25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣ್ತಪ್ಪಿನಿಂದ ಇನ್ನೊಬ್ಬರ ಖಾತೆಗೆ ಹಣ ವರ್ಗಾವಣೆ: ಮರುಪಾವತಿಸಲು ನಿರಾಕರಣೆ ; ದೂರು ದಾಖಲು

ಬೆಳ್ತಂಗಡಿ: ಕಣ್ತಪ್ಪಿನಿಂದ ಹಣ ಬೇರೆಯವರ ಖಾತೆಗೆ ವರ್ಗಾವಣೆಯಾಗಿದ್ದು, ಮರುಪಾವತಿಸಲು ನಿರಾಕರಿಸಿದ ಪ್ರಕರಣ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವ ತನ್ನ ಸಂಬಂಧಿಕರಿಗೆ ತುರ್ತು ಅಗತ್ಯದ ನೆಲೆಯಲ್ಲಿ ಪೋನ್ ಪೇ ಮೂಲಕ ಕಳುಹಿಸಲಾದ ಹಣ ಕಣ್ಣಪ್ಪಿನಿಂದಾಗಿ ಇನ್ನೊಬ್ಬರ ಖಾತೆಗೆ ಹೋದ ಪ್ರಕರಣದಲ್ಲಿ ಹಣ ಮರುಪಾವತಿಸಲು ನಿರಾಕರಿಸಿದ ಉಜಿರೆಯ ಉದ್ಯಮಿ ವಿರುದ್ಧ ಪ್ರಕರಣ ದಾಖಲಾಗಿದೆ.

ಉಪ್ಪಿನಂಗಡಿಯ ಮಠ ಎಂಬಲ್ಲಿ ಗ್ರಾನೈಟ್ ಉದ್ಯಮ ನಡೆಸಿಕೊಂಡಿರುವ ಹರಿರಾವ್ ಎಂಬವರು ನೀಡಿದ ದೂರಿನಂತೆ ತನ್ನ ರಾಜಸ್ಥಾನದಲ್ಲಿನ ಸಂಬಂಧಿಕ ಲಕ್ಷ್ಮೀಚಂದ್ ಎಂಬವರಿಗೆ ಕಳುಹಿಸಬೇಕಾದ 19,000 ರೂ. ಕಣ್ಣಪ್ಪಿನಿಂದಾಗಿ ಉಜಿರೆಯ ಉದ್ಯಮಿಯೋರ್ವರ ಖಾತೆಗೆ ವರ್ಗಾವಣೆಗೊಂಡಿದ್ದು, ಈ ಮೊತ್ತದಲ್ಲಿ 10,000 ರೂ. ವನ್ನು ಹಿಂದಿರುಗಿಸಿ ಉಳಿದ ಮೊತ್ತವನ್ನು ಹಿಂದಿರುಗಿಸದೆ ಸತಾಯಿಸುತ್ತಿದ್ದಾರೆಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಸ್ವಂತ ಖರ್ಚಿನಲ್ಲಿ ಸಾರ್ವಜನಿಕ ರಸ್ತೆಯ ದುರಸ್ತಿ; ವೇಣೂರು ಗ್ರಾ.ಪಂ. ಸದಸ್ಯರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ

Suddi Udaya

ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮಚ್ಚಿನ: ನೆತ್ತರ ಸ. ಕಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ಹಾ.ಉ.ಸ.ಸಂಘದಿಂದ ಆರ್ಥಿಕ ನೆರವು

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷ/ ಉಪಾಧ್ಯಕ್ಷರ ಆಯ್ಕೆ

Suddi Udaya

ಪುತ್ತೂರು ಬಿಲ್ಲವ ಸಂಘದಿಂದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ರವರಿಗೆ ಅಭಿನಂದನೆ

Suddi Udaya
error: Content is protected !!