24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಿ| ಪದ್ಮನಾಭ ಆಚಾರ್ಯರ ಕುಟುಂಬಕ್ಕೆ ಸ್ನೇಹಿತರ ನೆರವು: ಶ್ರಮದಾನದ ಮೂಲಕ ಮನೆ ದುರಸ್ತಿ

ಕೊಕ್ಕಡ: ಕೆಲವು ತಿಂಗಳ ಹಿಂದೆ ಹೃದಯಾಘಾತದಿಂದ ನಿಧನರಾದ ಕೊಕ್ಕಡ ಗ್ರಾಮದ ಪದ್ಮನಾಭ ಆಚಾರ್ಯ ಅವರ ಮನೆಯು ವಾಸಿಸಲು ಯೋಗ್ಯವಾಗದ ಮಟ್ಟಿಗೆ ಹಾಳಾಗಿದ್ದು ಮೃತರ ಆಪ್ತ ಸ್ನೇಹಿತರು ಹಾಗೂ ದಾನಿಗಳು ಶ್ರಮದಾನದ ಮೂಲಕ ಆಚಾರ್ಯರ ಮನೆಯ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಂಡರು.

ಮನೆಗೆ ಹೊಸ ರೂಪ ನೀಡುವ ಉದ್ದೇಶದಿಂದ ಶ್ರಮದಾನ ಕಾರ್ಯ ತೀವ್ರಗತಿಯಲ್ಲಿ ನಡೆಯಿತು. ಕುಟುಂಬದ ಸಂಕಷ್ಟದ ವೇಳೆಯಲ್ಲಿ ನಾವು ಇದ್ದೇವೆ ಎಂಬ ಭರವಸೆಯನ್ನು ನೀಡಿ, ಮೃತರ ಸ್ನೇಹಿತರ ಬಳಗವೇ ಸಂಪೂರ್ಣ ಕಾರ್ಯವನ್ನು ಮುನ್ನಡೆಸಿದೆ.

ಈ ಕಾರ್ಯಕ್ಕೆ ಮೃತರ ಆಪ್ತ ಸ್ನೇಹಿತ, ಸಮಾಜಸೇವಕ ತುಕ್ರಪ್ಪ ಶೆಟ್ಟಿ ನೂಜೆ, ಉದ್ಯಮಿ ನಾರಾಯಣಗೌಡ, ಸೌತಡ್ಕ ಮಹಾಗಣಪತಿ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಶಾಂತಪ್ಪ ಮಡಿವಾಳ, ರಜಾಕ್ ಕೊಕ್ಕಡ, ಜಾರ್ಜ್, ತಾಲೂಕು ಪಂಚಾಯತಿ ಮಾಜಿ ಸದಸ್ಯಲಕ್ಷ್ಮೀನಾರಾಯಣ ಇವರ ನೇತೃತ್ವದಲ್ಲಿ ಅವರೊಂದಿಗೆ ಶ್ಯಾಮರಾಜ್ ಪಟ್ರಮೆ, ಕಾಂಟ್ರಾಕ್ಟರ್ ಫಾರೂಕ್ ಮಡೆಂಜೋಡಿ, ಬಾಲಕೃಷ್ಣ ಗೌಡ ಬಳಕ್ಕ, ಧನಂಜಯ ಪಟ್ರಮೆ, ಜನಾರ್ಧನ, ಲಾರೆನ್ಸ್ ಪಾಯಿಸ್, ಶ್ರೀಧರ ಗೌಡ ಹಾಗೂ ಮೃತರ ಪತ್ನಿ, ಮಕ್ಕಳು, ಸಹೋದರ ಸೇರಿದಂತೆ ಸೇರಿ ಸುಮಾರು 70 ಮಂದಿ ಸ್ನೇಹಿತರ ತಂಡ ಶ್ರಮದಾನದಲ್ಲಿ ಪಾಲ್ಗೊಂಡು ಮನೆ ದುರಸ್ತಿಗೆ ಕೈ ಜೋಡಿಸಿದರು.

Related posts

ಗುರುವಾಯನಕರೆ ವ್ಯಾಪ್ತಿಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya

ಶಿಬಾಜೆ ಭಂಡಿಹೊಳೆಯಲ್ಲಿ ಪ್ರಕೃತಿ ಪ್ರಿಯರಿಂದ ರಸ್ತೆ ಸ್ವಚ್ಛತಾ ಅಭಿಯಾನ

Suddi Udaya

ಕರುಂ ಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya

ಉಜಿರೆಯಲ್ಲಿ ನಡೆದ ಆ್ಯಸಿಡ್ ದಾಳಿ ಪ್ರಕರಣ; 29 ವರ್ಷದ ಬಳಿಕ ಆರೋಪಿ ದೋಷಮುಕ್ತ

Suddi Udaya

ಎ.26: ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ: 16 ನಿರ್ದೇಶಕ ಸ್ಥಾನಕ್ಕೆ 41 ಮಂದಿ ಅಭ್ಯರ್ಥಿಗಳ ನಡುವೆ ಸ್ಪರ್ಧೆ

Suddi Udaya
error: Content is protected !!