September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ವೇಣೂರು: ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ, ವಕೀಲರ ಸಂಘ ಬೆಳ್ತಂಗಡಿ, ಯುವವಾಹಿನಿ ವೇಣೂರು ಘಟಕ
ಸರಕಾರಿ ಪದವಿ ಪೂರ್ವ ಕಾಲೇಜು, ವೇಣೂರು ಇವರ ಆಶ್ರಯದಲ್ಲಿ ಡಿ.09 ರಂದು ಕಾನೂನು ಅರಿವು ಕಾರ್ಯಕ್ರಮವು ಸರಕಾರಿ ಪದವಿ ಪೂರ್ವ ಕಾಲೇಜು ವೇಣೂರುನಲ್ಲಿ ಜರುಗಿತು.

ಕಾರ್ಯಕ್ರಮದ ಉದ್ಘಾಟಕರಾದ ವಿಜಯೇಂದ್ರ ಟಿ. ಎಚ್. ಹೆಚ್ಚುವರಿ ಸಿವಿಲ್ ನ್ಯಾಯಧೀಶರು ಮತ್ತು ಜೆ.ಎಮ್.ಎಫ್.ಸಿ ಬೆಳ್ತಂಗಡಿ ಇವರು ಮಾನವ ಹಕ್ಕುಗಳು ಬಗ್ಗೆ ಅರಿವು ಮೂಡಿಸಿದರು. ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ಪ್ರಕಾಶ್ ಕೋಟ್ಯಾನ್ ನಾರಾವಿ ಅಧ್ಯಕ್ಷತೆ ಯನ್ನು ವಹಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಅಪರ ಸರಕಾರಿ ವಕೀಲರು ಮನೋಹರ ಕುಮಾರ್ ಎ ಬೆಳ್ತಂಗಡಿ ಇವರು ಕಾನೂನು ಪಾಲನೆ ಬಗ್ಗೆ ಮಾತಾಡಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಕೀಲರ ಸಂಘ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ ಪೋಕ್ಸೋ ಕಾಯಿದೆ ಬಗ್ಗೆ ಮಾಹಿತಿ ನೀಡಿದರು. ವೇಣೂರು ಪೊಲೀಸ್ ಠಾಣಾಧಿಕಾರಿ ಪಿಎಸ್ಐ ಅಕ್ಷಯ್ ಡಿ ಸೈಬರ್ ಕ್ರೈಂ ಬಗ್ಗೆ ಮಾಹಿತಿ ನೀಡಿದರು.
ವಕೀಲರ ಸಂಘ ಕಾರ್ಯದರ್ಶಿ ಪ್ರಶಾಂತ್ ಎಮ್, ವೇಣೂರು ಸರಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲರು ಗಂಗಾಧರ್ ಉಪಸ್ಥಿತರಿದ್ದರು.
ಕಾರ್ಯಕ್ರಮದ ಉಸ್ತುವಾರಿಯನ್ನು ಘಟಕದ ಮಾಜಿ ಅಧ್ಯಕ್ಷ ಯೋಗೀಶ್ ಬಿಕ್ರೋಟ್ಟು ಮತ್ತು ಉಪಾಧ್ಯಕ್ಷ ಸತೀಶ್ ಯನ್ ಪಿ ವಹಿಸಿದ್ದರು.
ಘಟಕದ ಸ್ಥಾಪಕ ಅಧ್ಯಕ್ಷ ನಿತೀಶ್ ಹೆಚ್ ಕೋಟ್ಯಾನ್ ಸ್ವಾಗತಿಸಿದರು. ಕಾಲೇಜಿನ ವಿದ್ಯಾರ್ಥಿನಿ ಕು. ಶರಣ್ಯ ಕಾರ್ಯಕ್ರಮ ನಿರೂಪಣೆ ಮಾಡಿದರು. ಕಾಲೇಜಿನ ಪ್ರಾಧ್ಯಾಪಕ ವೆಂಕಟೇಶ ಪಿ ಧನ್ಯವಾದ ಸಲ್ಲಿಸಿದರು. ಉಪಹಾರದ ವ್ಯವಸ್ಥೆಯನ್ನು ಘಟಕದ ಮಾಜಿ ಅಧ್ಯಕ್ಷ ನವೀನ್ ಪೂಜಾರಿ ಪಚ್ಚೇರಿ ನೀಡಿ ಸಹಕರಿಸಿದರು.

ಕಾರ್ಯಕ್ರಮದಲ್ಲಿ ಘಟಕದ ಎಲ್ಲಾ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರು,ಸದಸ್ಯರು, ಸಲಹೆಗರಾರು, ಕಾಲೇಜಿನ ಅಧ್ಯಾಪಕ ವೃಂದ, ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಭೀಕರ ರಸ್ತೆ ಅಪಘಾತ – ಮೂವರಿಗೆ ಗಂಭೀರ ಗಾಯ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಕ್ಷನ್ ರವರಿಗೆ ‘ಸಮಗ್ರ ಪ್ರಶಸ್ತಿ’

Suddi Udaya

ಕಲ್ಮಂಜ 88 ನೇ ವಾರ್ಡಿನ ಬಿಜೆಪಿ ಪದಾಧಿಕಾರಿಗಳ ಆಯ್ಕೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ. ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಬಳಂಜ ಬದಿನಡೆ ಕ್ಷೇತ್ರದಲ್ಲಿಪ್ರಶ್ನಾ ಚಿಂತನೆ

Suddi Udaya
error: Content is protected !!