37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಒಕ್ಕೂಟ ಬಲವರ್ಧನೆ ಬಗ್ಗೆ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ: ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಕ್ರಾಸ್ ಸಂಸ್ಥೆ ಬೆಂಗಳೂರು ಹಾಗೂ ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಸಿ.ಒ.ಡಿ.ಪಿ ಮಂಗಳೂರು, ಕಿಡ್ಸ್ ಪುತ್ತೂರು, ಸಂಪದ ಉಡುಪಿ ಹಾಗೂ ಕೆ.ಡಿ.ಡಿ.ಸಿ ಕಾರವಾರ ಸಹಕಾರದಿಂದ ಜೋನಲ್ ಮಟ್ಟದ ಒಕ್ಕೂಟ ಬಲವರ್ಧನೆ ಮತ್ತು ಸುಸ್ಥಿರತೆ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಡಿ.09 ರಂದು ಜ್ಞಾನನಿಲಯ ಬೆಳ್ತಂಗಡಿಯಲ್ಲಿ ಆಯೋಜಿಸಿಲಾಗಿತ್ತು.

ಕಾರ್ಯ ಕ್ರಮದ ಅಧ್ಯಕ್ಷತೆಯನ್ನು ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ಹಾಗೂ ಮಾನಿನಿ ರಾಜ್ಯ ಮಹಿಳಾ ಒಕ್ಕೂಟ ಅಧ್ಯಕ್ಷೆ ಶ್ರೀಮತಿ ಮಂಜುಳಾ ಜೋನ್ ವಹಿಸಿದ್ದರು. ಉದ್ಘಾಟನೆಯನ್ನು ಕ್ರಾಸ್ ಸಂಸ್ಥೆ ಬೆಂಗಳೂರು ಇಲ್ಲಿನ ಮಹಿಳಾ ಸಬಲೀಕರಣ ಯೋಜನೆಯ ರಾಜ್ಯ ಸಂಯೋಜಕರಾದ ವಂ. ಸಿ| ನ್ಯಾನ್ಸಿ ಲೋಬೊ ನೆರವೇರಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ. ಬಿನೋಯಿ ಎ.ಜೆ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಎಸ್.ಎಮ್.ಎಸ್.ಎಸ್ ಸಂಸ್ಥೆ ಶಿವಮೊಗ್ಗ ಇಲ್ಲಿನ ಯೋಜನಾ ಸಂಯೋಜಕ ಜಗದೀಶ್ ರವರು ಒಕ್ಕೂಟಗಳ ಬಲವರ್ಧನೆ ಮತ್ತು ಸುಸ್ಥಿರತೆ ಬಗ್ಗೆ ತರಬೇತಿ ನೀಡಿದರು.

ಸೀಮಾ ಮಥಾಯಸ್, ಸಿ.ಒ.ಡಿ.ಪಿ ಮಂಗಳೂರು, ಮರೀನಾ ಲುವಿಸ್, ಸಂಪದ ಉಡುಪಿ, ಸರಸ್ವತಿ, ಕಿಡ್ಸ್ ಪುತ್ತೂರು, ಹಾಗೂ ಶ್ರೀಮತಿ ರಾಜೇಶ್ವರಿ, ಕೆ.ಡಿ.ಡಿ.ಎಸ್ ಕಾರವಾರ ಇಲ್ಲಿನ ಒಕ್ಕೂಟ ಪ್ರತಿನಿಧಿಗಳು ಉಪಸ್ಥಿತರಿದ್ದರು. ಸಿ.ಒ.ಡಿ.ಪಿ ಸಂಸ್ಥೆಯ ಸಿಬ್ಬಂದಿಗಳು ಪ್ರಾರ್ಥನೆ ಗೀತೆ ಹಾಡಿದರು. ಡಿ.ಕೆ.ಆರ್.ಡಿ.ಎಸ್ ಕಾರ್ಯಕರ್ತ ಮಾರ್ಕ್ ಡಿ ಸೋಜ ಸ್ವಾಗತಿಸಿದರು. ಶ್ರೀಮತಿ ಮಂಜುಳಾ ವಂದಿಸಿದರು. ಸಂಯೋಜಕಿ ಶ್ರೀಮತಿ ಸಿಸಿಲ್ಯಾ ತಾವ್ರೊ ಕಾರ್ಯಕ್ರಮ ನಿರೂಪಿಸಿದರು.

Related posts

ನಡ ಸ.ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಕೊಯ್ಯೂರು ಗ್ರಾ.ಪಂ. ನ ಗ್ರಾಮ ಸಭೆ

Suddi Udaya

ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆ ಮತ್ತು ಸೇವಾಭಾರತಿಯಿಂದ 2025 ರ “ಸೇವಾ ಶ್ರೇಷ್ಠ” ಪುರಸ್ಕಾರ

Suddi Udaya

ಬೆಳ್ತಂಗಡಿ ಪ.ಪಂ., ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ “ಸ್ವಚ್ಛತೆಯತ್ತ ನಮ್ಮ ಚಿತ್ತ”

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ್ದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹಾಗೂ ಮಾಜಿ ಶಾಸಕ ಜೆ.ಆರ್ ಲೋಬೋ

Suddi Udaya

ಬೆಳ್ತಂಗಡಿ: ಮಾಲಾಡಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರು ಆರೋಪಿಗಳನ್ನು ಬಂಧಿಸಿದ ಪುಂಜಾಲಕಟ್ಟೆ ಪೊಲೀಸರು

Suddi Udaya
error: Content is protected !!