ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶತಮಾನೋತ್ಸವದ ಸಂಭ್ರಮದ ಪೂರ್ವ ಭಾವಿ ಸಭೆಯು ನಡೆಯಿತು.
ಕಾರ್ಯಕ್ರಮದಲ್ಲಿ ಶಾಲಾ ಶತಮಾನೋತ್ಸವ ಸಮಿತಿಯ ಕಾರ್ಯಕ್ರಮ ಸಂಯೋಜಕ ಬಿ.ಸೋಮಶೇಖರ್ ಶೆಟ್ಟಿಯವರು ಪೋಷಕರನ್ನು ಕುರಿತು, ಶತಮಾನೋತ್ಸವ ಕಾರ್ಯಕ್ರಮಕ್ಕೆ ನಡೆಸಬೇಕಾದ ಪೂರ್ವತಯಾರಿಯ ಬಗ್ಗೆ ವಿವರಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಪೋಷಕರ ಸಹಕಾರವನ್ನು ಡಿ.19 ,20 ರಂದು ನಡೆಯಲಿರುವ ಶತಮಾನೋತ್ಸವ ಕಾರ್ಯಕ್ರಮದ ರೂಪುರೇಷೆಯನ್ನು ಪೋಷಕರಿಗೆ ತಿಳಿಸಿದರು.
ಶ್ರೀ.ಧಮಂ ಶಿಕ್ಷಣ ಸಂಸ್ಥೆಯ ಕ್ಷೇಮಪಾಲನಾ ಅಧಿಕಾರಿಯಾಗಿರುವ ಧನ್ಯಕುಮಾರ್ ಮತ್ತು ಶಾಲಾ ಶತಮಾನೋತ್ಸವ ಸಮಿತಿಯ ಕಾರ್ಯದರ್ಶಿಗಳಾದ ಅಬೂಬಕ್ಕರ್ ಸಭೆಯನ್ನು ಉದ್ದೇಶಿಸಿ ಶತಮಾನೋತ್ಸವ ಕಾರ್ಯಕ್ರಮ ಹಾಗೂ ಸ್ಮರಣೀಯಗೊಳಿಸಲು ಪೋಷಕರ ಪಾತ್ರ ಮಹತ್ತರವಾದದು ಶತಮಾನೋತ್ಸವ ಸಂಭ್ರಮವನ್ನು ಯಶಸ್ವಿಯಾಗಿ ನಡೆಸಲು ಪೋಷಕರ ಸಹಕಾರ ಕೋರಿದರು.
ವೇದಿಕೆಯಲ್ಲಿ ಮೋಹನ್ ಶೆಟ್ಟಿಗಾರ್, ಕೋಶಾಧಿಕಾರಿ ಶಾಲಾ ಶತಮಾನೋತ್ಸವ ಸಮಿತಿ, ಎಸ್.ಕೆ.ಡಿ.ಆರ್.ಡಿ.ಪಿ ಯೋಜನಾಧಿಕಾರಿ ಯಶೋಧರ್, ಶಾಲಾ ಮುಖ್ಯೋಪಾಧ್ಯಾಯರಾದ ಬಾಲಕೃಷ್ಣ ನಾಯ್ಕ ಪಿ, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರುಗಳಾದ ಕೃಷ್ಣಪ್ರಸಾದ್ ಮತ್ತು ಶ್ರೀಮತಿ ಪ್ರತಿಮಾ ಉಪಸ್ಥಿತರಿದ್ದರು.
ಸಭೆಯಲ್ಲಿ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಅಬೂಬಕ್ಕರ್ ಶಾಲಾ ಶತಮಾನೋತ್ಸವ ಸಂಭ್ರಮಕ್ಕೆ ಪೋಷಕರೆಲ್ಲಾ
ಕೈಜೋಡಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಕೇಳಿಕೊಂಡರು.
ಶತಮಾನೋತ್ಸವ ಸಂಭ್ರಮ ಕಾರ್ಯಕ್ರಮಕ್ಕೆ ವಿವಿಧ ಸಮಿತಿಗಳನ್ನು ರಚಿಸಲಾಯಿತು. ಕಾರ್ಯಕ್ರಮವು ಸುಜಾತ ನಿರೂಪಿಸಿ, ಗಿರೀಶ್ ಸ್ವಾಗತಿಸಿದರು. ಅಶ್ವಿನಿ ಧನ್ಯವಾದವಿತ್ತರು.











