September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಿ| ಪದ್ಮನಾಭ ಆಚಾರ್ಯರ ಕುಟುಂಬಕ್ಕೆ ಸ್ನೇಹಿತರ ನೆರವು: ಶ್ರಮದಾನದ ಮೂಲಕ ಮನೆ ದುರಸ್ತಿ

ಕೊಕ್ಕಡ: ಕೆಲವು ತಿಂಗಳ ಹಿಂದೆ ಹೃದಯಾಘಾತದಿಂದ ನಿಧನರಾದ ಕೊಕ್ಕಡ ಗ್ರಾಮದ ಪದ್ಮನಾಭ ಆಚಾರ್ಯ ಅವರ ಮನೆಯು ವಾಸಿಸಲು ಯೋಗ್ಯವಾಗದ ಮಟ್ಟಿಗೆ ಹಾಳಾಗಿದ್ದು ಮೃತರ ಆಪ್ತ ಸ್ನೇಹಿತರು ಹಾಗೂ ದಾನಿಗಳು ಶ್ರಮದಾನದ ಮೂಲಕ ಆಚಾರ್ಯರ ಮನೆಯ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಂಡರು.

ಮನೆಗೆ ಹೊಸ ರೂಪ ನೀಡುವ ಉದ್ದೇಶದಿಂದ ಶ್ರಮದಾನ ಕಾರ್ಯ ತೀವ್ರಗತಿಯಲ್ಲಿ ನಡೆಯಿತು. ಕುಟುಂಬದ ಸಂಕಷ್ಟದ ವೇಳೆಯಲ್ಲಿ ನಾವು ಇದ್ದೇವೆ ಎಂಬ ಭರವಸೆಯನ್ನು ನೀಡಿ, ಮೃತರ ಸ್ನೇಹಿತರ ಬಳಗವೇ ಸಂಪೂರ್ಣ ಕಾರ್ಯವನ್ನು ಮುನ್ನಡೆಸಿದೆ.

ಈ ಕಾರ್ಯಕ್ಕೆ ಮೃತರ ಆಪ್ತ ಸ್ನೇಹಿತ, ಸಮಾಜಸೇವಕ ತುಕ್ರಪ್ಪ ಶೆಟ್ಟಿ ನೂಜೆ, ಉದ್ಯಮಿ ನಾರಾಯಣಗೌಡ, ಸೌತಡ್ಕ ಮಹಾಗಣಪತಿ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಶಾಂತಪ್ಪ ಮಡಿವಾಳ, ರಜಾಕ್ ಕೊಕ್ಕಡ, ಜಾರ್ಜ್, ತಾಲೂಕು ಪಂಚಾಯತಿ ಮಾಜಿ ಸದಸ್ಯಲಕ್ಷ್ಮೀನಾರಾಯಣ ಇವರ ನೇತೃತ್ವದಲ್ಲಿ ಅವರೊಂದಿಗೆ ಶ್ಯಾಮರಾಜ್ ಪಟ್ರಮೆ, ಕಾಂಟ್ರಾಕ್ಟರ್ ಫಾರೂಕ್ ಮಡೆಂಜೋಡಿ, ಬಾಲಕೃಷ್ಣ ಗೌಡ ಬಳಕ್ಕ, ಧನಂಜಯ ಪಟ್ರಮೆ, ಜನಾರ್ಧನ, ಲಾರೆನ್ಸ್ ಪಾಯಿಸ್, ಶ್ರೀಧರ ಗೌಡ ಹಾಗೂ ಮೃತರ ಪತ್ನಿ, ಮಕ್ಕಳು, ಸಹೋದರ ಸೇರಿದಂತೆ ಸೇರಿ ಸುಮಾರು 70 ಮಂದಿ ಸ್ನೇಹಿತರ ತಂಡ ಶ್ರಮದಾನದಲ್ಲಿ ಪಾಲ್ಗೊಂಡು ಮನೆ ದುರಸ್ತಿಗೆ ಕೈ ಜೋಡಿಸಿದರು.

Related posts

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಶರತ್ ಕೃಷ್ಣ ಪಡ್ವೆಟ್ನಾಯ ಭೇಟಿ : ಸಕಲ ಸಿದ್ಧತೆಗಳ ವೀಕ್ಷಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರಿಂದ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ : ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕನ್ಯಾಡಿ ಸರಕಾರಿ ಉ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಸಂವಿಧಾನ ದಿನಾಚರಣೆಯ ಪ್ರಯುಕ್ತ ರಸಪ್ರಶ್ನೆ ಕಾರ್ಯಕ್ರಮ

Suddi Udaya
error: Content is protected !!