25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಿ| ಪದ್ಮನಾಭ ಆಚಾರ್ಯರ ಕುಟುಂಬಕ್ಕೆ ಸ್ನೇಹಿತರ ನೆರವು: ಶ್ರಮದಾನದ ಮೂಲಕ ಮನೆ ದುರಸ್ತಿ

ಕೊಕ್ಕಡ: ಕೆಲವು ತಿಂಗಳ ಹಿಂದೆ ಹೃದಯಾಘಾತದಿಂದ ನಿಧನರಾದ ಕೊಕ್ಕಡ ಗ್ರಾಮದ ಪದ್ಮನಾಭ ಆಚಾರ್ಯ ಅವರ ಮನೆಯು ವಾಸಿಸಲು ಯೋಗ್ಯವಾಗದ ಮಟ್ಟಿಗೆ ಹಾಳಾಗಿದ್ದು ಮೃತರ ಆಪ್ತ ಸ್ನೇಹಿತರು ಹಾಗೂ ದಾನಿಗಳು ಶ್ರಮದಾನದ ಮೂಲಕ ಆಚಾರ್ಯರ ಮನೆಯ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಂಡರು.

ಮನೆಗೆ ಹೊಸ ರೂಪ ನೀಡುವ ಉದ್ದೇಶದಿಂದ ಶ್ರಮದಾನ ಕಾರ್ಯ ತೀವ್ರಗತಿಯಲ್ಲಿ ನಡೆಯಿತು. ಕುಟುಂಬದ ಸಂಕಷ್ಟದ ವೇಳೆಯಲ್ಲಿ ನಾವು ಇದ್ದೇವೆ ಎಂಬ ಭರವಸೆಯನ್ನು ನೀಡಿ, ಮೃತರ ಸ್ನೇಹಿತರ ಬಳಗವೇ ಸಂಪೂರ್ಣ ಕಾರ್ಯವನ್ನು ಮುನ್ನಡೆಸಿದೆ.

ಈ ಕಾರ್ಯಕ್ಕೆ ಮೃತರ ಆಪ್ತ ಸ್ನೇಹಿತ, ಸಮಾಜಸೇವಕ ತುಕ್ರಪ್ಪ ಶೆಟ್ಟಿ ನೂಜೆ, ಉದ್ಯಮಿ ನಾರಾಯಣಗೌಡ, ಸೌತಡ್ಕ ಮಹಾಗಣಪತಿ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಶಾಂತಪ್ಪ ಮಡಿವಾಳ, ರಜಾಕ್ ಕೊಕ್ಕಡ, ಜಾರ್ಜ್, ತಾಲೂಕು ಪಂಚಾಯತಿ ಮಾಜಿ ಸದಸ್ಯಲಕ್ಷ್ಮೀನಾರಾಯಣ ಇವರ ನೇತೃತ್ವದಲ್ಲಿ ಅವರೊಂದಿಗೆ ಶ್ಯಾಮರಾಜ್ ಪಟ್ರಮೆ, ಕಾಂಟ್ರಾಕ್ಟರ್ ಫಾರೂಕ್ ಮಡೆಂಜೋಡಿ, ಬಾಲಕೃಷ್ಣ ಗೌಡ ಬಳಕ್ಕ, ಧನಂಜಯ ಪಟ್ರಮೆ, ಜನಾರ್ಧನ, ಲಾರೆನ್ಸ್ ಪಾಯಿಸ್, ಶ್ರೀಧರ ಗೌಡ ಹಾಗೂ ಮೃತರ ಪತ್ನಿ, ಮಕ್ಕಳು, ಸಹೋದರ ಸೇರಿದಂತೆ ಸೇರಿ ಸುಮಾರು 70 ಮಂದಿ ಸ್ನೇಹಿತರ ತಂಡ ಶ್ರಮದಾನದಲ್ಲಿ ಪಾಲ್ಗೊಂಡು ಮನೆ ದುರಸ್ತಿಗೆ ಕೈ ಜೋಡಿಸಿದರು.

Related posts

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ವಾಗ್ಮಿ ದಾಮೋದರ ಶರ್ಮ ಸಂವಾದ

Suddi Udaya

ಸುಲ್ಕೇರಿ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಬಗ್ಗೆ ಸಮಾಲೋಚನ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಡುಪಿ-ಉಜಿರೆ ರಸ್ತೆಯುದ್ದಕ್ಕೂ ಮಹೇಶ್ ಶೆಟ್ಟಿ ತಿಮರೋಡಿಗೆ ಅಭಿಮಾನಿಗಳಿಂದ ಭವ್ಯ ಸ್ವಾಗತ

Suddi Udaya

ಉಜಿರೆ‌: ಬೆನಕ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ತಜ್ಞ ವೈದ್ಯರ ಸೇವೆ ಆರಂಭ

Suddi Udaya

ಮುಂಡಾಜೆ: ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟ ಸಮಾರೋಪ 

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ

Suddi Udaya
error: Content is protected !!