July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದ ಜಿನಾಭಜನಾ ಸ್ಪರ್ಧೆಗೆ ಆಯ್ಕೆ

ಉಜಿರೆ: ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಉಪಾಧ್ಯಕ್ಷ ವೀರಾಂಗನ ಡಿ. ಅನಿತಾ ಸುರೇಂದ್ರ ಕುಮಾ‌ರ್ ಅವರ ಪರಿಕಲ್ಪನೆಯ, ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ಡಿ. ಸುರೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಬಜಗೋಳಿಯ ಸುಮ್ಮಗುತ್ತುವಿನಲ್ಲಿ ನಡೆದ ಭಾರತೀಯ ಜೈನ್ ಮಿಲನ್ ವಲಯ 8ರ 9ನೇ ಆವೃತ್ತಿಯ ಮಂಗಳೂರು ವಿಭಾಗ ಮಟ್ಟದ ಜಿನ ಭಜನಾ ಸ್ಪರ್ಧೆಯಲ್ಲಿ ಕಿರಿಯರ ವಿಭಾಗದಲ್ಲಿ ಉಜಿರೆಯ ಹರ್ಷದಾ ತಂಡ ನಾಲ್ಕನೇ ಸ್ಥಾನ ಹಾಗೂ ಬ್ರಾಮರಿ ತಂಡ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಈ ತಂಡದಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳು ಅಕ್ಷರ್, ನಿಷ್ಕಾ ಜೈನ್ ಭಾಗವಹಿಸಿ ಜನವರಿಯಲ್ಲಿ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ವಿಜೇತ ಜಿನಭಜನಾ ತಂಡಗಳಿಗೆ ಭಾರತೀಯ ಜೈನ್ ಮಿಲನ್ ವಲಯ 8 ಮಂಗಳೂರು ವಿಭಾಗದ ಅಧ್ಯಕ್ಷ ರಾದ ಸೋನಿಯಾ ಯಶೋವರ್ಮ ರವರು ಅಭಿನಂದಿಸಿರುತ್ತಾರೆ.
ಜನವರಿ 03 ಮತ್ತು 04 ರಂದು ನಡೆಯಲಿರುವ ರಾಜ್ಯಮಟ್ಟದ ಜಿನಾಭಜನಾ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ಸ್ಪರ್ಧಿಗಳಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾಲಕ್ಷ್ಮೀ ನಾಯಕ್ ಅಭಿನಂದಿಸಿದ್ದಾರೆ.

Related posts

ನೆರಿಯ ಪ್ರದೇಶದಲ್ಲಿ ಭಾರೀ ಮಳೆ ಸೇತುವೆ ಮತ್ತೆ ಮುಳುಗಡೆ ಆತಂಕದಲ್ಲಿ ಜನತೆ

Suddi Udaya

ಧರ್ಮಸ್ಥಳ: ಮಹಿಳೆಯ ಕಾಲಿನ ಮೇಲೆ ಹರಿದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಬಿಷಪ್ ರಿಗೆ ಲಯನ್ಸ್ ಕ್ಲಬ್ ನಿಂದ ಬೆಳ್ಳಿಹಬ್ಬ ವರ್ಷದ “ಗೌರವಾಭಿನಂದನೆ”

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್: ಮುಂಡಾಜೆ ಕಾಲೇಜಿನ ಇಂದುಮತಿ ತಳವಾರ್ ಹಾಗೂ ಅಂಜಲಿಗೆ ಚಿನ್ನದ ಪದಕ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿಗಳು ಎಲ್ ಐ ಸಿ 67ನೇ ಸಪ್ತಹದಲ್ಲಿ ಹಲವಾರು ಪ್ರಶಸ್ತಿಗಳು

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 137.95 ಕೋಟಿ ವ್ಯವಹಾರ, ರೂ. 53.26 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ 9.50 ಡಿವಿಡೆಂಟ್

Suddi Udaya
error: Content is protected !!