23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೆತ್ತವರ ಕ್ರೀಡಾಕೂಟ

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ, ಮಡಂತ್ಯಾರಿನಲ್ಲಿ ಹೆತ್ತವರ ಕ್ರೀಡಾಕೂಟವು ಡಿ.10 ರಂದು ಸೇಕ್ರೆಡ್ ಹಾರ್ಟ್ ಕಾಲೇಜು ಕ್ರೀಡಾಂಗಣದಲ್ಲಿ ನೆರವೇರಿತು.

ಕ್ರೀಡಾಕೂಟದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ|ದೀಪಕ್ ಲಿಯೋ ಡೇಸರವರು ವಹಿಸಿ ಮಾತನಾಡಿ, ಕ್ರೀಡೋತ್ಸವ ಮನಸ್ಸಿಗೆ ಸಂತೋಷವನ್ನು ನೀಡಲಿ. ಸಂತೋಷದಿಂದ ಬಂದಿದ್ದೀರಿ, ಸಂತೋಷದಿಂದ ಆಡಿ. ನಿಮ್ಮ ಜೀವನದಲ್ಲಿ ಅವಿಸ್ಮರಣೀಯ ದಿನವಾಗಲಿ ಎಂದು ಹೇಳಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ರವೀಂದ್ರ ರೈ ಮಾತನಾಡಿ ಇವತ್ತಿನ ಕ್ರೀಡಾಕೂಟ ದ್ವೇಷಕ್ಕೆ ಕಾರಣವಾಗದೆ ಸ್ನೇಹ ಸೌಹಾರ್ದಕ್ಕೆ ಕಾರಣವಾಗಲಿ.ಕ್ರೀಡಾ ಮನೋಭಾವದಿಂದ ಆಡಿ ಪೋಷಕರ ವಾರ್ಷಿಕ ಕೀಡಾ ಕೂಟವನ್ನು ಯಶಸ್ವಿಗೊಳಿಸೋಣ ಎಂದು ಹೇಳಿದರು.

ಹೆತ್ತವರು ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿ ಈ ಕ್ರೀಡಾಕೂಟವನ್ನು ಯಶಸ್ವಿಗೊಳಿಸಿದರು. ಕ್ರೀಡಾಕೂಟದಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ-ರಕ್ಷಕ ಸಂಘದ ಸದಸ್ಯರು, ಹೆತ್ತವರು, ಶಿಕ್ಷಕ-ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ಕ್ರೀಡಾಕೂಟವನ್ನು ಸಹ ಶಿಕ್ಷಕರಾದ ಶ್ರೀ ಜೆರಾಲ್ಡ್ ಡಿಸೋಜ ಮತ್ತು ಶ್ರೀಮತಿ ಐಡ ಡಿಕುನ್ಹ ರವರು ನಿರೂಪಿಸಿ, ಮೇಘಶ್ರೀರವರು ಸ್ವಾಗತಿಸಿ, ವಲೇರಿಯನ್ ಡಿಸೋಜರವರು ಧನ್ಯವಾದವನ್ನು ಸಮರ್ಪಿಸಿದರು.

Related posts

ಜ.13: ಮೊಗ್ರು ಮೂವರು ದೈವಗಳ ದೈವಸ್ಥಾನ ಮುಗೇರಡ್ಕ ಹಾಗೂ ಶ್ರೀ ದುರ್ಗಾನುಗ್ರಹ ಭಜನಾ ಮಂದಿರ ಸಹಭಾಗಿತ್ವದಲ್ಲಿ ಧಾರ್ಮಿಕ ಮತ್ತು ಸಾoಸ್ಕೃತಿಕ ಕಾರ್ಯಕ್ರಮ

Suddi Udaya

ನೂರುಲ್ ಹುಧಾ ದರ್ಸ್ ವಾರ್ಷಿಕ ಹಾಗೂ ಬುರ್ದಾ ಮಜಲಿಸ್ ಸಮಾರಂಭದಲ್ಲಿ ಭೂನ್ಯಾಯ ಮಂಡಳಿಗೆ ನಾಮ ನಿರ್ದೇಶನ ಹೊಂದಿದ ಇಸ್ಮಾಯಿಲ್ ಕೆ ಪೆರಿಂಜೆ ರವರಿಗೆ ಗೌರವಾರ್ಪಣೆ

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ

Suddi Udaya

ಶಿಶಿಲ : ಆಚಾರಿಪಾಲು ನಿವಾಸಿ ಉದ್ಯಮಿ ಸತೀಶ ಗೋಖಲೆ ಕೊಲ್ಕತ್ತದಲ್ಲಿ ನಿಧನ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಞವಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ಉದ್ಘಾಟನೆ

Suddi Udaya

ಬೆಳ್ತಂಗಡಿಯ ಹಲವು ಕಡೆ ಆಲಿಕಲ್ಲು ಮಳೆ

Suddi Udaya
error: Content is protected !!