March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣ್ತಪ್ಪಿನಿಂದ ಇನ್ನೊಬ್ಬರ ಖಾತೆಗೆ ಹಣ ವರ್ಗಾವಣೆ: ಮರುಪಾವತಿಸಲು ನಿರಾಕರಣೆ ; ದೂರು ದಾಖಲು

ಬೆಳ್ತಂಗಡಿ: ಕಣ್ತಪ್ಪಿನಿಂದ ಹಣ ಬೇರೆಯವರ ಖಾತೆಗೆ ವರ್ಗಾವಣೆಯಾಗಿದ್ದು, ಮರುಪಾವತಿಸಲು ನಿರಾಕರಿಸಿದ ಪ್ರಕರಣ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವ ತನ್ನ ಸಂಬಂಧಿಕರಿಗೆ ತುರ್ತು ಅಗತ್ಯದ ನೆಲೆಯಲ್ಲಿ ಪೋನ್ ಪೇ ಮೂಲಕ ಕಳುಹಿಸಲಾದ ಹಣ ಕಣ್ಣಪ್ಪಿನಿಂದಾಗಿ ಇನ್ನೊಬ್ಬರ ಖಾತೆಗೆ ಹೋದ ಪ್ರಕರಣದಲ್ಲಿ ಹಣ ಮರುಪಾವತಿಸಲು ನಿರಾಕರಿಸಿದ ಉಜಿರೆಯ ಉದ್ಯಮಿ ವಿರುದ್ಧ ಪ್ರಕರಣ ದಾಖಲಾಗಿದೆ.

ಉಪ್ಪಿನಂಗಡಿಯ ಮಠ ಎಂಬಲ್ಲಿ ಗ್ರಾನೈಟ್ ಉದ್ಯಮ ನಡೆಸಿಕೊಂಡಿರುವ ಹರಿರಾವ್ ಎಂಬವರು ನೀಡಿದ ದೂರಿನಂತೆ ತನ್ನ ರಾಜಸ್ಥಾನದಲ್ಲಿನ ಸಂಬಂಧಿಕ ಲಕ್ಷ್ಮೀಚಂದ್ ಎಂಬವರಿಗೆ ಕಳುಹಿಸಬೇಕಾದ 19,000 ರೂ. ಕಣ್ಣಪ್ಪಿನಿಂದಾಗಿ ಉಜಿರೆಯ ಉದ್ಯಮಿಯೋರ್ವರ ಖಾತೆಗೆ ವರ್ಗಾವಣೆಗೊಂಡಿದ್ದು, ಈ ಮೊತ್ತದಲ್ಲಿ 10,000 ರೂ. ವನ್ನು ಹಿಂದಿರುಗಿಸಿ ಉಳಿದ ಮೊತ್ತವನ್ನು ಹಿಂದಿರುಗಿಸದೆ ಸತಾಯಿಸುತ್ತಿದ್ದಾರೆಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಕಾರ್ಯವೈಖರಿಗೆ ಪ್ರಧಾನಿಯವರಿಂದ ಮೆಚ್ಚುಗೆ

Suddi Udaya

ಹೊಸಂಗಡಿ: ಭೀಮ್ ಆರ್ಮಿ ಸಂಘಟನೆ ಉದ್ಘಾಟನೆ

Suddi Udaya

ಎಸ್.ಡಿ.ಎಂ ನ್ಯಾಚುರೋಪತಿ ಕಾಲೇಜಿಗೆ ಡಿಸ್ಟಿಂಕಷನ್ ಗಳ ಮಹಾಪೂರ

Suddi Udaya

ಜಿ.ಪಂ. ಉಪ ಕಾರ್ಯದರ್ಶಿ ಆನಂದ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಸಿಕ ಕೆ.ಡಿ.ಪಿ.ಸಭೆ

Suddi Udaya

ಸಾರಸ್ವತ ಲರ್ನಿಂಗ್ ಫೌಂಡೇಶನ್ ಯು.ಎಸ್.ಎ ಕ್ಯಾಲಿಪೋರ್ನಿಯಾ ವತಿಯಿಂದ ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಗಮಕ ಸಮ್ಮೇಳನ ಡಾ. ಹೆಗ್ಗಡೆಯವರಿಂದ ಆಮಂತ್ರಣ ಬಿಡುಗಡೆ

Suddi Udaya
error: Content is protected !!