26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣ್ತಪ್ಪಿನಿಂದ ಇನ್ನೊಬ್ಬರ ಖಾತೆಗೆ ಹಣ ವರ್ಗಾವಣೆ: ಮರುಪಾವತಿಸಲು ನಿರಾಕರಣೆ ; ದೂರು ದಾಖಲು

ಬೆಳ್ತಂಗಡಿ: ಕಣ್ತಪ್ಪಿನಿಂದ ಹಣ ಬೇರೆಯವರ ಖಾತೆಗೆ ವರ್ಗಾವಣೆಯಾಗಿದ್ದು, ಮರುಪಾವತಿಸಲು ನಿರಾಕರಿಸಿದ ಪ್ರಕರಣ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವ ತನ್ನ ಸಂಬಂಧಿಕರಿಗೆ ತುರ್ತು ಅಗತ್ಯದ ನೆಲೆಯಲ್ಲಿ ಪೋನ್ ಪೇ ಮೂಲಕ ಕಳುಹಿಸಲಾದ ಹಣ ಕಣ್ಣಪ್ಪಿನಿಂದಾಗಿ ಇನ್ನೊಬ್ಬರ ಖಾತೆಗೆ ಹೋದ ಪ್ರಕರಣದಲ್ಲಿ ಹಣ ಮರುಪಾವತಿಸಲು ನಿರಾಕರಿಸಿದ ಉಜಿರೆಯ ಉದ್ಯಮಿ ವಿರುದ್ಧ ಪ್ರಕರಣ ದಾಖಲಾಗಿದೆ.

ಉಪ್ಪಿನಂಗಡಿಯ ಮಠ ಎಂಬಲ್ಲಿ ಗ್ರಾನೈಟ್ ಉದ್ಯಮ ನಡೆಸಿಕೊಂಡಿರುವ ಹರಿರಾವ್ ಎಂಬವರು ನೀಡಿದ ದೂರಿನಂತೆ ತನ್ನ ರಾಜಸ್ಥಾನದಲ್ಲಿನ ಸಂಬಂಧಿಕ ಲಕ್ಷ್ಮೀಚಂದ್ ಎಂಬವರಿಗೆ ಕಳುಹಿಸಬೇಕಾದ 19,000 ರೂ. ಕಣ್ಣಪ್ಪಿನಿಂದಾಗಿ ಉಜಿರೆಯ ಉದ್ಯಮಿಯೋರ್ವರ ಖಾತೆಗೆ ವರ್ಗಾವಣೆಗೊಂಡಿದ್ದು, ಈ ಮೊತ್ತದಲ್ಲಿ 10,000 ರೂ. ವನ್ನು ಹಿಂದಿರುಗಿಸಿ ಉಳಿದ ಮೊತ್ತವನ್ನು ಹಿಂದಿರುಗಿಸದೆ ಸತಾಯಿಸುತ್ತಿದ್ದಾರೆಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಜೆಸಿಐ ಬೆಳ್ತಂಗಡಿಯ ಉದ್ದೇಶಿತ ‘ಜೇಸಿ ಛೇಂಬರ್ ಆಫ್ ಕಾಮರ್ಸ್’ ಸ್ಥಾಪನೆ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಸಿಎಸ್ಇಇಟಿ ಪರೀಕ್ಷೆ: ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ಸಾಧನೆ

Suddi Udaya

ಲಾಯಿಲ: ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ

Suddi Udaya

ಬೆಳ್ತಂಗಡಿ: ಬಗರ್ ಹುಕುಂ ಅಕ್ರಮ–ಸಕ್ರಮ ಸಮಿತಿಯ ಸಭೆ

Suddi Udaya

ಹೆದ್ದಾರಿ ಬದಿ ಬೆಂಕಿ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯಿಂದ ಸೇವಾ ಯೋಜನೆ ಹಸ್ತಾಂತರ

Suddi Udaya
error: Content is protected !!