23.7 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತ‌ರ್ ಕಾಲೇಜು ಮಟ್ಟದ ಖೋ-ಖೋ ಪಂದ್ಯಾಟ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯಲ್ಲಿ ಮಂಗಳೂರು ಯೂನಿವರ್ಸಿಟಿ ಮಟ್ಟದ ಬಾಲಕರ ಹಾಗೂ ಬಾಲಕಿಯರ ಅಂತರ್ ಕಾಲೇಜು ಖೋ-ಖೋ ಪಂದ್ಯಾಟ ಆರಂಭಗೊಂಡಿದೆ. ಡಿ.9 ಹಾಗೂ ಡಿ.10 ಎರಡು ದಿನಗಳ ಕಾಲ ಈ ಪಂದ್ಯಾಟ ನಡೆಯಲಿದೆ. ಅಂತರ್ ಕಾಲೇಜು ಖೋ-ಖೋ ಪಂದ್ಯಾಟವನ್ನು ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ತುಕರಾಂ ಏನೆಕಲ್ ಅವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು.

ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮೂಡುಬಿದಿರೆ ಆಳ್ವಾಸ್ ಎಜುಕೇಶನ್ ಫೌಂಡೇಶನ್ ಟ್ರಸ್ಟಿಯಾಗಿರುವ ವಿವೇಕ್ ಆಳ್ವ ಅವರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಯಾವುದೇ ಖಾಸಗಿ ಕಾಲೇಜಿಗೂ ಕಡಿಮೆಯಿಲ್ಲ ಎನ್ನುವ ಹಾಗೆ ಅತ್ಯಂತ ಗುಣಮಟ್ಟಯುಕ್ತ ಪಂದ್ಯಾಟವನ್ನು ಆಯೋಜಿಸಿರುವುದು ಸಂತಸ ತಂದಿದೆ. ಇಲ್ಲಿ, ಹೆಚ್ಚಿನ ಪ್ರಮಾಣದಲ್ಲಿ ಹೆಣ್ಣುಮಕ್ಕಳೇ ಇದ್ದಾರೆ. ಹೆಣ್ಣು ಮಕ್ಕಳು ಹೆಚ್ಚು ಇರುವ ಸಂಸ್ಥೆಯು ಅತ್ಯಂತ ಅಭಿವೃದ್ಧಿ ಹೊಂದುತ್ತದೆ ಎಂದೇ ಅರ್ಥ ಎಂದರು. ಕ್ರೀಡೆ ಎಂದಾಗ ಸೋಲು-ಗೆಲುವು ಇದ್ದೇ ಇರುತ್ತದೆ. ಆದರೆ, ಅದು ನಮ್ಮ ಬದುಕಿಗೆ ದೊಡ್ಡ ಪಾಠವಾಗಿರಲಿದೆ. ಖೋ-ಖೋ ಪ್ಲೇಯರ್ ಹೆಚ್ಚಿನ ಫಿಟ್ ನೆಸ್ ಅನ್ನು ಹೊಂದಿರುತ್ತಾರೆ. ಅವರು ಉಳಿದೆಲ್ಲಾ ಆಟಗಳನ್ನು ಆಡಲು ಸಾಧ್ಯವಾಗುತ್ತದೆ. ಹೀಗಾಗಿ ಖೋ-ಖೋ ಅತ್ಯಂತ ಹೆಚ್ಚಿನ ಮಹತ್ವವನ್ನು ಪಡೆದಿರುವ ದೇಶೀಯ ಕ್ರೀಡೆಯಾಗಿದೆ ಎಂದು ಆಟಗಾರರಿಗೆ ಶುಭಹಾರೈಸಿದರು.

