಖೋ ಪಂದ್ಯಾಟ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯಲ್ಲಿ ಮಂಗಳೂರು ಯೂನಿವರ್ಸಿಟಿ ಮಟ್ಟದ ಬಾಲಕರ ಹಾಗೂ ಬಾಲಕಿಯರ ಅಂತರ್ ಕಾಲೇಜು ಖೋ-ಖೋ ಪಂದ್ಯಾಟ ಆರಂಭಗೊಂಡಿದೆ. ಡಿ.9 ಹಾಗೂ ಡಿ.10 ಎರಡು ದಿನಗಳ ಕಾಲ ಈ ಪಂದ್ಯಾಟ ನಡೆಯಲಿದೆ. ಅಂತರ್ ಕಾಲೇಜು ಖೋ-ಖೋ ಪಂದ್ಯಾಟವನ್ನು ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ತುಕರಾಂ ಏನೆಕಲ್ ಅವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು.

ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮೂಡುಬಿದಿರೆ ಆಳ್ವಾಸ್ ಎಜುಕೇಶನ್ ಫೌಂಡೇಶನ್ ಟ್ರಸ್ಟಿಯಾಗಿರುವ ವಿವೇಕ್ ಆಳ್ವ ಅವರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಯಾವುದೇ ಖಾಸಗಿ ಕಾಲೇಜಿಗೂ ಕಡಿಮೆಯಿಲ್ಲ ಎನ್ನುವ ಹಾಗೆ ಅತ್ಯಂತ ಗುಣಮಟ್ಟಯುಕ್ತ ಪಂದ್ಯಾಟವನ್ನು ಆಯೋಜಿಸಿರುವುದು ಸಂತಸ ತಂದಿದೆ. ಇಲ್ಲಿ, ಹೆಚ್ಚಿನ ಪ್ರಮಾಣದಲ್ಲಿ ಹೆಣ್ಣುಮಕ್ಕಳೇ ಇದ್ದಾರೆ. ಹೆಣ್ಣು ಮಕ್ಕಳು ಹೆಚ್ಚು ಇರುವ ಸಂಸ್ಥೆಯು ಅತ್ಯಂತ ಅಭಿವೃದ್ಧಿ ಹೊಂದುತ್ತದೆ ಎಂದೇ ಅರ್ಥ ಎಂದರು. ಕ್ರೀಡೆ ಎಂದಾಗ ಸೋಲು-ಗೆಲುವು ಇದ್ದೇ ಇರುತ್ತದೆ. ಆದರೆ, ಅದು ನಮ್ಮ ಬದುಕಿಗೆ ದೊಡ್ಡ ಪಾಠವಾಗಿರಲಿದೆ. ಖೋ-ಖೋ ಪ್ಲೇಯರ್ ಹೆಚ್ಚಿನ ಫಿಟ್ ನೆಸ್ ಅನ್ನು ಹೊಂದಿರುತ್ತಾರೆ. ಅವರು ಉಳಿದೆಲ್ಲಾ ಆಟಗಳನ್ನು ಆಡಲು ಸಾಧ್ಯವಾಗುತ್ತದೆ. ಹೀಗಾಗಿ ಖೋ-ಖೋ ಅತ್ಯಂತ ಹೆಚ್ಚಿನ ಮಹತ್ವವನ್ನು ಪಡೆದಿರುವ ದೇಶೀಯ ಕ್ರೀಡೆಯಾಗಿದೆ ಎಂದು ಆಟಗಾರರಿಗೆ ಶುಭಹಾರೈಸಿದರು.

ಇದೇ ವೇಳೆ, ದೈಹಿಕ ಶಿಕ್ಷಣ ನಿರ್ದೇಶಕರಾಗಿ ಮಹತ್ತರ ಸಾಧನೆಗೈದು ನಿವೃತ್ತ ಜೀವನದಲ್ಲಿರುವ ತುಕರಾಂ ಏನೆಕಲ್ ಹಾಗೂ ಶಾಂತಿರಾಜ್ ಕಂಬ್ಲಿ ಇವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ, ತುಕರಾಂ ಏನೆಕಲ್ ಅವರು, ಪ್ರತಿಭಾನ್ವಿತರು ಸಾಯಬಹುದು ಆದರೆ ಸ್ಪೂರ್ತಿ ಎನ್ನುವಂತದ್ದು ಸಾಯುವುದಿಲ್ಲ. ಹೀಗಾಗಿ ನಮ್ಮ ಆಟವು ಇನ್ನೊಬ್ಬರಿಗೆ ಸ್ಫೂರ್ತಿ ತುಂಬುವಂತಿರಬೇಕು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಶಿಸ್ತು ಉಳಿದಂತಹ ಎಲ್ಲಾ ಕಾಲೇಜುಗಳಿಗೆ ಕೂಡಾ ಸ್ಪೂರ್ತಿದಾಯಕವಾಗಿದೆ ಎಂದರು.

