ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣ್ತಪ್ಪಿನಿಂದ ಇನ್ನೊಬ್ಬರ ಖಾತೆಗೆ ಹಣ ವರ್ಗಾವಣೆ: ಮರುಪಾವತಿಸಲು ನಿರಾಕರಣೆ ; ದೂರು ದಾಖಲು

ಬೆಳ್ತಂಗಡಿ: ಕಣ್ತಪ್ಪಿನಿಂದ ಹಣ ಬೇರೆಯವರ ಖಾತೆಗೆ ವರ್ಗಾವಣೆಯಾಗಿದ್ದು, ಮರುಪಾವತಿಸಲು ನಿರಾಕರಿಸಿದ ಪ್ರಕರಣ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವ ತನ್ನ ಸಂಬಂಧಿಕರಿಗೆ ತುರ್ತು ಅಗತ್ಯದ ನೆಲೆಯಲ್ಲಿ ಪೋನ್ ಪೇ ಮೂಲಕ ಕಳುಹಿಸಲಾದ ಹಣ ಕಣ್ಣಪ್ಪಿನಿಂದಾಗಿ ಇನ್ನೊಬ್ಬರ ಖಾತೆಗೆ ಹೋದ ಪ್ರಕರಣದಲ್ಲಿ ಹಣ ಮರುಪಾವತಿಸಲು ನಿರಾಕರಿಸಿದ ಉಜಿರೆಯ ಉದ್ಯಮಿ ವಿರುದ್ಧ ಪ್ರಕರಣ ದಾಖಲಾಗಿದೆ.

ಉಪ್ಪಿನಂಗಡಿಯ ಮಠ ಎಂಬಲ್ಲಿ ಗ್ರಾನೈಟ್ ಉದ್ಯಮ ನಡೆಸಿಕೊಂಡಿರುವ ಹರಿರಾವ್ ಎಂಬವರು ನೀಡಿದ ದೂರಿನಂತೆ ತನ್ನ ರಾಜಸ್ಥಾನದಲ್ಲಿನ ಸಂಬಂಧಿಕ ಲಕ್ಷ್ಮೀಚಂದ್ ಎಂಬವರಿಗೆ ಕಳುಹಿಸಬೇಕಾದ 19,000 ರೂ. ಕಣ್ಣಪ್ಪಿನಿಂದಾಗಿ ಉಜಿರೆಯ ಉದ್ಯಮಿಯೋರ್ವರ ಖಾತೆಗೆ ವರ್ಗಾವಣೆಗೊಂಡಿದ್ದು, ಈ ಮೊತ್ತದಲ್ಲಿ 10,000 ರೂ. ವನ್ನು ಹಿಂದಿರುಗಿಸಿ ಉಳಿದ ಮೊತ್ತವನ್ನು ಹಿಂದಿರುಗಿಸದೆ ಸತಾಯಿಸುತ್ತಿದ್ದಾರೆಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭೇಟಿ

Suddi Udaya

ಸುದ್ದಿ ಉದಯ ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಖ್ಯಾತ ಚಿತ್ರನಟ ರಮೇಶ್ ಅರವಿಂದ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಸ್ಥಾಪನೆ ದಿನಾಚರಣೆ

Suddi Udaya

ನಾಟ (NATA) 2026 ಫಲಿತಾಂಶ: ಎಕ್ಸೆಲ್‌ ಪಿಯು ಕಾಲೇಜಿಗೆ ಭರ್ಜರಿ ಯಶಸ್ಸು, ರಾಜ್ಯ ಮಟ್ಟದಲ್ಲಿ ಮಿಂಚಿದ ವಿದ್ಯಾರ್ಥಿಗಳು

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರಕ್ಕೆ ನೂತನ ಪಲ್ಲಕ್ಕಿ ಸಮರ್ಪಣೆ

Suddi Udaya
error: Content is protected !!