ಇದೇ ವೇಳೆ, ದೈಹಿಕ ಶಿಕ್ಷಣ ನಿರ್ದೇಶಕರಾಗಿ ಮಹತ್ತರ ಸಾಧನೆಗೈದು ನಿವೃತ್ತ ಜೀವನದಲ್ಲಿರುವ ತುಕರಾಂ ಏನೆಕಲ್ ಹಾಗೂ ಶಾಂತಿರಾಜ್ ಕಂಬ್ಲಿ ಇವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ, ತುಕರಾಂ ಏನೆಕಲ್ ಅವರು, ಪ್ರತಿಭಾನ್ವಿತರು ಸಾಯಬಹುದು ಆದರೆ ಸ್ಪೂರ್ತಿ ಎನ್ನುವಂತದ್ದು ಸಾಯುವುದಿಲ್ಲ. ಹೀಗಾಗಿ ನಮ್ಮ ಆಟವು ಇನ್ನೊಬ್ಬರಿಗೆ ಸ್ಫೂರ್ತಿ ತುಂಬುವಂತಿರಬೇಕು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಶಿಸ್ತು ಉಳಿದಂತಹ ಎಲ್ಲಾ ಕಾಲೇಜುಗಳಿಗೆ ಕೂಡಾ ಸ್ಪೂರ್ತಿದಾಯಕವಾಗಿದೆ ಎಂದರು.

ಸಭಾಧ್ಯಕ್ಷತೆಯನ್ನು ಸ.ಪ್ರ.ದ. ಕಾಲೇಜು ಬೆಳ್ತಂಗಡಿಯ ಪ್ರಾಂಶುಪಾಲರಾದ ಪ್ರೊ. ಸುರೇಶ್ ವಿ. ವಹಿಸಿದ್ದರು. ವೇದಿಕೆಯಲ್ಲಿ ಮಂಗಳೂರು ಯುನಿವರ್ಸಿಟಿ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಜೆರಾಲ್ಡ್ ಸಂತೋಷ್ ಡಿ ಸೋಜಾ, ಸ.ಪ್ರ.ದ. ಕಾಲೇಜು ಬೆಳ್ತಂಗಡಿಯ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರಾಧಾಕೃಷ್ಣ ಹೆಚ್.ಬಿ., ಎಸ್ ಡಬ್ಲ್ಯು ಒ ಪ್ರೊ. ಪದ್ಮನಾಭ, ಪಿಟಿಎ ಅಧ್ಯಕ್ಷರಾದ ವೈಲೆಟ್ ವಾಸ್ ಹಾಗೂ ಕಾಲೇಜಿನ ಕ್ರೀಡಾ ಸಂಚಾಲಕರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಐಕ್ಯೂಎಸಿ ಕೋ-ಆರ್ಡಿನೇಟರ್ ಡಾ. ಕುಶಾಲಪ್ಪ ಎಸ್‌. ಸ್ವಾಗತಗೈದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರೊ. ಪದ್ಮನಾಭ ಕೆ ಧನ್ಯವಾದ ಸಮರ್ಪಿಸಿದರು. ಬ್ಯುಸಿನೆಸ್ ಅಡ್ಮಿನಿಸ್ಟೇಷನ್ಸ್ ವಿಭಾಗದ ಅಸಿಸ್ಟೆಂಟ್ ಪ್ರೊ. ಡಾ. ದಿವ್ಯ ಪ್ರಭು ಪಿ. ಕಾರ್ಯಕ್ರಮ ನಿರೂಪಿಸಿದರು.

ಮಂಗಳೂರು ಯೂನಿವರ್ಸಿಟಿ ಮಟ್ಟದ ಹುಡುಗರ ಹಾಗೂ ಹುಡುಗಿಯರ ಅಂತರ್ ಕಾಲೇಜು ಖೋ-ಖೋ ಪಂದ್ಯಾಟದಲ್ಲಿ ಒಟ್ಟು 60 ತಂಡಗಳು ಭಾಗವಹಿಸಿದೆ. ಡಿ. 10 ರಂದು ಸಂಜೆ ಸಮಾರೋಪ ಸಮಾರಂಭವು ಜರುಗಲಿದೆ.

Related posts

ಮದ್ದಡ್ಕ ಹೆದ್ದಾರಿ ಕಾಮಗಾರಿಯ ಯಂತ್ರಕ್ಕೆ ಸಿಲುಕಿ ವೃದ್ಧ ಬಲಿ

Suddi Udaya

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಧರ್ಮಸ್ಥಳಕ್ಕೆ ಭೇಟಿ

Suddi Udaya

ಹಾನಿಂಜ ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

Suddi Udaya

ಬ್ಲಾಕ್ ಜಾಕ್ ಪ್ರೊಡಕ್ಟ್ ಪಿಚ್ಚಿಂಗ್ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಲಾಯಿಲ: ಆಟೋಚಾಲಕ ನಾಗೇಶ್ ನಿಧನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!