July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಒಕ್ಕೂಟ ಬಲವರ್ಧನೆ ಬಗ್ಗೆ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ: ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಕ್ರಾಸ್ ಸಂಸ್ಥೆ ಬೆಂಗಳೂರು ಹಾಗೂ ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಸಿ.ಒ.ಡಿ.ಪಿ ಮಂಗಳೂರು, ಕಿಡ್ಸ್ ಪುತ್ತೂರು, ಸಂಪದ ಉಡುಪಿ ಹಾಗೂ ಕೆ.ಡಿ.ಡಿ.ಸಿ ಕಾರವಾರ ಸಹಕಾರದಿಂದ ಜೋನಲ್ ಮಟ್ಟದ ಒಕ್ಕೂಟ ಬಲವರ್ಧನೆ ಮತ್ತು ಸುಸ್ಥಿರತೆ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಡಿ.09 ರಂದು ಜ್ಞಾನನಿಲಯ ಬೆಳ್ತಂಗಡಿಯಲ್ಲಿ ಆಯೋಜಿಸಿಲಾಗಿತ್ತು.

ಕಾರ್ಯ ಕ್ರಮದ ಅಧ್ಯಕ್ಷತೆಯನ್ನು ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ಹಾಗೂ ಮಾನಿನಿ ರಾಜ್ಯ ಮಹಿಳಾ ಒಕ್ಕೂಟ ಅಧ್ಯಕ್ಷೆ ಶ್ರೀಮತಿ ಮಂಜುಳಾ ಜೋನ್ ವಹಿಸಿದ್ದರು. ಉದ್ಘಾಟನೆಯನ್ನು ಕ್ರಾಸ್ ಸಂಸ್ಥೆ ಬೆಂಗಳೂರು ಇಲ್ಲಿನ ಮಹಿಳಾ ಸಬಲೀಕರಣ ಯೋಜನೆಯ ರಾಜ್ಯ ಸಂಯೋಜಕರಾದ ವಂ. ಸಿ| ನ್ಯಾನ್ಸಿ ಲೋಬೊ ನೆರವೇರಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ. ಬಿನೋಯಿ ಎ.ಜೆ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಎಸ್.ಎಮ್.ಎಸ್.ಎಸ್ ಸಂಸ್ಥೆ ಶಿವಮೊಗ್ಗ ಇಲ್ಲಿನ ಯೋಜನಾ ಸಂಯೋಜಕ ಜಗದೀಶ್ ರವರು ಒಕ್ಕೂಟಗಳ ಬಲವರ್ಧನೆ ಮತ್ತು ಸುಸ್ಥಿರತೆ ಬಗ್ಗೆ ತರಬೇತಿ ನೀಡಿದರು.

ಸೀಮಾ ಮಥಾಯಸ್, ಸಿ.ಒ.ಡಿ.ಪಿ ಮಂಗಳೂರು, ಮರೀನಾ ಲುವಿಸ್, ಸಂಪದ ಉಡುಪಿ, ಸರಸ್ವತಿ, ಕಿಡ್ಸ್ ಪುತ್ತೂರು, ಹಾಗೂ ಶ್ರೀಮತಿ ರಾಜೇಶ್ವರಿ, ಕೆ.ಡಿ.ಡಿ.ಎಸ್ ಕಾರವಾರ ಇಲ್ಲಿನ ಒಕ್ಕೂಟ ಪ್ರತಿನಿಧಿಗಳು ಉಪಸ್ಥಿತರಿದ್ದರು. ಸಿ.ಒ.ಡಿ.ಪಿ ಸಂಸ್ಥೆಯ ಸಿಬ್ಬಂದಿಗಳು ಪ್ರಾರ್ಥನೆ ಗೀತೆ ಹಾಡಿದರು. ಡಿ.ಕೆ.ಆರ್.ಡಿ.ಎಸ್ ಕಾರ್ಯಕರ್ತ ಮಾರ್ಕ್ ಡಿ ಸೋಜ ಸ್ವಾಗತಿಸಿದರು. ಶ್ರೀಮತಿ ಮಂಜುಳಾ ವಂದಿಸಿದರು. ಸಂಯೋಜಕಿ ಶ್ರೀಮತಿ ಸಿಸಿಲ್ಯಾ ತಾವ್ರೊ ಕಾರ್ಯಕ್ರಮ ನಿರೂಪಿಸಿದರು.

Related posts

ಗೇರುಕಟ್ಟೆ ಶ್ರೀಧರ ಮುಗೇರ ಸಂಶಯಾಸ್ಪದ ಸಾವಿನ ಪ್ರಕರಣದ ಸಮಗ್ರ ತನಿಖೆ ನಡೆಸಬೇಕು ಪ.ಜಾತಿ, ಪಂಗಡ ಕುಂದುಕೊರತೆ ಸಭೆಯಲ್ಲಿ ದಲಿತ ಮುಖಂಡರ ಒತ್ತಾಯ

Suddi Udaya

ವಿದುಷಿ ವಿದ್ಯಾಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್‌, ಅರ್ವ ವತಿಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Suddi Udaya

ಕೊಕ್ಕಡ: ದಿ| ಸುಹಾಸ್ ಶೆಟ್ಟಿ ಹುಟ್ಟು ಹಬ್ಬದ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ಮೇವು ಸಮರ್ಪಣೆ

Suddi Udaya

ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ಮಾಹಿತಿ

Suddi Udaya

ಪದ್ಮುಂಜ: ಮಲೆಂಗಲ್ಲು ನಿವಾಸಿ ಗೋಪಿ ನಿಧನ

Suddi Udaya

ಅರಸಿನಮಕ್ಕಿ: ಮನೆಗೆ ಅಕ್ರಮ ಪ್ರವೇಶ, ಅವಾಚ್ಯ ಶಬ್ದಗಳಿಂದ ಬೈದು , ಜೀವ ಬೆದರಿಕೆ: ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!