September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಜೀವ ಬೆದರಿಕೆ ಆರೋಪ : ಕೆ.ಎನ್ ಗೌಡರಿಂದ ಠಾಣೆಗೆ ದೂರು

ಬೆಳ್ತಂಗಡಿ: ನಾಳ ದೇವಾಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ. ಅವರು ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಿ, ಕಳಿಯ ಗ್ರಾಮದ `ದೇವಿ ಕೃಪಾ’ ಪೆಲತ್ತಳಿಕೆ ನಿವಾಸಿ, ಉದಯವಾಣಿ ವರದಿಗಾರ ಕೆ.ಎನ್. ಗೌಡ ಅವರು ಡಿ.10ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಡಿ.3ರಂದು ನಾಳ ದೇವಸ್ಥಾನದಲ್ಲಿ ನಡೆದ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವ ಹಾಗೂ 2027ನೇ ವರ್ಷದಲ್ಲಿ ನಡೆಸಲು ಉದ್ದೇಶಿಸಿರುವ ಸಾರ್ವಜನಿಕ ಮತ್ತು ಭಕ್ತರ ಸಭೆಯಲ್ಲಿ ಊರಿನ ಭಕ್ತನಾಗಿ ಹಾಗೂ ಪತ್ರಿಕೆ ವರದಿಗಾರನಾಗಿ ಭಾಗವಹಿಸಿರುತ್ತೇನೆ. ಅದರಂತೆಯೇ ಅ ದಿನ ಸಭೆಯಲ್ಲಿ ನಡೆದಿರುವ ವಿಷಯವನ್ನು ಅಧರಿಸಿ ನೈಜ ವರದಿಯನ್ನು ಕಳುಹಿಸಿ ಕೊಟ್ಟಿದ್ದು, ಅದು ಉದಯವಾಣಿ ಕನ್ನಡ ದಿನಪತ್ರಿಕೆಯಲ್ಲಿ ಪ್ರಕಟವಾಗಿದೆ. ಪತ್ರಿಕೆಯಲ್ಲಿ ಬಂದ ಬಳಿಕ ಡಿ.9 ರಂದು ಶ್ರೀ ಕ್ಷೇತ್ರದ ವಾಟ್ಸಫ್ ಗ್ರೂಪ್‌ನಿಂದ ನನ್ನ ಮೊಬೈಲ್ ಸಂಖ್ಯೆಯನ್ನು ರಿಮೂವ್ ಮಾಡಿದ್ದನ್ನು ವಿಚಾರಿಸಿದಾಗ ಮೊಬೈಲ್ ಪೋನ್ ಮೂಲಕ ಅವಾಚ್ಯ ಶಬ್ದಗಳಲ್ಲಿ ನಿಂದನೆ ಮಾಡಿ, ವಾಯ್ಸ್ ರೆಕಾರ್ಡ್ ಕಳುಹಿಸಿ, ನನ್ನ ಪತ್ನಿ, ಮಗಳ ವಿಷಯ ಪ್ರಸ್ತಾಪಿಸಿ ಜೀವ ಬೆದರಿಕೆ ಹಾಕಿರುವುದಾಗಿ ಕೆ.ಎನ್ ಗೌಡ ದೂರಿನಲ್ಲಿ ಆರೋಪಿಸಿದ್ದಾರೆ.

Related posts

ಶಿಶಿಲ: ಅಡ್ಡಹಳ್ಳ ನಿವಾಸಿ ಡೀಕಯ್ಯ ಗೌಡ ರವರ ಮನೆ ಮೇಲೆ ಮರ ಬಿದ್ದು ಹಾನಿ

Suddi Udaya

ಬಂದಾರು ಮತ್ತು ಮೊಗ್ರು ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಪ್ರತಿಭಟನೆ

Suddi Udaya

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಐ.ಟಿ. ಕ್ಲಬ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ರೆಖ್ಯ: ರಾಷ್ಟ್ರೀಯ ಹೆದ್ದಾರಿ 75ರ ಫ್ಲೈಓವರ್ ನಲ್ಲಿ ಬೈಕ್ ಹಾಗೂ ಕಾರು ನಡುವೆ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

Suddi Udaya

ವೇಣೂರು: ಉಳ್ತೂರಿನ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ನೂರುಲ್ ಹುದಾ ದರ್ಸ್ ಪ್ರಾರಂಭೋತ್ಸವ

Suddi Udaya

ಶಿರ್ಲಾಲು: ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಅಶೋಧರ ಸಾಲಿಯಾನ್ ನಿಧನ

Suddi Udaya
error: Content is protected !!