23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಸ್.ವೈ.ಎಸ್ ಬೆಳ್ತಂಗಡಿ ಝೋನ್ ಮಾದರಿ ಮದುವೆ ಪ್ರಯುಕ್ತ ಡಿ.12 ರಂದು ಜಮಾಅತ್ ಪ್ರತಿನಿಧಿ ಸಂಗಮ

ಬೆಳ್ತಂಗಡಿ: ಮದುವೆಯ ಹೆಸರಿನಲ್ಲಿ ಇಂದು ಹಲವಾರು ಅನಾಚಾರಗಳು ನಡೆಯುತ್ತಿದ್ದು, ಮದುವೆಯನ್ನು ಹೆಚ್ಚು ಭಾರಗೊಳಿಸುವುದರೊಂದಿಗೆ, ಅನಿಸ್ಲಾಮಿಕತೆಗಳಿಂದ ಮದುವೆಯ ಬರಕತ್ತನ್ನು ನೀಗಿಸಲಾಗುತ್ತಿದೆ. ಇದಕ್ಕೊಂದು ಕಡಿವಾಣ ಹಾಕಬೇಕೆಂದುಕೊಂಡು ಎಸ್.ವ್ಯೆ.ಎಸ್ ಕರ್ನಾಟಕ ರಾಜ್ಯ ಸಮಿತಿಯು ‘ಮಾದರಿ ಮದುವೆ: ಶತದಿನ ಅಭಿಯಾನ’ವನ್ನು ಹಮ್ಮಿಗೊಂಡಿದ್ದು. ಆ ಪ್ರಯುಕ್ತ ಎಸ್.ವ್ಯೆ.ಎಸ್ ಬೆಳ್ತಂಗಡಿ ಝೋನ್ ಜಮಾಅತ್ ಪ್ರತಿನಿಧಿಗಳ ಸಂಗಮ ಡಿ12 ರಂದು 3ಗಂಟೆಗೆ ಝೋನ್ ಅಧ್ಯಕ್ಷ ಅಬ್ದುಲ್ ರಹ್ಮಾನ್ ಸಖಾಫಿ ಆಲoದಿಲ ರವರ ಅಧ್ಯಕ್ಷತೆ ಯಲ್ಲಿ ಗುರುವಾಯನಕೆರೆ ಮಸೀದಿ ಹಾಲ್ ನಲ್ಲಿ ನಡೆಯಲಿರುವುದು.

ಅಸ್ಸಯ್ಯದ್ ಇಸ್ಮಾಯಿಲ್ ಅಲ್ ಹಾದಿ ತಂಗಳ್ ಉಜಿರೆ ಕಾರ್ಯಕ್ರಮದ ದುಆ ನೇತ್ರತ್ವವನ್ನು ನೀಡಲಿದ್ದಾರೆ. ಅಸ್ಸಯ್ಯದ್ ಅಬ್ದುಲ್ ರಹ್ಮಾನ್ ಬಾ-ಅಲವಿ ಸಾದಾತ್ ತಂಗಳ್ ಕುಪ್ಪೆಟ್ಟಿ ಉದ್ಘಾಟನೆ ಯೊಂದಿಗೆ ಚಾಲನೆ ನೀಡಲಿದ್ದಾರೆ. ಮತ್ತು
ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಕಾರ್ಯದರ್ಶಿ MSM ಅಬ್ದುಲ್ ರಶೀದ್ ಝ್ಯೆನಿ ಕಾಮಿಲ್ ಸಖಾಫಿ ಮಾದರಿ ಮದುವೆ ಬಗ್ಗೆ ವಿಷಯ ಮಂಡಿಸಲಿದ್ದಾರೆ.

ಬೆಳ್ತಂಗಡಿ ಝೋನ್ ವ್ಯಾಪ್ತಿಯ 60 ಮೊಹಲ್ಲಾ ಗಳಿಂದ ಖತೀಬರು, ಜಮಾಅತ್ ಪ್ರತಿನಿದಿಗಳು ಸೇರಿ ಸುಮಾರು 350ರಷ್ಟು ನಾಯಕರುಗಳು ಭಾಗವಹಿಸಲಿದ್ದಾರೆ. ಎಂದು ಝೋನ್ ಪ್ರಧಾನ ಕಾರ್ಯದರ್ಶಿ ಸಲೀಂ ಕನ್ಯಾಡಿ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Related posts

ಅಳದಂಗಡಿ ಸಿಎ ಬ್ಯಾಂಕಿನಿಂದ ರೂ.25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಜ.31-ಫೆ.4: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಮುಂಡಾಜೆ: ಸೊಮಂತ್ತಡ್ಕ ನಿವಾಸಿ ಸಾವಿತ್ರಿ ನಿಧನ

Suddi Udaya

ಮಚ್ಚಿನ: ನೆತ್ತರ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಮೈಸೂರು ಚಾಮುಂಡೇಶ್ವರಿ ಅಗ್ರಿ ಟೂಲ್ಸ್ ಮಾಲಕ ರಾಜೇಶ್ ದೇವಾಡಿಗ ರಿಂದ ಉಚಿತ ರೈನ್ ಕೋಟ್ ವಿತರಣೆ

Suddi Udaya

ಕುವೆಟ್ಟು ವರಕಬೆ ಸಮೀಪ ರಸ್ತೆಗೆ ತುಂಡಾಗಿ ಬಿದ್ದ ಎಚ್ ಟಿ‌ ಲೈನ್ ವಿದ್ಯುತ್ ವಯರ್: ವಾಹನ ಸಂಚಾರ ಅಸ್ತವ್ಯಸ್ತ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಶರತ್ ಕೃಷ್ಣ ಪಡ್ವೆಟ್ನಾಯ ಭೇಟಿ : ಸಕಲ ಸಿದ್ಧತೆಗಳ ವೀಕ್ಷಣೆ

Suddi Udaya
error: Content is protected !!