22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಸ್.ವೈ.ಎಸ್ ಬೆಳ್ತಂಗಡಿ ಝೋನ್ ಮಾದರಿ ಮದುವೆ ಪ್ರಯುಕ್ತ ಡಿ.12 ರಂದು ಜಮಾಅತ್ ಪ್ರತಿನಿಧಿ ಸಂಗಮ

ಬೆಳ್ತಂಗಡಿ: ಮದುವೆಯ ಹೆಸರಿನಲ್ಲಿ ಇಂದು ಹಲವಾರು ಅನಾಚಾರಗಳು ನಡೆಯುತ್ತಿದ್ದು, ಮದುವೆಯನ್ನು ಹೆಚ್ಚು ಭಾರಗೊಳಿಸುವುದರೊಂದಿಗೆ, ಅನಿಸ್ಲಾಮಿಕತೆಗಳಿಂದ ಮದುವೆಯ ಬರಕತ್ತನ್ನು ನೀಗಿಸಲಾಗುತ್ತಿದೆ. ಇದಕ್ಕೊಂದು ಕಡಿವಾಣ ಹಾಕಬೇಕೆಂದುಕೊಂಡು ಎಸ್.ವ್ಯೆ.ಎಸ್ ಕರ್ನಾಟಕ ರಾಜ್ಯ ಸಮಿತಿಯು ‘ಮಾದರಿ ಮದುವೆ: ಶತದಿನ ಅಭಿಯಾನ’ವನ್ನು ಹಮ್ಮಿಗೊಂಡಿದ್ದು. ಆ ಪ್ರಯುಕ್ತ ಎಸ್.ವ್ಯೆ.ಎಸ್ ಬೆಳ್ತಂಗಡಿ ಝೋನ್ ಜಮಾಅತ್ ಪ್ರತಿನಿಧಿಗಳ ಸಂಗಮ ಡಿ12 ರಂದು 3ಗಂಟೆಗೆ ಝೋನ್ ಅಧ್ಯಕ್ಷ ಅಬ್ದುಲ್ ರಹ್ಮಾನ್ ಸಖಾಫಿ ಆಲoದಿಲ ರವರ ಅಧ್ಯಕ್ಷತೆ ಯಲ್ಲಿ ಗುರುವಾಯನಕೆರೆ ಮಸೀದಿ ಹಾಲ್ ನಲ್ಲಿ ನಡೆಯಲಿರುವುದು.

ಅಸ್ಸಯ್ಯದ್ ಇಸ್ಮಾಯಿಲ್ ಅಲ್ ಹಾದಿ ತಂಗಳ್ ಉಜಿರೆ ಕಾರ್ಯಕ್ರಮದ ದುಆ ನೇತ್ರತ್ವವನ್ನು ನೀಡಲಿದ್ದಾರೆ. ಅಸ್ಸಯ್ಯದ್ ಅಬ್ದುಲ್ ರಹ್ಮಾನ್ ಬಾ-ಅಲವಿ ಸಾದಾತ್ ತಂಗಳ್ ಕುಪ್ಪೆಟ್ಟಿ ಉದ್ಘಾಟನೆ ಯೊಂದಿಗೆ ಚಾಲನೆ ನೀಡಲಿದ್ದಾರೆ. ಮತ್ತು
ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಕಾರ್ಯದರ್ಶಿ MSM ಅಬ್ದುಲ್ ರಶೀದ್ ಝ್ಯೆನಿ ಕಾಮಿಲ್ ಸಖಾಫಿ ಮಾದರಿ ಮದುವೆ ಬಗ್ಗೆ ವಿಷಯ ಮಂಡಿಸಲಿದ್ದಾರೆ.

ಬೆಳ್ತಂಗಡಿ ಝೋನ್ ವ್ಯಾಪ್ತಿಯ 60 ಮೊಹಲ್ಲಾ ಗಳಿಂದ ಖತೀಬರು, ಜಮಾಅತ್ ಪ್ರತಿನಿದಿಗಳು ಸೇರಿ ಸುಮಾರು 350ರಷ್ಟು ನಾಯಕರುಗಳು ಭಾಗವಹಿಸಲಿದ್ದಾರೆ. ಎಂದು ಝೋನ್ ಪ್ರಧಾನ ಕಾರ್ಯದರ್ಶಿ ಸಲೀಂ ಕನ್ಯಾಡಿ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Related posts

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಶತ ಚಂಡಿಕಾಯಾಗದ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವೀಲ್ ಚೇರ್ ವಿತರಣೆ 

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯ ವತಿಯಿಂದ ಹೊಸವರ್ಷದ ಪ್ರಯುಕ್ತ ಸೌಹಾರ್ದ ಕೂಟ

Suddi Udaya

ಜೂ.8-ಜು.22 : ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್ ಡಿಟಿಪಿ ತರಬೇತಿ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಬೆಂಗಳೂರು ಇಂದಿರಾನಗರ ಮತ್ತು ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಸಹಯೋಗದೊಂದಿಗೆ ನಾವೂರಿನ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಗೆ ಶೌಚಾಲಯ ನಿರ್ಮಿಸಿ ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!