23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ ಪ್ರತಿಭಟನೆ

ಬೆಳ್ತಂಗಡಿ : ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಪುತ್ತೂರು ಜಿಲ್ಲೆ ವತಿಯಿಂದ ಗೋ ಹತ್ಯೆಯನ್ನು ತಡೆಯಲು ಹಿಂದಿನ ಸರ್ಕಾರ ಜಾರಿಗೆ ತಂದಿದ್ದ ಕಾನೂನನ್ನು ಸಡಿಲಗೊಳಿಸಿ ಗೋ ಹತ್ಯೆಗೆ ಸಹಕಾರ, ಪ್ರೋತ್ಸಾಹ ನೀಡಲು ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿರುವ ನೂತನ ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ಬೃಹತ್ ಪ್ರತಿಭಟನೆಯು ಮಿನಿ ವಿಧಾನ ಸೌಧ ಮುಂಭಾಗದಲ್ಲಿ ನಡೆಯಿತು.

ಈ ಸಂದರ್ಭ ನೂತನ ಗೋ ಸಂರಕ್ಷಣಾ ತಿದ್ದುಪಡಿ ನಡೆಸಿರುವುದನ್ನು ಹಿಂಪಡೆಯಬೇಕೆಂದು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ವಿ.ಹಿಂ.ಪ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷ ವಿಷ್ಣು ಮರಾಟೆ, ವಿಹೆಚ್ ಪಿ ಕಾರ್ಯದರ್ಶಿ ನವೀನ್ ನೆರಿಯ, ವಿ.ಹಿಂ.ಪ ಗೋ ರಕ್ಷಕ್ ಪ್ರಮುಖ್ ಗಣೇಶ್ ಕಳೆಂಜ, ಜಿಲ್ಲೆಯ ಸಹ ಸಂಯೋಜಕ ದಿನೇಶ್ ಚಾರ್ಮಾಡಿ, ಸತೀಶ್ ನೆರಿಯ, ರಮೇಶ್ ಮುಂಡತ್ತೋಡಿ, ನಾಗೇಶ್ ಕಲ್ಮಂಜ, ಸುಧೀರ್ ಚಾರ್ಮಾಡಿ, ಶಶಿರಾಜ್ ಗುರುವಾಯನಕೆರೆ, ಶರತ್ ಶೆಟ್ಟಿ ಸಂಘ ಪರಿವಾರದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮಡಂತ್ಯಾರು ವಲಯ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆದ್ರಬೆಟ್ಟು ಉದ್ಯಮಿ ಹಮೀದ್ ನಿಧನ

Suddi Udaya

ಶ್ರೀ ಕ್ಷೇತ್ರ ಕೊಲಕಾಡಿಯಿಂದ ಧರ್ಮಸ್ಥಳ ಭೇಟಿ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ನಿಧಿ ವಿತರಣೆ

Suddi Udaya

ಕೃಷಿಕರ ವಿರೋಧಿ, ಪರಿಶಿಷ್ಟ ವರ್ಗ ಕಡೆಗಣಿಸಿದ ಬಜೆಟ್ – ಜಿಲ್ಲಾ ಕೆ ಡಿ ಪಿ ಸದಸ್ಯ ನ್ಯಾಯವಾದಿ ಸಂತೋಷ್ ಕುಮಾರ್

Suddi Udaya
error: Content is protected !!