September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಜೀವ ಬೆದರಿಕೆ ಆರೋಪ : ಕೆ.ಎನ್ ಗೌಡರಿಂದ ಠಾಣೆಗೆ ದೂರು

ಬೆಳ್ತಂಗಡಿ: ನಾಳ ದೇವಾಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ. ಅವರು ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಿ, ಕಳಿಯ ಗ್ರಾಮದ `ದೇವಿ ಕೃಪಾ’ ಪೆಲತ್ತಳಿಕೆ ನಿವಾಸಿ, ಉದಯವಾಣಿ ವರದಿಗಾರ ಕೆ.ಎನ್. ಗೌಡ ಅವರು ಡಿ.10ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಡಿ.3ರಂದು ನಾಳ ದೇವಸ್ಥಾನದಲ್ಲಿ ನಡೆದ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವ ಹಾಗೂ 2027ನೇ ವರ್ಷದಲ್ಲಿ ನಡೆಸಲು ಉದ್ದೇಶಿಸಿರುವ ಸಾರ್ವಜನಿಕ ಮತ್ತು ಭಕ್ತರ ಸಭೆಯಲ್ಲಿ ಊರಿನ ಭಕ್ತನಾಗಿ ಹಾಗೂ ಪತ್ರಿಕೆ ವರದಿಗಾರನಾಗಿ ಭಾಗವಹಿಸಿರುತ್ತೇನೆ. ಅದರಂತೆಯೇ ಅ ದಿನ ಸಭೆಯಲ್ಲಿ ನಡೆದಿರುವ ವಿಷಯವನ್ನು ಅಧರಿಸಿ ನೈಜ ವರದಿಯನ್ನು ಕಳುಹಿಸಿ ಕೊಟ್ಟಿದ್ದು, ಅದು ಉದಯವಾಣಿ ಕನ್ನಡ ದಿನಪತ್ರಿಕೆಯಲ್ಲಿ ಪ್ರಕಟವಾಗಿದೆ. ಪತ್ರಿಕೆಯಲ್ಲಿ ಬಂದ ಬಳಿಕ ಡಿ.9 ರಂದು ಶ್ರೀ ಕ್ಷೇತ್ರದ ವಾಟ್ಸಫ್ ಗ್ರೂಪ್‌ನಿಂದ ನನ್ನ ಮೊಬೈಲ್ ಸಂಖ್ಯೆಯನ್ನು ರಿಮೂವ್ ಮಾಡಿದ್ದನ್ನು ವಿಚಾರಿಸಿದಾಗ ಮೊಬೈಲ್ ಪೋನ್ ಮೂಲಕ ಅವಾಚ್ಯ ಶಬ್ದಗಳಲ್ಲಿ ನಿಂದನೆ ಮಾಡಿ, ವಾಯ್ಸ್ ರೆಕಾರ್ಡ್ ಕಳುಹಿಸಿ, ನನ್ನ ಪತ್ನಿ, ಮಗಳ ವಿಷಯ ಪ್ರಸ್ತಾಪಿಸಿ ಜೀವ ಬೆದರಿಕೆ ಹಾಕಿರುವುದಾಗಿ ಕೆ.ಎನ್ ಗೌಡ ದೂರಿನಲ್ಲಿ ಆರೋಪಿಸಿದ್ದಾರೆ.

Related posts

ಎಸ್.ಐ.ಟಿ ಕಚೇರಿಗೆ ಆಗಮಿಸಿದ ಆಸ್ಪತ್ರೆಯ ವೈದ್ಯರು: ಅಸ್ಥಿಪಂಜರಗಳನ್ನು ಹೊರತೆಗೆಯುವ ಕಾರ್ಯಾಚರಣೆ

Suddi Udaya

ಬಜಿಲ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಗೃಹರಕ್ಷಕದಳ ಘಟಕಾಧಿಕಾರಿ ಜಯಾನಂದರಿಗೆ ‘ಮುಖ್ಯಮಂತ್ರಿ ಚಿನ್ನದ ಪದಕ’

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿ ತೇಜೋವಧೆ: ಮಾಜಿ ಶಾಸಕ ಕೆ.ವಸಂತ ಬಂಗೇರ ಅಭಿಮಾನಿಗಳಿಂದ ಠಾಣೆಗೆ ದೂರು

Suddi Udaya

ಮಚ್ಚಿನ: ಪೆರ್ನಡ್ಕ ನಿವಾಸಿ ದುಗ್ಗಪ್ಪ ಮೂಲ್ಯ ನಿಧನ

Suddi Udaya

ಫೆ.8: ಅಗ್ರಿಲೀಫ್ 2.0 – ‘ರೈತರ ಜೊತೆ ವಿಶ್ವದ ಕಡೆ’ ವಿಸ್ತೃತ ಘಟಕದ ಉದ್ಘಾಟನೆ

Suddi Udaya
error: Content is protected !!