26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿವರದಿ

ಬಂದಾರು: ಕಳೆದು ಹೋಗಿದ್ದ ರೂ.2.50 ಲಕ್ಷ ಮೌಲ್ಯದ ಚಿನ್ನ ಹಾಗೂ 10 ಸಾವಿರ ನಗದನ್ನು ಹಿಂದುರುಗಿಸಿ ಕೊಟ್ಟು ಮಾನವೀಯ ಮೆರೆದ ವಿನಯ್ ನಿವೇದಿತಾ

ಉಪ್ಪಿನಂಗಡಿ: ಡಿ.10ರಂದು ಬಂದಾರು ಗ್ರಾಮದ ಅಂಡಿಲ ನಿವಾಸಿ ದೀಕ್ಷಾ ರಕ್ಷಿತ್ ರವರ ಕಳೆದು ಹೋಗಿದ್ದ ರೂ.2.50 ಲಕ್ಷ ಮೌಲ್ಯದ ಚಿನ್ನ ಹಾಗೂ 10 ಸಾವಿರ ನಗದು ಇದ್ದ ಪರ್ಸ್ ನ್ನು ಹಿಂದಿರುಗಿಸಿ ಕೊಟ್ಟ ವಿನಯ್ ನಿವೇದಿತಾ ರವರಿಗೆ ದೀಕ್ಷಾ ರಕ್ಷಿತ್ ದಂಪತಿಗಳು ಕೃತಜ್ಞತೆ ಸಲ್ಲಿಸಿ, ಸನ್ಮಾನಿಸಿದರು.

ಘಟನೆ ವಿವರ: ಬಂದಾರು ಗ್ರಾಮದ ಅಂಡಿಲ ನಿವಾಸಿ ರಕ್ಷಿತ್ ಇವರ ಪತ್ನಿ ದೀಕ್ಷಾ ರಕ್ಷಿತ್ ರವರ ರೂ 2.50 ಲಕ್ಷ ಮೌಲ್ಯದ ಚಿನ್ನ ಹಾಗೂ 10 ಸಾವಿರ ನಗದು ಇದ್ದ ಪರ್ಸ್ ಉಪ್ಪಿನಂಗಡಿ ಹೋಟೆಲ್ ನಲ್ಲಿ ಡಿ.10 ರಂದು ಸಂಜೆ ಕೈ ತಪ್ಪಿ ಕಳೆದು ಹೋಗಿದ್ದು, ಮನೆಗೆ ಹೋಗಿ ನೋಡುವಾಗ ಚಿನ್ನ, ನಗದು ಕಳೆದು ಹೋಗಿರುವ ಬಗ್ಗೆ ಅರಿವಾಗುತ್ತದೆ, ತಕ್ಷಣ ತನ್ನ ಸಂಬಂಧಿಕರಲ್ಲಿ ತಿಳಿಸಿ ಪರಿಶೀಲಿಸಿದಾಗ ಯಾರಿಗೆ ಸಿಕ್ಕಿದೆ ಎನ್ನುವುದು ತಿಳಿಯುತ್ತದೆ. ಡಿ.11ರಂದು ಬಜತ್ತೂರು ಗ್ರಾಮದ ವಲಾಲ್ ಬೆದ್ರೂಡಿ ನಿವಾಸಿ ವಿನಯ್ ನಿವೇದಿತಾ ರವರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಭೇಟಿ ನೀಡಿ ವಾರಸುದಾರರಿಗೆ ಚಿನ್ನ, ನಗದು ಹಸ್ತಾಂತರ ಮಾಡಿದರು. ಇವರನ್ನು ದೀಕ್ಷಾ ರಕ್ಷಿತ್ ದಂಪತಿಗಳು ಕೃತಜ್ಞತೆ ಸಲ್ಲಿಸಿ, ಸನ್ಮಾನಿಸಿದರು. ಉಪ್ಪಿನಂಗಡಿ ಪೊಲೀಸ್ ಅಧಿಕಾರಿ ವರ್ಗಕ್ಕೂ ಕೃತಜ್ಞತೆ ಸಲ್ಲಿಸಿದರು.

Related posts

ಕಣಿಯೂರು : ಓಮ್ಮಿ ಕಾರು ಹಾಗೂ ರಿಡ್ಜ್ ಕಾರು ಮುಖಾಮುಖಿ ಡಿಕ್ಕಿ

Suddi Udaya

ಬೆಳ್ತಂಗಡಿ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಮಾನ್ವಿ ಲೈಟ್ ಹೌಸ್ ಶುಭಾರಂಭ

Suddi Udaya

ಸುಲ್ಕೇರಿಮೋಗ್ರು: ಕುಸಿದ ತಡೆಗೋಡೆ ತೆರವುಗೊಳಿಸಿದ ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸ್ವಯಂಸೇವಕರು

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲಾ ಶಿಕ್ಷಕಿ ಅಕ್ಕಮ್ಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಸುಂದರ ಮಲೆಕುಡಿಯ ಕೈ ಬೆರಳು ತುಂಡರಿಸಿ ದೌರ್ಜನ್ಯ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಪ್ರಕಟ: ದಶಕಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ: ಅಕ್ಬರ್ ಬೆಳ್ತಂಗಡಿ

Suddi Udaya

ಕರಾಯ ಶ್ರೀಮಹಾಲಿಂಗೇಶ್ವರ ದೇವಳದ ಬ್ರಹ್ಮಕಲಶೋತ್ಸವದ ಕಾರ್ಯಾಲಯ ಕಛೇರಿ ಉದ್ಘಾಟನೆ

Suddi Udaya
error: Content is protected !!