July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತ‌ರ್ ಕಾಲೇಜು ಮಟ್ಟದ ಖೋ-ಖೋ ಪಂದ್ಯಾಟ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯಲ್ಲಿ ಮಂಗಳೂರು ಯೂನಿವರ್ಸಿಟಿ ಮಟ್ಟದ ಬಾಲಕರ ಹಾಗೂ ಬಾಲಕಿಯರ ಅಂತರ್ ಕಾಲೇಜು ಖೋ-ಖೋ ಪಂದ್ಯಾಟ ಆರಂಭಗೊಂಡಿದೆ. ಡಿ.9 ಹಾಗೂ ಡಿ.10 ಎರಡು ದಿನಗಳ ಕಾಲ ಈ ಪಂದ್ಯಾಟ ನಡೆಯಲಿದೆ. ಅಂತರ್ ಕಾಲೇಜು ಖೋ-ಖೋ ಪಂದ್ಯಾಟವನ್ನು ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ತುಕರಾಂ ಏನೆಕಲ್ ಅವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು.

ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮೂಡುಬಿದಿರೆ ಆಳ್ವಾಸ್ ಎಜುಕೇಶನ್ ಫೌಂಡೇಶನ್ ಟ್ರಸ್ಟಿಯಾಗಿರುವ ವಿವೇಕ್ ಆಳ್ವ ಅವರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಯಾವುದೇ ಖಾಸಗಿ ಕಾಲೇಜಿಗೂ ಕಡಿಮೆಯಿಲ್ಲ ಎನ್ನುವ ಹಾಗೆ ಅತ್ಯಂತ ಗುಣಮಟ್ಟಯುಕ್ತ ಪಂದ್ಯಾಟವನ್ನು ಆಯೋಜಿಸಿರುವುದು ಸಂತಸ ತಂದಿದೆ. ಇಲ್ಲಿ, ಹೆಚ್ಚಿನ ಪ್ರಮಾಣದಲ್ಲಿ ಹೆಣ್ಣುಮಕ್ಕಳೇ ಇದ್ದಾರೆ. ಹೆಣ್ಣು ಮಕ್ಕಳು ಹೆಚ್ಚು ಇರುವ ಸಂಸ್ಥೆಯು ಅತ್ಯಂತ ಅಭಿವೃದ್ಧಿ ಹೊಂದುತ್ತದೆ ಎಂದೇ ಅರ್ಥ ಎಂದರು. ಕ್ರೀಡೆ ಎಂದಾಗ ಸೋಲು-ಗೆಲುವು ಇದ್ದೇ ಇರುತ್ತದೆ. ಆದರೆ, ಅದು ನಮ್ಮ ಬದುಕಿಗೆ ದೊಡ್ಡ ಪಾಠವಾಗಿರಲಿದೆ. ಖೋ-ಖೋ ಪ್ಲೇಯರ್ ಹೆಚ್ಚಿನ ಫಿಟ್ ನೆಸ್ ಅನ್ನು ಹೊಂದಿರುತ್ತಾರೆ. ಅವರು ಉಳಿದೆಲ್ಲಾ ಆಟಗಳನ್ನು ಆಡಲು ಸಾಧ್ಯವಾಗುತ್ತದೆ. ಹೀಗಾಗಿ ಖೋ-ಖೋ ಅತ್ಯಂತ ಹೆಚ್ಚಿನ ಮಹತ್ವವನ್ನು ಪಡೆದಿರುವ ದೇಶೀಯ ಕ್ರೀಡೆಯಾಗಿದೆ ಎಂದು ಆಟಗಾರರಿಗೆ ಶುಭಹಾರೈಸಿದರು.

ಇದೇ ವೇಳೆ, ದೈಹಿಕ ಶಿಕ್ಷಣ ನಿರ್ದೇಶಕರಾಗಿ ಮಹತ್ತರ ಸಾಧನೆಗೈದು ನಿವೃತ್ತ ಜೀವನದಲ್ಲಿರುವ ತುಕರಾಂ ಏನೆಕಲ್ ಹಾಗೂ ಶಾಂತಿರಾಜ್ ಕಂಬ್ಲಿ ಇವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ, ತುಕರಾಂ ಏನೆಕಲ್ ಅವರು, ಪ್ರತಿಭಾನ್ವಿತರು ಸಾಯಬಹುದು ಆದರೆ ಸ್ಪೂರ್ತಿ ಎನ್ನುವಂತದ್ದು ಸಾಯುವುದಿಲ್ಲ. ಹೀಗಾಗಿ ನಮ್ಮ ಆಟವು ಇನ್ನೊಬ್ಬರಿಗೆ ಸ್ಫೂರ್ತಿ ತುಂಬುವಂತಿರಬೇಕು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಶಿಸ್ತು ಉಳಿದಂತಹ ಎಲ್ಲಾ ಕಾಲೇಜುಗಳಿಗೆ ಕೂಡಾ ಸ್ಪೂರ್ತಿದಾಯಕವಾಗಿದೆ ಎಂದರು.

