July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಸ್.ವೈ.ಎಸ್ ಬೆಳ್ತಂಗಡಿ ಝೋನ್ ಮಾದರಿ ಮದುವೆ ಪ್ರಯುಕ್ತ ಡಿ.12 ರಂದು ಜಮಾಅತ್ ಪ್ರತಿನಿಧಿ ಸಂಗಮ

ಬೆಳ್ತಂಗಡಿ: ಮದುವೆಯ ಹೆಸರಿನಲ್ಲಿ ಇಂದು ಹಲವಾರು ಅನಾಚಾರಗಳು ನಡೆಯುತ್ತಿದ್ದು, ಮದುವೆಯನ್ನು ಹೆಚ್ಚು ಭಾರಗೊಳಿಸುವುದರೊಂದಿಗೆ, ಅನಿಸ್ಲಾಮಿಕತೆಗಳಿಂದ ಮದುವೆಯ ಬರಕತ್ತನ್ನು ನೀಗಿಸಲಾಗುತ್ತಿದೆ. ಇದಕ್ಕೊಂದು ಕಡಿವಾಣ ಹಾಕಬೇಕೆಂದುಕೊಂಡು ಎಸ್.ವ್ಯೆ.ಎಸ್ ಕರ್ನಾಟಕ ರಾಜ್ಯ ಸಮಿತಿಯು ‘ಮಾದರಿ ಮದುವೆ: ಶತದಿನ ಅಭಿಯಾನ’ವನ್ನು ಹಮ್ಮಿಗೊಂಡಿದ್ದು. ಆ ಪ್ರಯುಕ್ತ ಎಸ್.ವ್ಯೆ.ಎಸ್ ಬೆಳ್ತಂಗಡಿ ಝೋನ್ ಜಮಾಅತ್ ಪ್ರತಿನಿಧಿಗಳ ಸಂಗಮ ಡಿ12 ರಂದು 3ಗಂಟೆಗೆ ಝೋನ್ ಅಧ್ಯಕ್ಷ ಅಬ್ದುಲ್ ರಹ್ಮಾನ್ ಸಖಾಫಿ ಆಲoದಿಲ ರವರ ಅಧ್ಯಕ್ಷತೆ ಯಲ್ಲಿ ಗುರುವಾಯನಕೆರೆ ಮಸೀದಿ ಹಾಲ್ ನಲ್ಲಿ ನಡೆಯಲಿರುವುದು.

ಅಸ್ಸಯ್ಯದ್ ಇಸ್ಮಾಯಿಲ್ ಅಲ್ ಹಾದಿ ತಂಗಳ್ ಉಜಿರೆ ಕಾರ್ಯಕ್ರಮದ ದುಆ ನೇತ್ರತ್ವವನ್ನು ನೀಡಲಿದ್ದಾರೆ. ಅಸ್ಸಯ್ಯದ್ ಅಬ್ದುಲ್ ರಹ್ಮಾನ್ ಬಾ-ಅಲವಿ ಸಾದಾತ್ ತಂಗಳ್ ಕುಪ್ಪೆಟ್ಟಿ ಉದ್ಘಾಟನೆ ಯೊಂದಿಗೆ ಚಾಲನೆ ನೀಡಲಿದ್ದಾರೆ. ಮತ್ತು
ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಕಾರ್ಯದರ್ಶಿ MSM ಅಬ್ದುಲ್ ರಶೀದ್ ಝ್ಯೆನಿ ಕಾಮಿಲ್ ಸಖಾಫಿ ಮಾದರಿ ಮದುವೆ ಬಗ್ಗೆ ವಿಷಯ ಮಂಡಿಸಲಿದ್ದಾರೆ.

ಬೆಳ್ತಂಗಡಿ ಝೋನ್ ವ್ಯಾಪ್ತಿಯ 60 ಮೊಹಲ್ಲಾ ಗಳಿಂದ ಖತೀಬರು, ಜಮಾಅತ್ ಪ್ರತಿನಿದಿಗಳು ಸೇರಿ ಸುಮಾರು 350ರಷ್ಟು ನಾಯಕರುಗಳು ಭಾಗವಹಿಸಲಿದ್ದಾರೆ. ಎಂದು ಝೋನ್ ಪ್ರಧಾನ ಕಾರ್ಯದರ್ಶಿ ಸಲೀಂ ಕನ್ಯಾಡಿ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Related posts

ನ.9: ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

Suddi Udaya

ಮೇಲಂತಬೆಟ್ಟು ಗ್ರಾ. ಪಂ. ನಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಯಾಂತ್ರಿಕ ಕಾರ್ಯಾಗಾರ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ಹೈದರಬಾದ್ ನಲ್ಲಿ ನಡೆದ ಕ್ಷೇತ್ರೀಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಮಚ್ಚಿನ: ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ : ಊರ ಭಕ್ತಾದಿಗಳಿಂದ ಶ್ರಮದಾನ

Suddi Udaya
error: Content is protected !!