22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಜೀವ ಬೆದರಿಕೆ ಆರೋಪ : ಕೆ.ಎನ್ ಗೌಡರಿಂದ ಠಾಣೆಗೆ ದೂರು

ಬೆಳ್ತಂಗಡಿ: ನಾಳ ದೇವಾಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ. ಅವರು ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಿ, ಕಳಿಯ ಗ್ರಾಮದ `ದೇವಿ ಕೃಪಾ’ ಪೆಲತ್ತಳಿಕೆ ನಿವಾಸಿ, ಉದಯವಾಣಿ ವರದಿಗಾರ ಕೆ.ಎನ್. ಗೌಡ ಅವರು ಡಿ.10ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಡಿ.3ರಂದು ನಾಳ ದೇವಸ್ಥಾನದಲ್ಲಿ ನಡೆದ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವ ಹಾಗೂ 2027ನೇ ವರ್ಷದಲ್ಲಿ ನಡೆಸಲು ಉದ್ದೇಶಿಸಿರುವ ಸಾರ್ವಜನಿಕ ಮತ್ತು ಭಕ್ತರ ಸಭೆಯಲ್ಲಿ ಊರಿನ ಭಕ್ತನಾಗಿ ಹಾಗೂ ಪತ್ರಿಕೆ ವರದಿಗಾರನಾಗಿ ಭಾಗವಹಿಸಿರುತ್ತೇನೆ. ಅದರಂತೆಯೇ ಅ ದಿನ ಸಭೆಯಲ್ಲಿ ನಡೆದಿರುವ ವಿಷಯವನ್ನು ಅಧರಿಸಿ ನೈಜ ವರದಿಯನ್ನು ಕಳುಹಿಸಿ ಕೊಟ್ಟಿದ್ದು, ಅದು ಉದಯವಾಣಿ ಕನ್ನಡ ದಿನಪತ್ರಿಕೆಯಲ್ಲಿ ಪ್ರಕಟವಾಗಿದೆ. ಪತ್ರಿಕೆಯಲ್ಲಿ ಬಂದ ಬಳಿಕ ಡಿ.9 ರಂದು ಶ್ರೀ ಕ್ಷೇತ್ರದ ವಾಟ್ಸಫ್ ಗ್ರೂಪ್‌ನಿಂದ ನನ್ನ ಮೊಬೈಲ್ ಸಂಖ್ಯೆಯನ್ನು ರಿಮೂವ್ ಮಾಡಿದ್ದನ್ನು ವಿಚಾರಿಸಿದಾಗ ಮೊಬೈಲ್ ಪೋನ್ ಮೂಲಕ ಅವಾಚ್ಯ ಶಬ್ದಗಳಲ್ಲಿ ನಿಂದನೆ ಮಾಡಿ, ವಾಯ್ಸ್ ರೆಕಾರ್ಡ್ ಕಳುಹಿಸಿ, ನನ್ನ ಪತ್ನಿ, ಮಗಳ ವಿಷಯ ಪ್ರಸ್ತಾಪಿಸಿ ಜೀವ ಬೆದರಿಕೆ ಹಾಕಿರುವುದಾಗಿ ಕೆ.ಎನ್ ಗೌಡ ದೂರಿನಲ್ಲಿ ಆರೋಪಿಸಿದ್ದಾರೆ.

Related posts

ಡಾ.ಎಂ.ಎನ್.ರಾಜೇಂದ್ರ ಕುಮಾರ್ ಗೆ ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್

Suddi Udaya

ಕೊಕ್ರಾಡಿ: ದೇವೆಂದ್ರ ಹೆಗ್ಡೆಯವರ ಮಾತೃಶ್ರೀ ಕೊಡಂಗೆಗುತ್ತು ನೀಲಮ್ಮ ಹೆಗ್ಡೆ ನಿಧನ

Suddi Udaya

ಬಾಂಜಾರು ಮಲೆ ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಬಗ್ಗೆ ಸಾರ್ವಜನಿಕ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ: ವಿಧಾನ ಪರಿಷತ್ ಉಪಚುನಾವಣೆ, ಬೆಳ್ತಂಗಡಿಯಲ್ಲಿ 676 ಮತದಾರರು ಬೆಳ್ತಂಗಡಿಯ 49 ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಪತ್ರಿಕಾಗೋಷ್ಠಿಯಲ್ಲಿ ತಹಿಶೀಲ್ದಾರ್ ಪೃಥ್ವಿ ಸಾನಿಕಾಮ್ ಮಾಹಿತಿ

Suddi Udaya

ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

Suddi Udaya

ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ; ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ

Suddi Udaya
error: Content is protected !!