25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಿ| ಪದ್ಮನಾಭ ಆಚಾರ್ಯರ ಕುಟುಂಬಕ್ಕೆ ಸ್ನೇಹಿತರ ನೆರವು: ಶ್ರಮದಾನದ ಮೂಲಕ ಮನೆ ದುರಸ್ತಿ

ಕೊಕ್ಕಡ: ಕೆಲವು ತಿಂಗಳ ಹಿಂದೆ ಹೃದಯಾಘಾತದಿಂದ ನಿಧನರಾದ ಕೊಕ್ಕಡ ಗ್ರಾಮದ ಪದ್ಮನಾಭ ಆಚಾರ್ಯ ಅವರ ಮನೆಯು ವಾಸಿಸಲು ಯೋಗ್ಯವಾಗದ ಮಟ್ಟಿಗೆ ಹಾಳಾಗಿದ್ದು ಮೃತರ ಆಪ್ತ ಸ್ನೇಹಿತರು ಹಾಗೂ ದಾನಿಗಳು ಶ್ರಮದಾನದ ಮೂಲಕ ಆಚಾರ್ಯರ ಮನೆಯ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಂಡರು.

ಮನೆಗೆ ಹೊಸ ರೂಪ ನೀಡುವ ಉದ್ದೇಶದಿಂದ ಶ್ರಮದಾನ ಕಾರ್ಯ ತೀವ್ರಗತಿಯಲ್ಲಿ ನಡೆಯಿತು. ಕುಟುಂಬದ ಸಂಕಷ್ಟದ ವೇಳೆಯಲ್ಲಿ ನಾವು ಇದ್ದೇವೆ ಎಂಬ ಭರವಸೆಯನ್ನು ನೀಡಿ, ಮೃತರ ಸ್ನೇಹಿತರ ಬಳಗವೇ ಸಂಪೂರ್ಣ ಕಾರ್ಯವನ್ನು ಮುನ್ನಡೆಸಿದೆ.

ಈ ಕಾರ್ಯಕ್ಕೆ ಮೃತರ ಆಪ್ತ ಸ್ನೇಹಿತ, ಸಮಾಜಸೇವಕ ತುಕ್ರಪ್ಪ ಶೆಟ್ಟಿ ನೂಜೆ, ಉದ್ಯಮಿ ನಾರಾಯಣಗೌಡ, ಸೌತಡ್ಕ ಮಹಾಗಣಪತಿ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಶಾಂತಪ್ಪ ಮಡಿವಾಳ, ರಜಾಕ್ ಕೊಕ್ಕಡ, ಜಾರ್ಜ್, ತಾಲೂಕು ಪಂಚಾಯತಿ ಮಾಜಿ ಸದಸ್ಯಲಕ್ಷ್ಮೀನಾರಾಯಣ ಇವರ ನೇತೃತ್ವದಲ್ಲಿ ಅವರೊಂದಿಗೆ ಶ್ಯಾಮರಾಜ್ ಪಟ್ರಮೆ, ಕಾಂಟ್ರಾಕ್ಟರ್ ಫಾರೂಕ್ ಮಡೆಂಜೋಡಿ, ಬಾಲಕೃಷ್ಣ ಗೌಡ ಬಳಕ್ಕ, ಧನಂಜಯ ಪಟ್ರಮೆ, ಜನಾರ್ಧನ, ಲಾರೆನ್ಸ್ ಪಾಯಿಸ್, ಶ್ರೀಧರ ಗೌಡ ಹಾಗೂ ಮೃತರ ಪತ್ನಿ, ಮಕ್ಕಳು, ಸಹೋದರ ಸೇರಿದಂತೆ ಸೇರಿ ಸುಮಾರು 70 ಮಂದಿ ಸ್ನೇಹಿತರ ತಂಡ ಶ್ರಮದಾನದಲ್ಲಿ ಪಾಲ್ಗೊಂಡು ಮನೆ ದುರಸ್ತಿಗೆ ಕೈ ಜೋಡಿಸಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹಿಂಭಾಗದಲ್ಲಿ ಕ್ಷೇತ್ರದ ವತಿಯಿಂದ ರಸ್ತೆಗೆ ಅಳವಡಿಸಿದ ಗೇಟು ತೆರವು

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಭೇಟಿ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಮಕ್ಕಳ ಕುಣಿತ ಭಜನಾ ತಂಡದ ಉದ್ಘಾಟನಾ ಕಾರ್ಯಕ್ರಮ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ದನ್ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ದ್ವೇಷ ಭಾಷಣ ಆರೋಪ: ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧದ ಎಫ್‌ಐ ಆರ್‌ಗೆ ಹೈಕೋರ್ಟ್ ತಡೆ

Suddi Udaya
error: Content is protected !!