July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣ್ತಪ್ಪಿನಿಂದ ಇನ್ನೊಬ್ಬರ ಖಾತೆಗೆ ಹಣ ವರ್ಗಾವಣೆ: ಮರುಪಾವತಿಸಲು ನಿರಾಕರಣೆ ; ದೂರು ದಾಖಲು

ಬೆಳ್ತಂಗಡಿ: ಕಣ್ತಪ್ಪಿನಿಂದ ಹಣ ಬೇರೆಯವರ ಖಾತೆಗೆ ವರ್ಗಾವಣೆಯಾಗಿದ್ದು, ಮರುಪಾವತಿಸಲು ನಿರಾಕರಿಸಿದ ಪ್ರಕರಣ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವ ತನ್ನ ಸಂಬಂಧಿಕರಿಗೆ ತುರ್ತು ಅಗತ್ಯದ ನೆಲೆಯಲ್ಲಿ ಪೋನ್ ಪೇ ಮೂಲಕ ಕಳುಹಿಸಲಾದ ಹಣ ಕಣ್ಣಪ್ಪಿನಿಂದಾಗಿ ಇನ್ನೊಬ್ಬರ ಖಾತೆಗೆ ಹೋದ ಪ್ರಕರಣದಲ್ಲಿ ಹಣ ಮರುಪಾವತಿಸಲು ನಿರಾಕರಿಸಿದ ಉಜಿರೆಯ ಉದ್ಯಮಿ ವಿರುದ್ಧ ಪ್ರಕರಣ ದಾಖಲಾಗಿದೆ.

ಉಪ್ಪಿನಂಗಡಿಯ ಮಠ ಎಂಬಲ್ಲಿ ಗ್ರಾನೈಟ್ ಉದ್ಯಮ ನಡೆಸಿಕೊಂಡಿರುವ ಹರಿರಾವ್ ಎಂಬವರು ನೀಡಿದ ದೂರಿನಂತೆ ತನ್ನ ರಾಜಸ್ಥಾನದಲ್ಲಿನ ಸಂಬಂಧಿಕ ಲಕ್ಷ್ಮೀಚಂದ್ ಎಂಬವರಿಗೆ ಕಳುಹಿಸಬೇಕಾದ 19,000 ರೂ. ಕಣ್ಣಪ್ಪಿನಿಂದಾಗಿ ಉಜಿರೆಯ ಉದ್ಯಮಿಯೋರ್ವರ ಖಾತೆಗೆ ವರ್ಗಾವಣೆಗೊಂಡಿದ್ದು, ಈ ಮೊತ್ತದಲ್ಲಿ 10,000 ರೂ. ವನ್ನು ಹಿಂದಿರುಗಿಸಿ ಉಳಿದ ಮೊತ್ತವನ್ನು ಹಿಂದಿರುಗಿಸದೆ ಸತಾಯಿಸುತ್ತಿದ್ದಾರೆಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಚಾತುರ್ಮಾಸ್ಯ ವೃತಾಚಾರಣೆ, ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್

Suddi Udaya

ಕಲ್ಮಂಜ: ಪುರುಷೋತ್ತಮ ನಾಯ್ಕ ರವರ ಮನೆಯಲ್ಲಿ ಬೃಹದಾಕಾರದ ಕಾಳಿಂಗ ಸರ್ಪ ಪತ್ತೆ

Suddi Udaya

ಭಾರತೀಯ ಸೇನೆಯಲ್ಲಿ 28 ವರ್ಷಗಳ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಸುಬೇದಾರ್ ಮೇಜರ್ ಶಿವಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya

ನಡ ಗ್ರಾಮ ಪಂಚಾಯಿತಿಯ ಮಕ್ಕಳ ವಿಶೇಷ ಗ್ರಾಮ ಸಭೆ

Suddi Udaya

ವೇಣೂರು ಕಾರು ಚಾಲಕ ಬೈರಣ್ಣ ನಿಧನ

Suddi Udaya

ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya
error: Content is protected !!