July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದ ಜಿನಾಭಜನಾ ಸ್ಪರ್ಧೆಗೆ ಆಯ್ಕೆ

ಉಜಿರೆ: ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಉಪಾಧ್ಯಕ್ಷ ವೀರಾಂಗನ ಡಿ. ಅನಿತಾ ಸುರೇಂದ್ರ ಕುಮಾ‌ರ್ ಅವರ ಪರಿಕಲ್ಪನೆಯ, ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ಡಿ. ಸುರೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಬಜಗೋಳಿಯ ಸುಮ್ಮಗುತ್ತುವಿನಲ್ಲಿ ನಡೆದ ಭಾರತೀಯ ಜೈನ್ ಮಿಲನ್ ವಲಯ 8ರ 9ನೇ ಆವೃತ್ತಿಯ ಮಂಗಳೂರು ವಿಭಾಗ ಮಟ್ಟದ ಜಿನ ಭಜನಾ ಸ್ಪರ್ಧೆಯಲ್ಲಿ ಕಿರಿಯರ ವಿಭಾಗದಲ್ಲಿ ಉಜಿರೆಯ ಹರ್ಷದಾ ತಂಡ ನಾಲ್ಕನೇ ಸ್ಥಾನ ಹಾಗೂ ಬ್ರಾಮರಿ ತಂಡ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಈ ತಂಡದಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳು ಅಕ್ಷರ್, ನಿಷ್ಕಾ ಜೈನ್ ಭಾಗವಹಿಸಿ ಜನವರಿಯಲ್ಲಿ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ವಿಜೇತ ಜಿನಭಜನಾ ತಂಡಗಳಿಗೆ ಭಾರತೀಯ ಜೈನ್ ಮಿಲನ್ ವಲಯ 8 ಮಂಗಳೂರು ವಿಭಾಗದ ಅಧ್ಯಕ್ಷ ರಾದ ಸೋನಿಯಾ ಯಶೋವರ್ಮ ರವರು ಅಭಿನಂದಿಸಿರುತ್ತಾರೆ.
ಜನವರಿ 03 ಮತ್ತು 04 ರಂದು ನಡೆಯಲಿರುವ ರಾಜ್ಯಮಟ್ಟದ ಜಿನಾಭಜನಾ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ಸ್ಪರ್ಧಿಗಳಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾಲಕ್ಷ್ಮೀ ನಾಯಕ್ ಅಭಿನಂದಿಸಿದ್ದಾರೆ.

Related posts

ಬೆಳ್ತಂಗಡಿ : ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ

Suddi Udaya

ಗಾಳಿ ಮಳೆ: ದನದ ಕೊಟ್ಟಿಗೆಗೆ ಹಾನಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಹೊಸಂಗಡಿ: ಪೆರಿಂಜೆ ಮಲಿಯಾಳ ಪಲ್ಕೆಯಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಾವರ: ರಾಜಪಾದೆ ದಿ| ಕೊರಗು ಹೆಗ್ಡೆ ರವರ ಶ್ರದ್ದಾಂಜಲಿ ಸಭೆ

Suddi Udaya
error: Content is protected !!