ಸಭಾಧ್ಯಕ್ಷತೆಯನ್ನು ಸ.ಪ್ರ.ದ. ಕಾಲೇಜು ಬೆಳ್ತಂಗಡಿಯ ಪ್ರಾಂಶುಪಾಲರಾದ ಪ್ರೊ. ಸುರೇಶ್ ವಿ. ವಹಿಸಿದ್ದರು. ವೇದಿಕೆಯಲ್ಲಿ ಮಂಗಳೂರು ಯುನಿವರ್ಸಿಟಿ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಜೆರಾಲ್ಡ್ ಸಂತೋಷ್ ಡಿ ಸೋಜಾ, ಸ.ಪ್ರ.ದ. ಕಾಲೇಜು ಬೆಳ್ತಂಗಡಿಯ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರಾಧಾಕೃಷ್ಣ ಹೆಚ್.ಬಿ., ಎಸ್ ಡಬ್ಲ್ಯು ಒ ಪ್ರೊ. ಪದ್ಮನಾಭ, ಪಿಟಿಎ ಅಧ್ಯಕ್ಷರಾದ ವೈಲೆಟ್ ವಾಸ್ ಹಾಗೂ ಕಾಲೇಜಿನ ಕ್ರೀಡಾ ಸಂಚಾಲಕರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಐಕ್ಯೂಎಸಿ ಕೋ-ಆರ್ಡಿನೇಟರ್ ಡಾ. ಕುಶಾಲಪ್ಪ ಎಸ್‌. ಸ್ವಾಗತಗೈದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರೊ. ಪದ್ಮನಾಭ ಕೆ ಧನ್ಯವಾದ ಸಮರ್ಪಿಸಿದರು. ಬ್ಯುಸಿನೆಸ್ ಅಡ್ಮಿನಿಸ್ಟೇಷನ್ಸ್ ವಿಭಾಗದ ಅಸಿಸ್ಟೆಂಟ್ ಪ್ರೊ. ಡಾ. ದಿವ್ಯ ಪ್ರಭು ಪಿ. ಕಾರ್ಯಕ್ರಮ ನಿರೂಪಿಸಿದರು.

ಮಂಗಳೂರು ಯೂನಿವರ್ಸಿಟಿ ಮಟ್ಟದ ಹುಡುಗರ ಹಾಗೂ ಹುಡುಗಿಯರ ಅಂತರ್ ಕಾಲೇಜು ಖೋ-ಖೋ ಪಂದ್ಯಾಟದಲ್ಲಿ ಒಟ್ಟು 60 ತಂಡಗಳು ಭಾಗವಹಿಸಿದೆ. ಡಿ. 10 ರಂದು ಸಂಜೆ ಸಮಾರೋಪ ಸಮಾರಂಭವು ಜರುಗಲಿದೆ.

Related posts

ಬೆಳ್ತಂಗಡಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ , ನ್ಯಾಷನಲ್ ಇನ್ಶುರೆನ್ಸ್ ಕಂಪನಿ ಬಂಟ್ವಾಳ ಬ್ರಾಂಚ್ ಮತ್ತು ಜೆಸಿಐ ಸೀನಿಯರ್ ಛೇಂಬರ್ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಆಚರಣೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘ ಮತ್ತು ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಇವರ ಸಹಭಾಗಿತ್ವದಲ್ಲಿ ಸಿಪಿ ಆರ್ ಮಾಹಿತಿ ಮತ್ತು ತರಬೇತಿ ಕಾರ‍್ಯಕ್ರಮ

Suddi Udaya

ಎಸ್ ಡಿ ಎಂ ಶಿಕ್ಷಣ ಸಂಸ್ಥೆಯಿಂದ ರೂ. 2.50 ಕೋಟಿ ವಿದ್ಯಾರ್ಥಿವೇತನ ವಿತರಣೆ

Suddi Udaya

ಮಡಿಕೇರಿಯಲ್ಲಿ ನೂತನ ಮುಳಿಯ ಸಿಲ್ವರಿಯ ಉದ್ಘಾಟನೆ

Suddi Udaya

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾರಂಭೋತ್ಸವ

Suddi Udaya

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ, ಪರಿಶೀಲನೆ

Suddi Udaya
error: Content is protected !!