23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯುವ ವೈಭವ: ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಂಗಳೂರು ಘಟಕ ಡಿ. 7ರಂದು ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಆಯೋಜಿಸಿದ ಯುವ ವೈಭವ 2025 ಪ್ರತಿಭೆಗಳ ಸಮ್ಮಿಲನ ಬ್ರಹ್ಮಶ್ರೀ ಗುರುನಾರಾಯಣ ಪಂಥದ ಸಮಾಜ ಬಾಂಧವರ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕ ಭಾಗವಹಿಸಿ ಪ್ರಮೋಷನ್ ವೀಡಿಯೋಸ್ ಸ್ಪರ್ಧೆಯಲ್ಲಿ ಪ್ರಥಮ ಸಮೂಹ ನೃತ್ಯದಲ್ಲಿ ಪ್ರಥಮ, ಭಾಷಣ ಸ್ಪರ್ಧೆ ಪ್ರಥಮ, ಶಿಸ್ತಿನ ತಂಡ ಪ್ರಥಮ, ಚಿತ್ರಕಲೆ ದ್ವಿತೀಯ ಹೀಗೆ ಅತ್ಯುತ್ತಮ ಪ್ರದರ್ಶನದೊಂದಿಗೆ ಸಮಗ್ರ ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ.

ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಸಹಕಾರದೊಂದಿಗೆ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ರವರ ವಿಶೇಷ ಸಹಕಾರದಲ್ಲಿ ಚಲನಚಿತ್ರ ನಿರ್ದೇಶಕ ಸ್ಮಿತೇಶ್ ಎಸ್. ಬಾರ್ಯ ನಿರ್ದೇಶನದಲ್ಲಿ ಭಾಗವಹಿಸಿದ ಈ ತಂಡದಲ್ಲಿ ಲೀಲಾವತಿ ಪಣಕಜೆ, ಯಶೋಧರ ಮುಂಡಾಜೆ, ಬೇಬೀಂದ್ರ, ಶೈಲೇಶ್ ಓಡಿಲ್ನಾಳ, ಜಿತೀಕ್ಷ, ನಿಶ್ಮಿತಾ, ಚಂದನ, ಸುಶ್ಮಿತಾ, ಕೇಶವ ಮುಂಡಾಜೆ, ಪವನ್ ಕುಮಾರ್, ಯತೀಶ್ ಕೋಟ್ಯಾನ್, ದೀಕ್ಷಿತ್ ಪಾರೆಂಕಿ, ಸಾನ್ವಿ, ಸಾನಿಕ, ಅನನ್ಯ, ಆಕಾಶ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

Related posts

ಗದ್ದೆಯಿಂದ ನೇಜಿ ತೆಗೆದು ತಾವೇ ನಾಟಿ ಮಾಡಿದ ಮಕ್ಕಳು: ಕೊಯ್ಯೂರು ಸರಕಾರಿ ಶಾಲೆಯ 70 ಮಕ್ಕಳಿಗೆ ಕೃಷಿ ಪಾಠದ ಸಂಭ್ರಮ ; ಶಿಕ್ಷಕರ, ಪೋಷಕರ ಸಾಥ್

Suddi Udaya

ಧರ್ಮಸ್ಥಳ: ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿ ಇರುವ ಅನಧಿಕೃತ ಗೂಡಂಗಡಿಗಳನ್ನು ಧರ್ಮಸ್ಥಳ ಗ್ರಾ. ಪಂ. ನಿಂದ ತೆರವು

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ಸಂವಿಧಾನ ದಿನ ಆಚರಣೆ

Suddi Udaya

ಬೆಳ್ತಂಗಡಿ : ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ: ಇನ್ನು ಕೆಲವೇ ದಿನಗಳು

Suddi Udaya

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

Suddi Udaya

ಬೆಳಾಲು : ಅನೈತಿಕ ಸಂಬಂಧದಿಂದ ಪತ್ನಿಯನ್ನು ಬಾವಿಗೆ ತಳ್ಳಿದ ಪತಿ: ಧರ್ಮಸ್ಥಳ ಪೊಲೀಸರ ಲಾಠಿ ರುಚಿಗೆ ಸತ್ಯಾಂಶ ಬಯಲು

Suddi Udaya
error: Content is protected !!