September 6, 2026
ಗ್ರಾಮಾಂತರ ಸುದ್ದಿವರದಿ

ಬಂದಾರು: ಕಳೆದು ಹೋಗಿದ್ದ ರೂ.2.50 ಲಕ್ಷ ಮೌಲ್ಯದ ಚಿನ್ನ ಹಾಗೂ 10 ಸಾವಿರ ನಗದನ್ನು ಹಿಂದುರುಗಿಸಿ ಕೊಟ್ಟು ಮಾನವೀಯ ಮೆರೆದ ವಿನಯ್ ನಿವೇದಿತಾ

ಉಪ್ಪಿನಂಗಡಿ: ಡಿ.10ರಂದು ಬಂದಾರು ಗ್ರಾಮದ ಅಂಡಿಲ ನಿವಾಸಿ ದೀಕ್ಷಾ ರಕ್ಷಿತ್ ರವರ ಕಳೆದು ಹೋಗಿದ್ದ ರೂ.2.50 ಲಕ್ಷ ಮೌಲ್ಯದ ಚಿನ್ನ ಹಾಗೂ 10 ಸಾವಿರ ನಗದು ಇದ್ದ ಪರ್ಸ್ ನ್ನು ಹಿಂದಿರುಗಿಸಿ ಕೊಟ್ಟ ವಿನಯ್ ನಿವೇದಿತಾ ರವರಿಗೆ ದೀಕ್ಷಾ ರಕ್ಷಿತ್ ದಂಪತಿಗಳು ಕೃತಜ್ಞತೆ ಸಲ್ಲಿಸಿ, ಸನ್ಮಾನಿಸಿದರು.

ಘಟನೆ ವಿವರ: ಬಂದಾರು ಗ್ರಾಮದ ಅಂಡಿಲ ನಿವಾಸಿ ರಕ್ಷಿತ್ ಇವರ ಪತ್ನಿ ದೀಕ್ಷಾ ರಕ್ಷಿತ್ ರವರ ರೂ 2.50 ಲಕ್ಷ ಮೌಲ್ಯದ ಚಿನ್ನ ಹಾಗೂ 10 ಸಾವಿರ ನಗದು ಇದ್ದ ಪರ್ಸ್ ಉಪ್ಪಿನಂಗಡಿ ಹೋಟೆಲ್ ನಲ್ಲಿ ಡಿ.10 ರಂದು ಸಂಜೆ ಕೈ ತಪ್ಪಿ ಕಳೆದು ಹೋಗಿದ್ದು, ಮನೆಗೆ ಹೋಗಿ ನೋಡುವಾಗ ಚಿನ್ನ, ನಗದು ಕಳೆದು ಹೋಗಿರುವ ಬಗ್ಗೆ ಅರಿವಾಗುತ್ತದೆ, ತಕ್ಷಣ ತನ್ನ ಸಂಬಂಧಿಕರಲ್ಲಿ ತಿಳಿಸಿ ಪರಿಶೀಲಿಸಿದಾಗ ಯಾರಿಗೆ ಸಿಕ್ಕಿದೆ ಎನ್ನುವುದು ತಿಳಿಯುತ್ತದೆ. ಡಿ.11ರಂದು ಬಜತ್ತೂರು ಗ್ರಾಮದ ವಲಾಲ್ ಬೆದ್ರೂಡಿ ನಿವಾಸಿ ವಿನಯ್ ನಿವೇದಿತಾ ರವರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಭೇಟಿ ನೀಡಿ ವಾರಸುದಾರರಿಗೆ ಚಿನ್ನ, ನಗದು ಹಸ್ತಾಂತರ ಮಾಡಿದರು. ಇವರನ್ನು ದೀಕ್ಷಾ ರಕ್ಷಿತ್ ದಂಪತಿಗಳು ಕೃತಜ್ಞತೆ ಸಲ್ಲಿಸಿ, ಸನ್ಮಾನಿಸಿದರು. ಉಪ್ಪಿನಂಗಡಿ ಪೊಲೀಸ್ ಅಧಿಕಾರಿ ವರ್ಗಕ್ಕೂ ಕೃತಜ್ಞತೆ ಸಲ್ಲಿಸಿದರು.

Related posts

ಅರಸಿನಮಕ್ಕಿ ಧ.ಗ್ರಾ. ಯೋಜನೆಯ ಎ ಮತ್ತು ಬಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆ ದೌರ್ಜನ್ಯ ಮಾಡಿದರೆ ಭಾರತೀಯ ಜನತಾ ಪಾರ್ಟಿ ಸುಮ್ಮನಿರುವುದಿಲ್ಲ: ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರದ ಅಸ್ತಿತ್ವಕ್ಕೆ ಕೊಡಲಿ ಏಟು ಕೊಡುವಂತಹ ಎಡಪಂತೀಯ ವಿಚಾರಧಾರೆಯ ಮಾನಸಿಕತೆಗೆ ಖಂಡನೆ: ಎಸ್.ಐ.ಟಿ ತನಿಖೆಯ ಹಂತದಲ್ಲಿ ಒಬ್ಬ ಜನಪ್ರತಿನಿಧಿಯಾಗಿ ತನಿಖೆಗೆ ತೊಂದರೆ ಆಗಬಾರದೆಂಬ ನಿಟ್ಟಿನಲ್ಲಿ ಯಾವುದೇ ಹೇಳಿಕೆಯನ್ನು ನೀಡಿರಲಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಹೇಳಿಕೆ

Suddi Udaya

ಬೆಳ್ತಂಗಡಿ ಜೆ.ಎಫ್.ಡಿ ಶಂಕರ್ ರಾವ್ ರವರಿಗೆ ಪ್ರೇರಣಾ ಪುರಸ್ಕಾರ-2025

Suddi Udaya

ಮದ್ದಡ್ಕರಾಮನವಮಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿ ಬಂಧನ

Suddi Udaya
error: Content is protected !!