September 6, 2026
ಗ್ರಾಮಾಂತರ ಸುದ್ದಿವರದಿ

ಬಂದಾರು: ಕಳೆದು ಹೋಗಿದ್ದ ರೂ.2.50 ಲಕ್ಷ ಮೌಲ್ಯದ ಚಿನ್ನ ಹಾಗೂ 10 ಸಾವಿರ ನಗದನ್ನು ಹಿಂದುರುಗಿಸಿ ಕೊಟ್ಟು ಮಾನವೀಯ ಮೆರೆದ ವಿನಯ್ ನಿವೇದಿತಾ

ಉಪ್ಪಿನಂಗಡಿ: ಡಿ.10ರಂದು ಬಂದಾರು ಗ್ರಾಮದ ಅಂಡಿಲ ನಿವಾಸಿ ದೀಕ್ಷಾ ರಕ್ಷಿತ್ ರವರ ಕಳೆದು ಹೋಗಿದ್ದ ರೂ.2.50 ಲಕ್ಷ ಮೌಲ್ಯದ ಚಿನ್ನ ಹಾಗೂ 10 ಸಾವಿರ ನಗದು ಇದ್ದ ಪರ್ಸ್ ನ್ನು ಹಿಂದಿರುಗಿಸಿ ಕೊಟ್ಟ ವಿನಯ್ ನಿವೇದಿತಾ ರವರಿಗೆ ದೀಕ್ಷಾ ರಕ್ಷಿತ್ ದಂಪತಿಗಳು ಕೃತಜ್ಞತೆ ಸಲ್ಲಿಸಿ, ಸನ್ಮಾನಿಸಿದರು.

ಘಟನೆ ವಿವರ: ಬಂದಾರು ಗ್ರಾಮದ ಅಂಡಿಲ ನಿವಾಸಿ ರಕ್ಷಿತ್ ಇವರ ಪತ್ನಿ ದೀಕ್ಷಾ ರಕ್ಷಿತ್ ರವರ ರೂ 2.50 ಲಕ್ಷ ಮೌಲ್ಯದ ಚಿನ್ನ ಹಾಗೂ 10 ಸಾವಿರ ನಗದು ಇದ್ದ ಪರ್ಸ್ ಉಪ್ಪಿನಂಗಡಿ ಹೋಟೆಲ್ ನಲ್ಲಿ ಡಿ.10 ರಂದು ಸಂಜೆ ಕೈ ತಪ್ಪಿ ಕಳೆದು ಹೋಗಿದ್ದು, ಮನೆಗೆ ಹೋಗಿ ನೋಡುವಾಗ ಚಿನ್ನ, ನಗದು ಕಳೆದು ಹೋಗಿರುವ ಬಗ್ಗೆ ಅರಿವಾಗುತ್ತದೆ, ತಕ್ಷಣ ತನ್ನ ಸಂಬಂಧಿಕರಲ್ಲಿ ತಿಳಿಸಿ ಪರಿಶೀಲಿಸಿದಾಗ ಯಾರಿಗೆ ಸಿಕ್ಕಿದೆ ಎನ್ನುವುದು ತಿಳಿಯುತ್ತದೆ. ಡಿ.11ರಂದು ಬಜತ್ತೂರು ಗ್ರಾಮದ ವಲಾಲ್ ಬೆದ್ರೂಡಿ ನಿವಾಸಿ ವಿನಯ್ ನಿವೇದಿತಾ ರವರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಭೇಟಿ ನೀಡಿ ವಾರಸುದಾರರಿಗೆ ಚಿನ್ನ, ನಗದು ಹಸ್ತಾಂತರ ಮಾಡಿದರು. ಇವರನ್ನು ದೀಕ್ಷಾ ರಕ್ಷಿತ್ ದಂಪತಿಗಳು ಕೃತಜ್ಞತೆ ಸಲ್ಲಿಸಿ, ಸನ್ಮಾನಿಸಿದರು. ಉಪ್ಪಿನಂಗಡಿ ಪೊಲೀಸ್ ಅಧಿಕಾರಿ ವರ್ಗಕ್ಕೂ ಕೃತಜ್ಞತೆ ಸಲ್ಲಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ನ.19-20 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

Suddi Udaya

ಗೇರುಕಟ್ಟೆ: ಯಕ್ಷೋತ್ಸವ ಕಾರ್ಯಕ್ರಮ ಉದ್ಘಾಟನೆ

Suddi Udaya

ಭೂಸೇನೆಯಲ್ಲಿ 30ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸುಬೇದಾರ್ ಮೇಜರ್ ಕೆ. ಪ್ರವೀಣ್ ಶೆಣೈ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಮೆರವಣಿಗೆ ಮೂಲಕ ಅಭಿವಂದನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮ ವರ್ಷದ ಪ್ರಥಮ ಯೋಗಾಸನ ಶಿಬಿರ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಕನ್ನಡ ರಾಜ್ಯೋತ್ಸವ

Suddi Udaya

ಬಂದಾರು: ಕುಂಟಾಲಪಲ್ಕೆ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ ಪುನರ್ ರಚನೆ

Suddi Udaya
error: Content is protected !!