September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬೆಳಗಾವಿ ಅಧಿವೇಶನ: ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ಏಕೆ?: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಈ ಭಾರಿಯ ಬೆಳೆ ವಿಮೆಯ ವಿತರಣೆಯಲ್ಲಿ ಕರಾವಳಿ ಭಾಗದ ಅಡಿಕೆ ಹಾಗೂ ಕರಿಮೆಣಸು ಬೆಳೆಗಾರರಿಗೆ ಅತೀ ಹೆಚ್ಚು ಮಳೆಯಿಂದಾಗಿ ಕೃಷಿಗೆ ಗರಿಷ್ಠ ಮಟ್ಟದ ಹಾನಿ ಉಂಟಾಗಿದ್ದರು ಅತ್ಯಂತ ಕಡಿಮೆ ವಿಮಾ ಪರಿಹಾರ ಬಂದಿದ್ದು ಈ ನಿಟ್ಟಿನಲ್ಲಿ ಸರ್ಕಾರ ಗಮನ ಹರಿಸಿ ರೈತರಿಗೆ ಅನುಕೂಲವಾಗುವಂತೆ ಅತ್ಯಂತ ಹೆಚ್ಚಿನ ಮೊತ್ತದ ಪರಿಹಾರವನ್ನು ಒದಗಿಸುವಂತೆ ಶಾಸಕ ಹರೀಶ್ ಪೂಂಜ ಸರ್ಕಾರವನ್ನು ಸದನದಲ್ಲಿ ಒತ್ತಾಯಿಸಿದರು.

ಇಳಂತಿಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 2023ರಲ್ಲಿ 3,791 ಮಿ.ಮೀ. ಮಳೆ ಬಿದ್ದಿರುವುದಾಗಿ ಮಳೆಮಾಪಕ ಯಂತ್ರದಲ್ಲಿ ದಾಖಲಾಗಿದೆ. 58ಸಾವಿರ ರೂ. ವಿಮೆ ಸಿಕ್ಕಿತ್ತು. 2024ರಲ್ಲಿ 4,876 ಮಿ.ಮೀ. ಮಳೆಯಾಗಿತ್ತಾದರೂ ವಿಮೆ ಪರಿಹಾರ ಸಿಕ್ಕಿದ್ದು ಮಾತ್ರ 25,000 ರೂಪಾಯಿ. ಈ ತಾರತಮ್ಯ ಏಕೆ? ಇದಕ್ಕೆ ಏನು ಮಾನದಂಡ? ಹೆಚ್ಚು ಮಳೆ ಬಿದ್ದರೂ ಕಡಿಮೆ ವಿಮೆ ಪರಿಹಾರ ಏಕೆ? ಅಡಿಕೆ, ಕರಿಮೆಣಸು, ರಬ್ಬರ್‌ ಬೆಳೆಗಾರರಿಗೆ ಇದರಿಂದ ಸಾಕಷ್ಟು ನಷ್ಟ ಆಗುತ್ತಿದೆ ಎಂದು ಗಮನ ಸೆಳೆದರು.

Related posts

ನವೀಕೃತ ಯೂನಿಯನ್ ಬ್ಯಾಂಕ್ ಉಜಿರೆ ಶಾಖೆಯ ಉದ್ಘಾಟನೆ

Suddi Udaya

ಬಟ್ಲಡ್ಕ ಜುಮಾ ಮಸೀದಿ ಉರೂಸ್ ಕಾರ್ಯಕ್ರಮದ 2ನೇ ದಿನ

Suddi Udaya

ರಸ್ತೆ ಬದಿ ವಾಹನಕ್ಕಾಗಿ ತನ್ನ ತಾಯಿ ಜೊತೆ ಕಾಯುತ್ತಿದ್ದ ಪುಟ್ಟ ಬಾಲಕಿ ಸಾತ್ವಿಕಾ ದ್ವಿಚಕ್ರ ವಾಹನ ‌ ಡಿಕ್ಕಿ ಹೊಡೆದು ಗಾಯಗೊಂಡು ಆಸ್ಪತ್ರೆಗೆ

Suddi Udaya

ಮದ್ದಡ್ಕ ನಿವಾಸಿ ಬೆಲ್ಚೆರ್ ಕ್ರಾಸ್ತ ಹೃದಯಾಘಾತದಿಂದ ನಿಧನ

Suddi Udaya

ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ: ಪೆರ್ಲ-ಬೈಪಾಡಿ ಸ.ಪ್ರೌ.ಶಾಲೆಯ ವಿದ್ಯಾರ್ಥಿನಿ ಕು|ನಿತ್ಯಶ್ರೀ ಖಂಡಿಗ 3 ನೇ ಸಮಾಧಾನಕರ ಪ್ರಶಸ್ತಿ

Suddi Udaya

ಪೆರಿಂಜೆ : ರಸಿಕ ಕಂಬಳಿ ನಿಧನ

Suddi Udaya
error: Content is protected !!