26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶತಮಾನೋತ್ಸವದ ಸಂಭ್ರಮದ ಪೂರ್ವ ಭಾವಿ ಸಭೆಯು ನಡೆಯಿತು.

ಕಾರ್ಯಕ್ರಮದಲ್ಲಿ ಶಾಲಾ ಶತಮಾನೋತ್ಸವ ಸಮಿತಿಯ ಕಾರ್ಯಕ್ರಮ ಸಂಯೋಜಕ ಬಿ.ಸೋಮಶೇಖರ್ ಶೆಟ್ಟಿಯವರು ಪೋಷಕರನ್ನು ಕುರಿತು, ಶತಮಾನೋತ್ಸವ ಕಾರ್ಯಕ್ರಮಕ್ಕೆ ನಡೆಸಬೇಕಾದ ಪೂರ್ವತಯಾರಿಯ ಬಗ್ಗೆ ವಿವರಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಪೋಷಕರ ಸಹಕಾರವನ್ನು ಡಿ.19 ,20 ರಂದು ನಡೆಯಲಿರುವ ಶತಮಾನೋತ್ಸವ ಕಾರ್ಯಕ್ರಮದ ರೂಪುರೇಷೆಯನ್ನು ಪೋಷಕರಿಗೆ ತಿಳಿಸಿದರು.

ಶ್ರೀ.ಧಮಂ ಶಿಕ್ಷಣ ಸಂಸ್ಥೆಯ ಕ್ಷೇಮಪಾಲನಾ ಅಧಿಕಾರಿಯಾಗಿರುವ ಧನ್ಯಕುಮಾರ್ ಮತ್ತು ಶಾಲಾ ಶತಮಾನೋತ್ಸವ ಸಮಿತಿಯ ಕಾರ್ಯದರ್ಶಿಗಳಾದ ಅಬೂಬಕ್ಕರ್ ಸಭೆಯನ್ನು ಉದ್ದೇಶಿಸಿ ಶತಮಾನೋತ್ಸವ ಕಾರ್ಯಕ್ರಮ ಹಾಗೂ ಸ್ಮರಣೀಯಗೊಳಿಸಲು ಪೋಷಕರ ಪಾತ್ರ ಮಹತ್ತರವಾದದು ಶತಮಾನೋತ್ಸವ ಸಂಭ್ರಮವನ್ನು ಯಶಸ್ವಿಯಾಗಿ ನಡೆಸಲು ಪೋಷಕರ ಸಹಕಾರ ಕೋರಿದರು.

ವೇದಿಕೆಯಲ್ಲಿ ಮೋಹನ್ ಶೆಟ್ಟಿಗಾರ್, ಕೋಶಾಧಿಕಾರಿ ಶಾಲಾ ಶತಮಾನೋತ್ಸವ ಸಮಿತಿ, ಎಸ್.ಕೆ.ಡಿ.ಆರ್.ಡಿ.ಪಿ ಯೋಜನಾಧಿಕಾರಿ ಯಶೋಧರ್, ಶಾಲಾ ಮುಖ್ಯೋಪಾಧ್ಯಾಯರಾದ ಬಾಲಕೃಷ್ಣ ನಾಯ್ಕ ಪಿ, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರುಗಳಾದ ಕೃಷ್ಣಪ್ರಸಾದ್ ಮತ್ತು ಶ್ರೀಮತಿ ಪ್ರತಿಮಾ ಉಪಸ್ಥಿತರಿದ್ದರು.
ಸಭೆಯಲ್ಲಿ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಅಬೂಬಕ್ಕರ್ ಶಾಲಾ ಶತಮಾನೋತ್ಸವ ಸಂಭ್ರಮಕ್ಕೆ ಪೋಷಕರೆಲ್ಲಾ
ಕೈಜೋಡಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಕೇಳಿಕೊಂಡರು.


ಶತಮಾನೋತ್ಸವ ಸಂಭ್ರಮ ಕಾರ್ಯಕ್ರಮಕ್ಕೆ ವಿವಿಧ ಸಮಿತಿಗಳನ್ನು ರಚಿಸಲಾಯಿತು. ಕಾರ್ಯಕ್ರಮವು ಸುಜಾತ ನಿರೂಪಿಸಿ, ಗಿರೀಶ್ ಸ್ವಾಗತಿಸಿದರು. ಅಶ್ವಿನಿ ಧನ್ಯವಾದವಿತ್ತರು.

Related posts

ಉಜಿರೆ: ಶ್ರೀ ಧರ್ಮಸ್ಥಳದ ಮಂಜುನಾಥೇಶ್ವರ ಆಸ್ಪತ್ರೆಗೆ ದಶಮಾನೋತ್ಸವ ಸಂಭ್ರಮ

Suddi Udaya

ಉಜಿರೆ ಧ.ಮಂ. ಕಾಲೇಜಿನಲ್ಲಿ ಬದುಕು ಮತ್ತು ದುರದೃಷ್ಟಿತ್ವದ ಪರಿಕಲ್ಪನೆಯಲ್ಲಿ ಸ್ವಾವಲಂಬಿ ಭಾರತದ ನಿರ್ಮಾಣದಲ್ಲಿ ಯುವಜನರ ಪಾತ್ರ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಜಾತ್ರೋತ್ಸವ ಸಂಪನ್ನ

Suddi Udaya

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya

ಕಳೆಂಜ : ಬಿಜೆಪಿ ಕಾರ್ಯಕರ್ತರಿಂದ ಬೈಕ್ ಜಾಥಾ

Suddi Udaya

ಬೆಳ್ತಂಗಡಿ ಕುಡಾಳ ದೇಶಸ್ತ ಆದ್ಯ ಗೌಡ್ ಬ್ರಾಹ್ಮಣ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!