32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳಗಾವಿ ಅಧಿವೇಶನ: ಅಧಿಕ ಮಳೆಯಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ: ಪ್ರತಾಪ್ ಸಿಂಹ ನಾಯಕ್

ಬೆಳ್ತಂಗಡಿ: ಅಡಿಕೆ ಬೆಳೆ ಸೇರಿದಂತೆ ತೋಟಗಾರಿಕ ಬೆಳೆಗಳ ಸಮಗ್ರ ಹಾಗೂ ಪೋಷಕಾಂಶಗಳ ನಿರ್ವಹಣೆಗಾಗಿ ಘಟಕ ವೆಚ್ಚದಡಿ ಸಸ್ಯ ಸಂರಕ್ಷಣಾ ಔಷಧಿಗಳ ಖರೀದಿಗೆ ರೈತರಿಗೆ ಪ್ರತಿ ಹೆಕ್ಟೇರ್ಗೆ ರೂ.1500 ಗಳಂತೆ 2 ಹೆಕ್ಟೇರ್ ವರೆಗೆ ರೂ.3000 ಗಳ ಸಹಾಯಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ರೂ.15.00 ಲಕ್ಷಗಳು ನಿಗಧಿಯಾಗಿದ್ದು, ಈವರೆಗೂ ರೂ. 9.23813 ಲಕ್ಷ ಸಹಾಯಧನವನ್ನು 485 ಫಲಾನುಭವಿಗಳ ಪಾವತಿಸಲಾಗಿರುತ್ತದೆ ಎಂದು ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

ಅವರು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ರಾಜ್ಯ ಅಧಿವೇಶನದಲ್ಲಿ ವಿಧಾನಪರಿಷತ್ ಕಾರ್ಯಕಲಾಪದಲ್ಲಿ ವಿಧಾನಪರಿಷತ್ ಸದಸ್ಯ ಉಜಿರೆ ಪ್ರತಾಪಸಿಂಹ ನಾಯಕ್ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಅಕಾಲಿಕ ಮತ್ತು ವಾಡಿಕೆಗಿಂತ ಅತೀ ಹೆಚ್ಚು ಮಳೆ ಸುರಿದ ಕಾರಣದಿಂದ ಸಾಕಷ್ಟು ಅಡಿಕೆ ಮರಗಳು ನಾಶವಾಗಿದ್ದು, ಅಡಿಕೆ ಬೆಳೆಗಾರರು ಆರ್ಥಿಕವಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ ಎಂಬುದಾಗಿ ಪ್ರಶ್ನಿಸಿದ್ದರು.2025-26ನೇ ಸಾಲಿನಲ್ಲಿ ಅತಿವೃಷ್ಠಿಯಿಂದಾಗಿ ಮಂಗಳೂರು ತಾಲೂಕಿನಲ್ಲಿ 5,88,245, ಬಂಟ್ವಾಳದಲ್ಲಿ 8,67,790, ಬೆಳ್ತಂಗಡಿಯಲ್ಲಿ 20,06,550, ಪುತ್ತೂರಿನಲ್ಲಿ 1,55,715, ಸುಳ್ಯದಲ್ಲಿ 5,02,018, ಮೂಡಬಿದರೆಯಲ್ಲಿ 18,55,100, ಮೂಲ್ಕಿಯಲ್ಲಿ 3,77,300, ಕಡಬದಲ್ಲಿ 10,290, ಉಳ್ಳಾಲ ತಾಲೂಕಿನಲ್ಲಿ 50,298 ಹೀಗೆ ಜಿಲ್ಲೆಯಲ್ಲಿ ಒಟ್ಟು 65,13,306 ಅಡಿಕೆ ಮರಗಳೂ ಹಾನಿಗೊಳಗಾಗಿವೆ ಎಂದರು.

Related posts

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಮುಂಡ್ರುಪ್ಪಾಡಿಯಲ್ಲಿ ನಿರ್ಮಾಣಗೊಳ್ಳಲಿರುವ ವಾತ್ಸಲ್ಯ ಮನೆಗೆ ಗುದ್ದಲಿ ಪೂಜೆ

Suddi Udaya

ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ

Suddi Udaya

ನಾವೂರು ಸೋಷಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಕೊನೆಗೊಳ್ಳಲು ಕೊಲ್ಲೂರು ಹಾಗೂ ಕದ್ರಿ ದೇವಸ್ಥಾನದಿಂದ ಧಮ೯ ಸಂರಕ್ಷಣಾ ಯಾತ್ರೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya

ಉಜಿರೆ: ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಅಂಬಡಬೆಟ್ಟು ಸೇತುವೆ ಶಿಥಿಲ: ಘನ ವಾಹನಗಳ ಸಂಚಾರ ನಿಷೇಧ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚರಿಸುವಂತೆ ಸೂಚನೆ

Suddi Udaya
error: Content is protected !!