September 6, 2026
ಅಭಿನಂದನೆವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪ.ಪೂ. ಕಾಲೇಜುಗಳ ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ಇಂದುಮತಿ ಮತ್ತು ಪಂಚಮಿ ರಾಜ್ಯ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಾದ ಇಂದುಮತಿ ಮತ್ತು ಪಂಚಮಿ ಶಾಲಾ ಶಿಕ್ಷಣ ಇಲಾಖೆಯ ( ಪದವಿಪೂರ್ವ) ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಆಯ್ಕೆಯಾಗಿರುತ್ತಾರೆ.

ಉಡುಪಿ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನಲ್ಲಿ ನಡೆದ ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪ್ರಥಮ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿನಿ ಇಂದುಮತಿ, ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಜನಪದ ಗೀತೆ ಗಾಯನ ಸ್ಪರ್ಧೆಯಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಪಂಚಮಿ, ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಕಾಲೇಜಿಗೆ ಗೌರವ ತಂದ ಈ ಇಬ್ಬರು ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಹಾರ್ದಿಕ ಅಭಿನಂದನೆ ಸಲ್ಲಿಸಿದ್ದಾರೆ.

Related posts

ಜ.13: ಗೃಹಲಕ್ಷ್ಮೀ ನೋಂದಣಿ ವಿಶೇಷ ಶಿಬಿರ

Suddi Udaya

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್‌ನಲ್ಲಿ ತೆನೆ ಹಬ್ಬ: ಬೆಳ್ತಂಗಡಿ ನಗರದಲ್ಲಿ ಸಂಭ್ರಮದ ಮೆರವಣಿಗೆ

Suddi Udaya

ಬೆದ್ರಬೆಟ್ಟು ಅರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್‌ ಅಝಾ ಆಚರಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ತಡೆ ನೀಡಲು ನಿರಾಕರಿಸಿದ ಹೈಕೋರ್ಟ್

Suddi Udaya

ಡಾ. ವೈ .ಉಮಾನಾಥ ಶೆಣೈ ಯವರಿಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ       

Suddi Udaya

ಉಜಿರೆ ಪ್ರಾ.ಕೃ.ಪ. ಸಹಕಾರಿ ಸೇವಾ ಸಂಘದ ನೂತನ ಕಟ್ಟಡ ‘ಉತ್ಥಾನ’ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!