23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಒಕ್ಕೂಟ ಬಲವರ್ಧನೆ ಬಗ್ಗೆ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ: ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಕ್ರಾಸ್ ಸಂಸ್ಥೆ ಬೆಂಗಳೂರು ಹಾಗೂ ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಸಿ.ಒ.ಡಿ.ಪಿ ಮಂಗಳೂರು, ಕಿಡ್ಸ್ ಪುತ್ತೂರು, ಸಂಪದ ಉಡುಪಿ ಹಾಗೂ ಕೆ.ಡಿ.ಡಿ.ಸಿ ಕಾರವಾರ ಸಹಕಾರದಿಂದ ಜೋನಲ್ ಮಟ್ಟದ ಒಕ್ಕೂಟ ಬಲವರ್ಧನೆ ಮತ್ತು ಸುಸ್ಥಿರತೆ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಡಿ.09 ರಂದು ಜ್ಞಾನನಿಲಯ ಬೆಳ್ತಂಗಡಿಯಲ್ಲಿ ಆಯೋಜಿಸಿಲಾಗಿತ್ತು.

ಕಾರ್ಯ ಕ್ರಮದ ಅಧ್ಯಕ್ಷತೆಯನ್ನು ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ಹಾಗೂ ಮಾನಿನಿ ರಾಜ್ಯ ಮಹಿಳಾ ಒಕ್ಕೂಟ ಅಧ್ಯಕ್ಷೆ ಶ್ರೀಮತಿ ಮಂಜುಳಾ ಜೋನ್ ವಹಿಸಿದ್ದರು. ಉದ್ಘಾಟನೆಯನ್ನು ಕ್ರಾಸ್ ಸಂಸ್ಥೆ ಬೆಂಗಳೂರು ಇಲ್ಲಿನ ಮಹಿಳಾ ಸಬಲೀಕರಣ ಯೋಜನೆಯ ರಾಜ್ಯ ಸಂಯೋಜಕರಾದ ವಂ. ಸಿ| ನ್ಯಾನ್ಸಿ ಲೋಬೊ ನೆರವೇರಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ. ಬಿನೋಯಿ ಎ.ಜೆ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಎಸ್.ಎಮ್.ಎಸ್.ಎಸ್ ಸಂಸ್ಥೆ ಶಿವಮೊಗ್ಗ ಇಲ್ಲಿನ ಯೋಜನಾ ಸಂಯೋಜಕ ಜಗದೀಶ್ ರವರು ಒಕ್ಕೂಟಗಳ ಬಲವರ್ಧನೆ ಮತ್ತು ಸುಸ್ಥಿರತೆ ಬಗ್ಗೆ ತರಬೇತಿ ನೀಡಿದರು.

ಸೀಮಾ ಮಥಾಯಸ್, ಸಿ.ಒ.ಡಿ.ಪಿ ಮಂಗಳೂರು, ಮರೀನಾ ಲುವಿಸ್, ಸಂಪದ ಉಡುಪಿ, ಸರಸ್ವತಿ, ಕಿಡ್ಸ್ ಪುತ್ತೂರು, ಹಾಗೂ ಶ್ರೀಮತಿ ರಾಜೇಶ್ವರಿ, ಕೆ.ಡಿ.ಡಿ.ಎಸ್ ಕಾರವಾರ ಇಲ್ಲಿನ ಒಕ್ಕೂಟ ಪ್ರತಿನಿಧಿಗಳು ಉಪಸ್ಥಿತರಿದ್ದರು. ಸಿ.ಒ.ಡಿ.ಪಿ ಸಂಸ್ಥೆಯ ಸಿಬ್ಬಂದಿಗಳು ಪ್ರಾರ್ಥನೆ ಗೀತೆ ಹಾಡಿದರು. ಡಿ.ಕೆ.ಆರ್.ಡಿ.ಎಸ್ ಕಾರ್ಯಕರ್ತ ಮಾರ್ಕ್ ಡಿ ಸೋಜ ಸ್ವಾಗತಿಸಿದರು. ಶ್ರೀಮತಿ ಮಂಜುಳಾ ವಂದಿಸಿದರು. ಸಂಯೋಜಕಿ ಶ್ರೀಮತಿ ಸಿಸಿಲ್ಯಾ ತಾವ್ರೊ ಕಾರ್ಯಕ್ರಮ ನಿರೂಪಿಸಿದರು.

Related posts

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಆರಂಬೋಡಿ ಪ್ರಗತಿಪರ ಕೃಷಿಕ ಮುತ್ತಯ್ಯ ಪೂಜಾರಿ ನಿಧನ

Suddi Udaya

ಮಾ.22 ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನಶಾಸ್ತ್ರ ವಿಭಾಗದಿಂದ ಅಂತರಾಷ್ಟ್ರೀ ಯ ವಿಚಾರ ಸಂಕಿರಣ

Suddi Udaya

ಭೂಸೇನೆಯಲ್ಲಿ 22 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಎ.ಸಿ.ಪಿ ಹವಾಲ್ದಾರ್ ದೇವಪ್ರಸಾದ್ ಗೌಡ ರವರಿಗೆ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಶಶಾಂಕ್ ಬೊಲ್ಮ ಅವರಿಗೆ ಪಿಹೆಚ್‌‌ಡಿ ಪದವಿ

Suddi Udaya
error: Content is protected !!