September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಒಕ್ಕೂಟ ಬಲವರ್ಧನೆ ಬಗ್ಗೆ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ: ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಕ್ರಾಸ್ ಸಂಸ್ಥೆ ಬೆಂಗಳೂರು ಹಾಗೂ ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಸಿ.ಒ.ಡಿ.ಪಿ ಮಂಗಳೂರು, ಕಿಡ್ಸ್ ಪುತ್ತೂರು, ಸಂಪದ ಉಡುಪಿ ಹಾಗೂ ಕೆ.ಡಿ.ಡಿ.ಸಿ ಕಾರವಾರ ಸಹಕಾರದಿಂದ ಜೋನಲ್ ಮಟ್ಟದ ಒಕ್ಕೂಟ ಬಲವರ್ಧನೆ ಮತ್ತು ಸುಸ್ಥಿರತೆ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಡಿ.09 ರಂದು ಜ್ಞಾನನಿಲಯ ಬೆಳ್ತಂಗಡಿಯಲ್ಲಿ ಆಯೋಜಿಸಿಲಾಗಿತ್ತು.

ಕಾರ್ಯ ಕ್ರಮದ ಅಧ್ಯಕ್ಷತೆಯನ್ನು ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ಹಾಗೂ ಮಾನಿನಿ ರಾಜ್ಯ ಮಹಿಳಾ ಒಕ್ಕೂಟ ಅಧ್ಯಕ್ಷೆ ಶ್ರೀಮತಿ ಮಂಜುಳಾ ಜೋನ್ ವಹಿಸಿದ್ದರು. ಉದ್ಘಾಟನೆಯನ್ನು ಕ್ರಾಸ್ ಸಂಸ್ಥೆ ಬೆಂಗಳೂರು ಇಲ್ಲಿನ ಮಹಿಳಾ ಸಬಲೀಕರಣ ಯೋಜನೆಯ ರಾಜ್ಯ ಸಂಯೋಜಕರಾದ ವಂ. ಸಿ| ನ್ಯಾನ್ಸಿ ಲೋಬೊ ನೆರವೇರಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ. ಬಿನೋಯಿ ಎ.ಜೆ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಎಸ್.ಎಮ್.ಎಸ್.ಎಸ್ ಸಂಸ್ಥೆ ಶಿವಮೊಗ್ಗ ಇಲ್ಲಿನ ಯೋಜನಾ ಸಂಯೋಜಕ ಜಗದೀಶ್ ರವರು ಒಕ್ಕೂಟಗಳ ಬಲವರ್ಧನೆ ಮತ್ತು ಸುಸ್ಥಿರತೆ ಬಗ್ಗೆ ತರಬೇತಿ ನೀಡಿದರು.

ಸೀಮಾ ಮಥಾಯಸ್, ಸಿ.ಒ.ಡಿ.ಪಿ ಮಂಗಳೂರು, ಮರೀನಾ ಲುವಿಸ್, ಸಂಪದ ಉಡುಪಿ, ಸರಸ್ವತಿ, ಕಿಡ್ಸ್ ಪುತ್ತೂರು, ಹಾಗೂ ಶ್ರೀಮತಿ ರಾಜೇಶ್ವರಿ, ಕೆ.ಡಿ.ಡಿ.ಎಸ್ ಕಾರವಾರ ಇಲ್ಲಿನ ಒಕ್ಕೂಟ ಪ್ರತಿನಿಧಿಗಳು ಉಪಸ್ಥಿತರಿದ್ದರು. ಸಿ.ಒ.ಡಿ.ಪಿ ಸಂಸ್ಥೆಯ ಸಿಬ್ಬಂದಿಗಳು ಪ್ರಾರ್ಥನೆ ಗೀತೆ ಹಾಡಿದರು. ಡಿ.ಕೆ.ಆರ್.ಡಿ.ಎಸ್ ಕಾರ್ಯಕರ್ತ ಮಾರ್ಕ್ ಡಿ ಸೋಜ ಸ್ವಾಗತಿಸಿದರು. ಶ್ರೀಮತಿ ಮಂಜುಳಾ ವಂದಿಸಿದರು. ಸಂಯೋಜಕಿ ಶ್ರೀಮತಿ ಸಿಸಿಲ್ಯಾ ತಾವ್ರೊ ಕಾರ್ಯಕ್ರಮ ನಿರೂಪಿಸಿದರು.

Related posts

ಕಾಕ೯ಳದಲ್ಲಿ ಚಾಕುವಿನಿಂದ ಇರಿದು ನವೀನ್ ಪೂಜಾರಿ ಹತ್ಯೆ : ಆರೋಪಿ ನಡ ಗ್ರಾಮದ ಪರೀಕ್ಷಿತ್ ಬಂಧನ

Suddi Udaya

ಸಿಡಿಲು ಬಡಿದು ಹಾನಿಯಾದ ಕೊಳಂಬೆ ರವಿರವರಿಗೆ ಮನೆಗೆ ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯಹಸ್ತ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya

ಇಂದಬೆಟ್ಟು ನಿವಾಸಿ ಬೌತೀಸ್ ಪಿಂಟೊ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆ ಶಾಲೆಗೆ ಬೆಂಗಳೂರು ಸುಂದರ ಭಾರತ ಪುಸ್ತಕ ಟ್ರಸ್ಟ್ ವತಿಯಿಂದ ನೋಟ್ ಬುಕ್ ವಿತರಣೆ

Suddi Udaya

ಹತ್ಯಡ್ಕ: ದರ್ಭೇತಡ್ಕದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಹಾನಿ

Suddi Udaya
error: Content is protected !!