ಸಭಾಧ್ಯಕ್ಷತೆಯನ್ನು ಸ.ಪ್ರ.ದ. ಕಾಲೇಜು ಬೆಳ್ತಂಗಡಿಯ ಪ್ರಾಂಶುಪಾಲರಾದ ಪ್ರೊ. ಸುರೇಶ್ ವಿ. ವಹಿಸಿದ್ದರು. ವೇದಿಕೆಯಲ್ಲಿ ಮಂಗಳೂರು ಯುನಿವರ್ಸಿಟಿ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಜೆರಾಲ್ಡ್ ಸಂತೋಷ್ ಡಿ ಸೋಜಾ, ಸ.ಪ್ರ.ದ. ಕಾಲೇಜು ಬೆಳ್ತಂಗಡಿಯ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರಾಧಾಕೃಷ್ಣ ಹೆಚ್.ಬಿ., ಎಸ್ ಡಬ್ಲ್ಯು ಒ ಪ್ರೊ. ಪದ್ಮನಾಭ, ಪಿಟಿಎ ಅಧ್ಯಕ್ಷರಾದ ವೈಲೆಟ್ ವಾಸ್ ಹಾಗೂ ಕಾಲೇಜಿನ ಕ್ರೀಡಾ ಸಂಚಾಲಕರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಐಕ್ಯೂಎಸಿ ಕೋ-ಆರ್ಡಿನೇಟರ್ ಡಾ. ಕುಶಾಲಪ್ಪ ಎಸ್‌. ಸ್ವಾಗತಗೈದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರೊ. ಪದ್ಮನಾಭ ಕೆ ಧನ್ಯವಾದ ಸಮರ್ಪಿಸಿದರು. ಬ್ಯುಸಿನೆಸ್ ಅಡ್ಮಿನಿಸ್ಟೇಷನ್ಸ್ ವಿಭಾಗದ ಅಸಿಸ್ಟೆಂಟ್ ಪ್ರೊ. ಡಾ. ದಿವ್ಯ ಪ್ರಭು ಪಿ. ಕಾರ್ಯಕ್ರಮ ನಿರೂಪಿಸಿದರು.

ಮಂಗಳೂರು ಯೂನಿವರ್ಸಿಟಿ ಮಟ್ಟದ ಹುಡುಗರ ಹಾಗೂ ಹುಡುಗಿಯರ ಅಂತರ್ ಕಾಲೇಜು ಖೋ-ಖೋ ಪಂದ್ಯಾಟದಲ್ಲಿ ಒಟ್ಟು 60 ತಂಡಗಳು ಭಾಗವಹಿಸಿದೆ. ಡಿ. 10 ರಂದು ಸಂಜೆ ಸಮಾರೋಪ ಸಮಾರಂಭವು ಜರುಗಲಿದೆ.

Related posts

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್‍ಸ್ ವತಿಯಿಂದ ಕಾಯರ್ತ್ತಡ್ಕ – ಶಿಬರಾಜೆ ರಸ್ತೆಯ ಶ್ರಮದಾನ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರದಲ್ಲಿ ಸಾನಿಧ್ಯ ದೈವಗಳ ವಾರ್ಷಿಕ ಪ್ರತಿಷ್ಠಾಪನಾ ಮಹೋತ್ಸವ

Suddi Udaya

ಬೆಳ್ತಂಗಡಿ: ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ನಿಂದ ವಿಮಾ ಪರಿಹಾರ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಜೆ ಇ ಇ ಮೈನ್ಸ್ ನಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ಮೇ 17: ಉಜಿರೆಯಲ್ಲಿ 5ನೇ ವರ್ಷದ ಸಂಭ್ರಮದ ಕೇರಳ ಸಾಂಪ್ರದಾಯಿಕ ವಿಷುಕಣಿ ಆಚರಣೆ: ಶಾಸಕ ಹರೀಶ್ ಪೂಂಜ

Suddi Udaya
error: Content is protected !!