July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಜೀವ ಬೆದರಿಕೆ ಆರೋಪ : ಕೆ.ಎನ್ ಗೌಡರಿಂದ ಠಾಣೆಗೆ ದೂರು

ಬೆಳ್ತಂಗಡಿ: ನಾಳ ದೇವಾಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ. ಅವರು ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಿ, ಕಳಿಯ ಗ್ರಾಮದ `ದೇವಿ ಕೃಪಾ’ ಪೆಲತ್ತಳಿಕೆ ನಿವಾಸಿ, ಉದಯವಾಣಿ ವರದಿಗಾರ ಕೆ.ಎನ್. ಗೌಡ ಅವರು ಡಿ.10ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಡಿ.3ರಂದು ನಾಳ ದೇವಸ್ಥಾನದಲ್ಲಿ ನಡೆದ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವ ಹಾಗೂ 2027ನೇ ವರ್ಷದಲ್ಲಿ ನಡೆಸಲು ಉದ್ದೇಶಿಸಿರುವ ಸಾರ್ವಜನಿಕ ಮತ್ತು ಭಕ್ತರ ಸಭೆಯಲ್ಲಿ ಊರಿನ ಭಕ್ತನಾಗಿ ಹಾಗೂ ಪತ್ರಿಕೆ ವರದಿಗಾರನಾಗಿ ಭಾಗವಹಿಸಿರುತ್ತೇನೆ. ಅದರಂತೆಯೇ ಅ ದಿನ ಸಭೆಯಲ್ಲಿ ನಡೆದಿರುವ ವಿಷಯವನ್ನು ಅಧರಿಸಿ ನೈಜ ವರದಿಯನ್ನು ಕಳುಹಿಸಿ ಕೊಟ್ಟಿದ್ದು, ಅದು ಉದಯವಾಣಿ ಕನ್ನಡ ದಿನಪತ್ರಿಕೆಯಲ್ಲಿ ಪ್ರಕಟವಾಗಿದೆ. ಪತ್ರಿಕೆಯಲ್ಲಿ ಬಂದ ಬಳಿಕ ಡಿ.9 ರಂದು ಶ್ರೀ ಕ್ಷೇತ್ರದ ವಾಟ್ಸಫ್ ಗ್ರೂಪ್‌ನಿಂದ ನನ್ನ ಮೊಬೈಲ್ ಸಂಖ್ಯೆಯನ್ನು ರಿಮೂವ್ ಮಾಡಿದ್ದನ್ನು ವಿಚಾರಿಸಿದಾಗ ಮೊಬೈಲ್ ಪೋನ್ ಮೂಲಕ ಅವಾಚ್ಯ ಶಬ್ದಗಳಲ್ಲಿ ನಿಂದನೆ ಮಾಡಿ, ವಾಯ್ಸ್ ರೆಕಾರ್ಡ್ ಕಳುಹಿಸಿ, ನನ್ನ ಪತ್ನಿ, ಮಗಳ ವಿಷಯ ಪ್ರಸ್ತಾಪಿಸಿ ಜೀವ ಬೆದರಿಕೆ ಹಾಕಿರುವುದಾಗಿ ಕೆ.ಎನ್ ಗೌಡ ದೂರಿನಲ್ಲಿ ಆರೋಪಿಸಿದ್ದಾರೆ.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಪುಟ್ ಬಾಲ್ ಪಂದ್ಯಾಟ

Suddi Udaya

ಜಿಲ್ಲಾ ಮಟ್ಟದ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಯಂಗ್ ಚಾಲೆಂಜರ್ಸ್ ತಂಡ ದ್ವಿತೀಯ

Suddi Udaya

ಉಜಿರೆಯಲ್ಲಿ ಚುನಾವಣಾ ಪ್ರಚಾರದ ಅಂಗವಾಗಿ ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ್ ಬಿಸ್ವಾಸ್ ಶರ್ಮ ಬೃಹತ್ ರೋಡ್ ಶೋ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ಮತ ಪ್ರಚಾರ

Suddi Udaya

ಲಕ್ಷಾಂತರ ರೂ. ಮೌಲ್ಯದ ಖೋಟಾ ನೋಟು ಸಂಗ್ರಹ: ಎಫ್‌ಐಆರ್ ರದ್ದು ಕೋರಿ ಅರ್ಜಿ, ಸರಕಾರಕ್ಕೆ ನೋಟಿಸ್

Suddi Udaya

ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ

Suddi Udaya

ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!