25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಎನ್.ಎಸ್.ಎಸ್ ಘಟಕ ವತಿಯಿಂದ ಮಂಗಳತೇರು ಶಾಲೆಯಲ್ಲಿ ನಾಯಕತ್ವ ಶಿಬಿರ

ವೇಣೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ವೇಣೂರು ಇಲ್ಲಿನ ರಾಷ್ಟಿçÃಯ ಸೇವಾ ಯೋಜನಾ ಘಟಕ ವತಿಯಿಂದ ಸ.ಹಿ. ಪ್ರಾಥಮಿಕ ಶಾಲೆ ಮಂಗಳತೇರು ಇಲ್ಲಿ ನಡೆದ ವಿದ್ಯಾರ್ಥಿ ನಾಯಕತ್ವ ಶಿಬಿರದ ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾನವೀಯ ಮೌಲ್ಯಗಳ ಬಗ್ಗೆ ಮಾಹಿತಿ ನೀಡಿದ ಬಿ. ಸೋಮಶೇಖರ ಶೆಟ್ಟಿ ಇವರು ನಮ್ಮ ನೋವು ನಮಗೆ ಅರ್ಥವಾದರೆ, ನಾವು ಬದುಕಿದ್ದೇವೆ ಎಂದು ಅರ್ಥ ಬೇರೆಯವರ ನೋವು ಅರ್ಥವಾದರೆ ನಾವು ಮನುಷ್ಯರು ಎಂದು ಹೇಳಬಹುದು, ನಮ್ಮ ಒಳಿತು, ಕೆಡುಕುಗಳಿಗೆ ನಾವೇ ಕಾರಣ, ಜಗತ್ತಿನ ಶ್ರೇಷ್ಠ ಸಂಪತ್ತು ಮಾನವನ ವ್ಯಕ್ತಿತ್ವದಲ್ಲಿ ಅಡಗಿದೆ, ಸಾಧನೆ ಇಲ್ಲದೆ ಸತ್ತರೆ ಸಾವಿಗೆ ಅವಮಾನ, ಆದರ್ಶ ಇಲ್ಲದೆ ಬದುಕಿದರೆ ಬದುಕಿಗೆ ಅವಮಾನ, ಸಿಕ್ಕಿದ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ ಎಂದರು.


ಸಮಾರಂಭದ ಅಧ್ಯಕ್ಷತೆಯನ್ನು ಎಂ ಜೆ ಎಂ ಉಳ್ತೂರು ಇಲ್ಲಿನ ಧರ್ಮ ಗುರುಗಳಾದ ಮಹಮ್ಮದ್ ತೌಸಿಫ್ ಸಹದಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಂತ ರಾಜ್ ಕುಮಾರ್, ಕೃಷ್ಣಪ್ಪ ಪೂಜಾರಿ, ಸುಧಾಕರ ಪೂಜಾರಿ, ದಯಾನಂದ ದೇವಾಡಿಗ, ರಮ್ಯಾ, ಶ್ರೀಮತಿ ಶಕುಂತಳಾ, ಶಶಿಕಲಾ, ವಿಶ್ವನಾಥ ಪೂಜಾರಿ, ಉಮೇಶ್ ದೇವಾಡಿಗ, ವೀಣಾ ಟಿ., ಶ್ರೀಮತಿ ಪುಷ್ಪಲತಾ ಉಪಸ್ಥಿತರಿದ್ದರು. ಕಾರ್ಯಕ್ರಮ ಅಧಿಕಾರಿಗಳಾದ ಪದ್ಮಪ್ರಸಾದ್ ಬಿ ಹಾಗೂ ಸತೀಶ್ ಸಂಘಟಿಸಿದ್ದರು.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ-200 ರಲ್ಲಿ ಸ್ವೀಪ್ ಸಮಿತಿಯಿಂದ ತಾಲೂಕಿನ 241 ಬಿಎಲ್ ಒ ಗಳಿಗೆ ತರಬೇತಿ

Suddi Udaya

‍ಮುಂಡಾಜೆ: ಇಂದುಮತಿ ಫಡಕೆ ನಿಧನ

Suddi Udaya

ಬೆಳಾಲು ಎಸ್.ಡಿ.ಎಮ್. ಅನುದಾನಿತ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಪೆರಿಯಶಾಂತಿ-ಕುದ್ರಾಯ: ಅನಧಿಕೃತ ಗೂಡಂಗಡಿಗಳ ತೆರವಿಗೆ ಅರಣ್ಯ ಇಲಾಖೆ ಸೂಚನೆ

Suddi Udaya

ಮುಂಡ್ರಪಾಡಿ ಕಿರಿಯ ಪ್ರಾಥಮಿಕ ಶಾಲೆಗೆ 25 ನಲಿ ಕಲಿ ಕುರ್ಚಿ ಕೊಡುಗೆ

Suddi Udaya

ಬೆಳ್ತಂಗಡಿಯಲ್ಲಿ “ರಾಜಧಾನಿ ಗೋಲ್ಡ್&ಡೈಮಂಡ್” ವಿಸ್ತೃತ ಮಳಿಗೆ ಉದ್ಘಾಟನೆ

Suddi Udaya
error: Content is protected !!