22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯುವ ವೈಭವ: ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಂಗಳೂರು ಘಟಕ ಡಿ. 7ರಂದು ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಆಯೋಜಿಸಿದ ಯುವ ವೈಭವ 2025 ಪ್ರತಿಭೆಗಳ ಸಮ್ಮಿಲನ ಬ್ರಹ್ಮಶ್ರೀ ಗುರುನಾರಾಯಣ ಪಂಥದ ಸಮಾಜ ಬಾಂಧವರ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕ ಭಾಗವಹಿಸಿ ಪ್ರಮೋಷನ್ ವೀಡಿಯೋಸ್ ಸ್ಪರ್ಧೆಯಲ್ಲಿ ಪ್ರಥಮ ಸಮೂಹ ನೃತ್ಯದಲ್ಲಿ ಪ್ರಥಮ, ಭಾಷಣ ಸ್ಪರ್ಧೆ ಪ್ರಥಮ, ಶಿಸ್ತಿನ ತಂಡ ಪ್ರಥಮ, ಚಿತ್ರಕಲೆ ದ್ವಿತೀಯ ಹೀಗೆ ಅತ್ಯುತ್ತಮ ಪ್ರದರ್ಶನದೊಂದಿಗೆ ಸಮಗ್ರ ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ.

ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಸಹಕಾರದೊಂದಿಗೆ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ರವರ ವಿಶೇಷ ಸಹಕಾರದಲ್ಲಿ ಚಲನಚಿತ್ರ ನಿರ್ದೇಶಕ ಸ್ಮಿತೇಶ್ ಎಸ್. ಬಾರ್ಯ ನಿರ್ದೇಶನದಲ್ಲಿ ಭಾಗವಹಿಸಿದ ಈ ತಂಡದಲ್ಲಿ ಲೀಲಾವತಿ ಪಣಕಜೆ, ಯಶೋಧರ ಮುಂಡಾಜೆ, ಬೇಬೀಂದ್ರ, ಶೈಲೇಶ್ ಓಡಿಲ್ನಾಳ, ಜಿತೀಕ್ಷ, ನಿಶ್ಮಿತಾ, ಚಂದನ, ಸುಶ್ಮಿತಾ, ಕೇಶವ ಮುಂಡಾಜೆ, ಪವನ್ ಕುಮಾರ್, ಯತೀಶ್ ಕೋಟ್ಯಾನ್, ದೀಕ್ಷಿತ್ ಪಾರೆಂಕಿ, ಸಾನ್ವಿ, ಸಾನಿಕ, ಅನನ್ಯ, ಆಕಾಶ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ರವರ ಅಕೌಂಟ್ ಹ್ಯಾಕ್

Suddi Udaya

ಕಲ್ಮಂಜ: ನಿಡಿಗಲ್ ಅಂಗನವಾಡಿಯಲ್ಲಿ ಪೋಷಣಾ ಅಭಿಯಾನ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸಂಸ್ಕೃತೋತ್ಸವ’, ‘ಸಂಸ್ಕೃತ ಸಂಧ್ಯಾ’

Suddi Udaya

ಮಚ್ಚಿನ ಸ. ಪ್ರೌ.ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛತಾ ಜಾಗೃತಿ ಅಭಿಯಾನ ಕಾರ್ಯಕ್ರಮ

Suddi Udaya

ಹೊಸಂಗಡಿ ಗ್ರಾ.ಪಂ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!