September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಎನ್.ಎಸ್.ಎಸ್ ಘಟಕ ವತಿಯಿಂದ ಮಂಗಳತೇರು ಶಾಲೆಯಲ್ಲಿ ನಾಯಕತ್ವ ಶಿಬಿರ

ವೇಣೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ವೇಣೂರು ಇಲ್ಲಿನ ರಾಷ್ಟಿçÃಯ ಸೇವಾ ಯೋಜನಾ ಘಟಕ ವತಿಯಿಂದ ಸ.ಹಿ. ಪ್ರಾಥಮಿಕ ಶಾಲೆ ಮಂಗಳತೇರು ಇಲ್ಲಿ ನಡೆದ ವಿದ್ಯಾರ್ಥಿ ನಾಯಕತ್ವ ಶಿಬಿರದ ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾನವೀಯ ಮೌಲ್ಯಗಳ ಬಗ್ಗೆ ಮಾಹಿತಿ ನೀಡಿದ ಬಿ. ಸೋಮಶೇಖರ ಶೆಟ್ಟಿ ಇವರು ನಮ್ಮ ನೋವು ನಮಗೆ ಅರ್ಥವಾದರೆ, ನಾವು ಬದುಕಿದ್ದೇವೆ ಎಂದು ಅರ್ಥ ಬೇರೆಯವರ ನೋವು ಅರ್ಥವಾದರೆ ನಾವು ಮನುಷ್ಯರು ಎಂದು ಹೇಳಬಹುದು, ನಮ್ಮ ಒಳಿತು, ಕೆಡುಕುಗಳಿಗೆ ನಾವೇ ಕಾರಣ, ಜಗತ್ತಿನ ಶ್ರೇಷ್ಠ ಸಂಪತ್ತು ಮಾನವನ ವ್ಯಕ್ತಿತ್ವದಲ್ಲಿ ಅಡಗಿದೆ, ಸಾಧನೆ ಇಲ್ಲದೆ ಸತ್ತರೆ ಸಾವಿಗೆ ಅವಮಾನ, ಆದರ್ಶ ಇಲ್ಲದೆ ಬದುಕಿದರೆ ಬದುಕಿಗೆ ಅವಮಾನ, ಸಿಕ್ಕಿದ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ ಎಂದರು.


ಸಮಾರಂಭದ ಅಧ್ಯಕ್ಷತೆಯನ್ನು ಎಂ ಜೆ ಎಂ ಉಳ್ತೂರು ಇಲ್ಲಿನ ಧರ್ಮ ಗುರುಗಳಾದ ಮಹಮ್ಮದ್ ತೌಸಿಫ್ ಸಹದಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಂತ ರಾಜ್ ಕುಮಾರ್, ಕೃಷ್ಣಪ್ಪ ಪೂಜಾರಿ, ಸುಧಾಕರ ಪೂಜಾರಿ, ದಯಾನಂದ ದೇವಾಡಿಗ, ರಮ್ಯಾ, ಶ್ರೀಮತಿ ಶಕುಂತಳಾ, ಶಶಿಕಲಾ, ವಿಶ್ವನಾಥ ಪೂಜಾರಿ, ಉಮೇಶ್ ದೇವಾಡಿಗ, ವೀಣಾ ಟಿ., ಶ್ರೀಮತಿ ಪುಷ್ಪಲತಾ ಉಪಸ್ಥಿತರಿದ್ದರು. ಕಾರ್ಯಕ್ರಮ ಅಧಿಕಾರಿಗಳಾದ ಪದ್ಮಪ್ರಸಾದ್ ಬಿ ಹಾಗೂ ಸತೀಶ್ ಸಂಘಟಿಸಿದ್ದರು.

Related posts

ಚಾರ್ಮಾಡಿಯಲ್ಲಿ ಕಾಡಾನೆ ಹಾವಳಿ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ.ಸಂಘದ ಚುನಾವಣೆಯ ಕಾಂಗ್ರೆಸ್ ಬೆಂಬಲಿತ ವಿಜೇತ ಹಾಗೂ ಸ್ಪರ್ದಿಸಿದ ಅಭ್ಯರ್ಥಿಗಳಿಂದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ

Suddi Udaya

ತೆಂಕಕಾರಂದೂರು: ತೆಂಗಿನ ಮರ ಬಿದ್ದು ಮನೆಗೆ ಹಾನಿ: ಪ್ರಾಣಾಪಾಯದಿಂದ ಪಾರು

Suddi Udaya

ಅರಸಿನಮಕ್ಕಿ: ಓಮಿನಿ ಕಾರು ಮತ್ತು ಲಾರಿ ನಡುವೆ ಅಪಘಾತ

Suddi Udaya

ನೆರಿಯ ಆಲಂಗಾಯಿಗೆ ರೂ.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ವಾಲ್ಮೀಕಿ ಆಶ್ರಮ ಶಾಲೆಗೆ ಶಿಲಾನ್ಯಾಸ

Suddi Udaya

ಕೇಂದ್ರ ಸರ್ಕಾರ ನೇಮಿಸಿರುವ ಜಗದಾಂಬಿಕ ಪಾಲ್ ಅಧ್ಯಕ್ಷತೆಯ ಜಂಟಿ ಸದನ ಸಮಿತಿಗೆ ರಾಜ್ಯದ ರೈತರು ಹಾಗೂ ಹಿಂದೂಗಳು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತಾದ ವಿಸ್ತೃತ ವರದಿ ಸಲ್ಲಿಸಿಕೆ

Suddi Udaya
error: Content is protected !!