22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಿ| ಪದ್ಮನಾಭ ಆಚಾರ್ಯರ ಕುಟುಂಬಕ್ಕೆ ಸ್ನೇಹಿತರ ನೆರವು: ಶ್ರಮದಾನದ ಮೂಲಕ ಮನೆ ದುರಸ್ತಿ

ಕೊಕ್ಕಡ: ಕೆಲವು ತಿಂಗಳ ಹಿಂದೆ ಹೃದಯಾಘಾತದಿಂದ ನಿಧನರಾದ ಕೊಕ್ಕಡ ಗ್ರಾಮದ ಪದ್ಮನಾಭ ಆಚಾರ್ಯ ಅವರ ಮನೆಯು ವಾಸಿಸಲು ಯೋಗ್ಯವಾಗದ ಮಟ್ಟಿಗೆ ಹಾಳಾಗಿದ್ದು ಮೃತರ ಆಪ್ತ ಸ್ನೇಹಿತರು ಹಾಗೂ ದಾನಿಗಳು ಶ್ರಮದಾನದ ಮೂಲಕ ಆಚಾರ್ಯರ ಮನೆಯ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಂಡರು.

ಮನೆಗೆ ಹೊಸ ರೂಪ ನೀಡುವ ಉದ್ದೇಶದಿಂದ ಶ್ರಮದಾನ ಕಾರ್ಯ ತೀವ್ರಗತಿಯಲ್ಲಿ ನಡೆಯಿತು. ಕುಟುಂಬದ ಸಂಕಷ್ಟದ ವೇಳೆಯಲ್ಲಿ ನಾವು ಇದ್ದೇವೆ ಎಂಬ ಭರವಸೆಯನ್ನು ನೀಡಿ, ಮೃತರ ಸ್ನೇಹಿತರ ಬಳಗವೇ ಸಂಪೂರ್ಣ ಕಾರ್ಯವನ್ನು ಮುನ್ನಡೆಸಿದೆ.

ಈ ಕಾರ್ಯಕ್ಕೆ ಮೃತರ ಆಪ್ತ ಸ್ನೇಹಿತ, ಸಮಾಜಸೇವಕ ತುಕ್ರಪ್ಪ ಶೆಟ್ಟಿ ನೂಜೆ, ಉದ್ಯಮಿ ನಾರಾಯಣಗೌಡ, ಸೌತಡ್ಕ ಮಹಾಗಣಪತಿ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಶಾಂತಪ್ಪ ಮಡಿವಾಳ, ರಜಾಕ್ ಕೊಕ್ಕಡ, ಜಾರ್ಜ್, ತಾಲೂಕು ಪಂಚಾಯತಿ ಮಾಜಿ ಸದಸ್ಯಲಕ್ಷ್ಮೀನಾರಾಯಣ ಇವರ ನೇತೃತ್ವದಲ್ಲಿ ಅವರೊಂದಿಗೆ ಶ್ಯಾಮರಾಜ್ ಪಟ್ರಮೆ, ಕಾಂಟ್ರಾಕ್ಟರ್ ಫಾರೂಕ್ ಮಡೆಂಜೋಡಿ, ಬಾಲಕೃಷ್ಣ ಗೌಡ ಬಳಕ್ಕ, ಧನಂಜಯ ಪಟ್ರಮೆ, ಜನಾರ್ಧನ, ಲಾರೆನ್ಸ್ ಪಾಯಿಸ್, ಶ್ರೀಧರ ಗೌಡ ಹಾಗೂ ಮೃತರ ಪತ್ನಿ, ಮಕ್ಕಳು, ಸಹೋದರ ಸೇರಿದಂತೆ ಸೇರಿ ಸುಮಾರು 70 ಮಂದಿ ಸ್ನೇಹಿತರ ತಂಡ ಶ್ರಮದಾನದಲ್ಲಿ ಪಾಲ್ಗೊಂಡು ಮನೆ ದುರಸ್ತಿಗೆ ಕೈ ಜೋಡಿಸಿದರು.

Related posts

ರೇಷ್ಮೆರೋಡ್: ಅಶ್ವತನಗರ ನವರಾತ್ರಿ ಪೂಜೆ

Suddi Udaya

ಗುರುವಾಯನಕೆರೆ ಅಯ್ಯಪ್ಪ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ: 13ನೇ ಗುರುತಿನ ಸ್ಥಳದಲ್ಲಿ ಜಿಪಿಆರ್ ಯಂತ್ರ ಬಳಸಿ ಪರಿಶೀಲನೆಗೆ ಮುಂದಾದ ಎಸ್.ಐ.ಟಿ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ಪಟು ಕು. ತನುಶ್ರೀ ರವರಿಂದ ಯೋಗ ಪ್ರದರ್ಶನ

Suddi Udaya

ಬಿಜೆಪಿ ಯುವಮೋರ್ಚಾ ದ.ಕ. ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿ ಪ್ರಮೋದ್ ದಿಡುಪೆ ಮರು ನೇಮಕ

Suddi Udaya

ಎ.17 : ಬೆಳ್ತಂಗಡಿಯಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್‌ ಆ‌ರ್ ಮತಪ್ರಚಾರ:ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಪತ್ರಿಕಾಗೋಷ್ಠಿ

Suddi Udaya
error: Content is protected !!